Homeಮುಖಪುಟಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಆರ್‌ಜೆಡಿ ಮತ್ತು ಇತರ ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

- Advertisement -
- Advertisement -

ಇಂದು ಬಿಹಾರದಲ್ಲಿ ಮೂರನೇ ಮತ್ತು ಕೊನೆಯ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪಕ್ಷಗಳಿಗೆ ಸ್ಪಷ್ಟ ಬಹುಮತ ಲಭಿಸಲಿವೆ ಎಂದು ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ತಿಳಿಸಿವೆ. ಆರ್‌ಜೆಡಿ ಮತ್ತು ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ ಅವರ ಪಕ್ಷ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಬಹತೇಕ ಎಲ್ಲಾ ಸಮೀಕ್ಷೆಗಳೂ ಹೇಳಿವೆ.

ಟೈಮ್ ನೌ-ಸಿ ಸಮೀಕ್ಷೆ ಪ್ರಕಾರ, ಎನ್‌ಡಿಎಗೆ 116 ಮತ್ತು ಪ್ರತಿಪಕ್ಷದ ಮಹಾಘಟಬಂಧನ್‌ಗೆ 120 ಸ್ಥಾನಗಳಲ್ಲಿ ಗೆಲುವಿನ ಭರವಸೆ ನೀಡಿದ್ದು, ತೇಜಸ್ವಿ ಯಾದವ್ ಮೈತ್ರಿಪಕ್ಷಕ್ಕೆ ಸ್ವಲ್ಪ ಮುನ್ನಡೆ ನೀಡಿದೆ. ಚಿರಾಗ್ ಪಾಸ್ವಾನ್‌ರ ಲೋಕ ತಾಂತ್ರಿಕ್ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಒಂದು ಸ್ಥಾನದಲ್ಲಿ ಗೆಲುವು ಸಿಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ದೇಶದ ರಾಜಕೀಯಕ್ಕೆ ತಿರುವು ನೀಡುವುದೇ ಬಿಹಾರ ಚುನಾವಣೆ?

ರಿಪಬ್ಲಿಕ್ ಟಿವಿ-ಜಾನ್ ಕಿ ಬಾತ್ ಸಮೀಕ್ಷೆ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 118 ರಿಂದ 138 ಸ್ಥಾನಗಳನ್ನು ಮತ್ತು ಆಡಳಿತಾರೂಢ ಎನ್‌ಡಿಎಗೆ 91-117 ಸ್ಥಾನಗಳನ್ನು ನೀಡಿದೆ. ಚಿರಾಗ್ ಪಾಸ್ವಾನ್ ಅವರ ಪಕ್ಷ 5-8 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನವೆಂಬರ್ 10 ರಂದು ಬಿಹಾರದ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ ಯಾವುದೇ ಪಕ್ಷ ಅಥವಾ ಒಕ್ಕೂಟಕ್ಕೆ 122 ಸ್ಥಾನಗಳಲ್ಲಿ ಗೆಲ್ಲುವ ಅಗತ್ಯವಿದೆ.

ರಾಜ್ಯದಲ್ಲಿರುವ ಎಲ್ಲಾ ಪಕ್ಷಗಳು ಚುನಾವಣಾ ಪೂರ್ವದಲ್ಲಿ ಸಾಕಷ್ಟು ಪ್ರಚಾರ ನಡೆಸಿವೆ. ಬಿಜೆಪಿ ಮತ್ತು ನಿತೀಶ್‌ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಮತ್ತು 19 ಲಕ್ಷ ಉದ್ಯೋಗಗನ್ನು ನೀಡುವ ಭರವಸೆ ನೀಡಿದೆ. ಆದರೂ ನಿತೀಶ್‌ ಕುಮಾರ್‌ ಅವರ ಮೇಲೆ ರಾಜ್ಯದ ಜನತೆ ಮುನಿಸಿಕೊಂಡಿರುವಂತೆ ಕಾಣುತ್ತಿದೆ. ಚಿರಾಗ್ ಪಾಸ್ವಾನ್ ಕೂಡ ನಿತೀಶ್‌ ಮೇಲಿನ ಮುನಿಸಿನಿಂದ ಮೈತ್ರಿಯಿಂದ ಹೊರಬಂದು ಅವರ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಇನ್ನು ತೇಜಸ್ವಿ ಯಾದವ್ ನೇತೃತ್ವದ ಕಾಂಗ್ರೆಸ್ ಮತ್ತು ಇತರ ಎಡ ಪಕ್ಷಗಳು ಒಟ್ಟಾಗಿದ್ದು, ಇವರ ಪರವಾದ ಒಲವು ರಾಜ್ಯದಲ್ಲಿ ಎದ್ದು ಕಾಣುತ್ತಿದೆ. ಇದಕ್ಕೆ ಸಾಕ್ಷಿ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಮತ್ತು ಚುನಾವಣಾ ಪೂರ್ವದಲ್ಲಿ ಅವರು ನಡೆಸಿದ ರ್ಯಾಲಿಗಳು. ಹಾಗಾಗಿ ಬಿಹಾರದ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂದು ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...