Homeಮುಖಪುಟಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಆರ್‌ಜೆಡಿ ಮತ್ತು ಇತರ ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

- Advertisement -
- Advertisement -

ಇಂದು ಬಿಹಾರದಲ್ಲಿ ಮೂರನೇ ಮತ್ತು ಕೊನೆಯ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪಕ್ಷಗಳಿಗೆ ಸ್ಪಷ್ಟ ಬಹುಮತ ಲಭಿಸಲಿವೆ ಎಂದು ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ತಿಳಿಸಿವೆ. ಆರ್‌ಜೆಡಿ ಮತ್ತು ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ ಅವರ ಪಕ್ಷ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಬಹತೇಕ ಎಲ್ಲಾ ಸಮೀಕ್ಷೆಗಳೂ ಹೇಳಿವೆ.

ಟೈಮ್ ನೌ-ಸಿ ಸಮೀಕ್ಷೆ ಪ್ರಕಾರ, ಎನ್‌ಡಿಎಗೆ 116 ಮತ್ತು ಪ್ರತಿಪಕ್ಷದ ಮಹಾಘಟಬಂಧನ್‌ಗೆ 120 ಸ್ಥಾನಗಳಲ್ಲಿ ಗೆಲುವಿನ ಭರವಸೆ ನೀಡಿದ್ದು, ತೇಜಸ್ವಿ ಯಾದವ್ ಮೈತ್ರಿಪಕ್ಷಕ್ಕೆ ಸ್ವಲ್ಪ ಮುನ್ನಡೆ ನೀಡಿದೆ. ಚಿರಾಗ್ ಪಾಸ್ವಾನ್‌ರ ಲೋಕ ತಾಂತ್ರಿಕ್ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಒಂದು ಸ್ಥಾನದಲ್ಲಿ ಗೆಲುವು ಸಿಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ದೇಶದ ರಾಜಕೀಯಕ್ಕೆ ತಿರುವು ನೀಡುವುದೇ ಬಿಹಾರ ಚುನಾವಣೆ?

ರಿಪಬ್ಲಿಕ್ ಟಿವಿ-ಜಾನ್ ಕಿ ಬಾತ್ ಸಮೀಕ್ಷೆ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 118 ರಿಂದ 138 ಸ್ಥಾನಗಳನ್ನು ಮತ್ತು ಆಡಳಿತಾರೂಢ ಎನ್‌ಡಿಎಗೆ 91-117 ಸ್ಥಾನಗಳನ್ನು ನೀಡಿದೆ. ಚಿರಾಗ್ ಪಾಸ್ವಾನ್ ಅವರ ಪಕ್ಷ 5-8 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನವೆಂಬರ್ 10 ರಂದು ಬಿಹಾರದ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ ಯಾವುದೇ ಪಕ್ಷ ಅಥವಾ ಒಕ್ಕೂಟಕ್ಕೆ 122 ಸ್ಥಾನಗಳಲ್ಲಿ ಗೆಲ್ಲುವ ಅಗತ್ಯವಿದೆ.

ರಾಜ್ಯದಲ್ಲಿರುವ ಎಲ್ಲಾ ಪಕ್ಷಗಳು ಚುನಾವಣಾ ಪೂರ್ವದಲ್ಲಿ ಸಾಕಷ್ಟು ಪ್ರಚಾರ ನಡೆಸಿವೆ. ಬಿಜೆಪಿ ಮತ್ತು ನಿತೀಶ್‌ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಮತ್ತು 19 ಲಕ್ಷ ಉದ್ಯೋಗಗನ್ನು ನೀಡುವ ಭರವಸೆ ನೀಡಿದೆ. ಆದರೂ ನಿತೀಶ್‌ ಕುಮಾರ್‌ ಅವರ ಮೇಲೆ ರಾಜ್ಯದ ಜನತೆ ಮುನಿಸಿಕೊಂಡಿರುವಂತೆ ಕಾಣುತ್ತಿದೆ. ಚಿರಾಗ್ ಪಾಸ್ವಾನ್ ಕೂಡ ನಿತೀಶ್‌ ಮೇಲಿನ ಮುನಿಸಿನಿಂದ ಮೈತ್ರಿಯಿಂದ ಹೊರಬಂದು ಅವರ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಇನ್ನು ತೇಜಸ್ವಿ ಯಾದವ್ ನೇತೃತ್ವದ ಕಾಂಗ್ರೆಸ್ ಮತ್ತು ಇತರ ಎಡ ಪಕ್ಷಗಳು ಒಟ್ಟಾಗಿದ್ದು, ಇವರ ಪರವಾದ ಒಲವು ರಾಜ್ಯದಲ್ಲಿ ಎದ್ದು ಕಾಣುತ್ತಿದೆ. ಇದಕ್ಕೆ ಸಾಕ್ಷಿ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಮತ್ತು ಚುನಾವಣಾ ಪೂರ್ವದಲ್ಲಿ ಅವರು ನಡೆಸಿದ ರ್ಯಾಲಿಗಳು. ಹಾಗಾಗಿ ಬಿಹಾರದ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂದು ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...