Homeಮುಖಪುಟಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಆರ್‌ಜೆಡಿ ಮತ್ತು ಇತರ ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

- Advertisement -
- Advertisement -

ಇಂದು ಬಿಹಾರದಲ್ಲಿ ಮೂರನೇ ಮತ್ತು ಕೊನೆಯ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪಕ್ಷಗಳಿಗೆ ಸ್ಪಷ್ಟ ಬಹುಮತ ಲಭಿಸಲಿವೆ ಎಂದು ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ತಿಳಿಸಿವೆ. ಆರ್‌ಜೆಡಿ ಮತ್ತು ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ ಅವರ ಪಕ್ಷ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಬಹತೇಕ ಎಲ್ಲಾ ಸಮೀಕ್ಷೆಗಳೂ ಹೇಳಿವೆ.

ಟೈಮ್ ನೌ-ಸಿ ಸಮೀಕ್ಷೆ ಪ್ರಕಾರ, ಎನ್‌ಡಿಎಗೆ 116 ಮತ್ತು ಪ್ರತಿಪಕ್ಷದ ಮಹಾಘಟಬಂಧನ್‌ಗೆ 120 ಸ್ಥಾನಗಳಲ್ಲಿ ಗೆಲುವಿನ ಭರವಸೆ ನೀಡಿದ್ದು, ತೇಜಸ್ವಿ ಯಾದವ್ ಮೈತ್ರಿಪಕ್ಷಕ್ಕೆ ಸ್ವಲ್ಪ ಮುನ್ನಡೆ ನೀಡಿದೆ. ಚಿರಾಗ್ ಪಾಸ್ವಾನ್‌ರ ಲೋಕ ತಾಂತ್ರಿಕ್ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಒಂದು ಸ್ಥಾನದಲ್ಲಿ ಗೆಲುವು ಸಿಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ದೇಶದ ರಾಜಕೀಯಕ್ಕೆ ತಿರುವು ನೀಡುವುದೇ ಬಿಹಾರ ಚುನಾವಣೆ?

ರಿಪಬ್ಲಿಕ್ ಟಿವಿ-ಜಾನ್ ಕಿ ಬಾತ್ ಸಮೀಕ್ಷೆ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 118 ರಿಂದ 138 ಸ್ಥಾನಗಳನ್ನು ಮತ್ತು ಆಡಳಿತಾರೂಢ ಎನ್‌ಡಿಎಗೆ 91-117 ಸ್ಥಾನಗಳನ್ನು ನೀಡಿದೆ. ಚಿರಾಗ್ ಪಾಸ್ವಾನ್ ಅವರ ಪಕ್ಷ 5-8 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನವೆಂಬರ್ 10 ರಂದು ಬಿಹಾರದ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ ಯಾವುದೇ ಪಕ್ಷ ಅಥವಾ ಒಕ್ಕೂಟಕ್ಕೆ 122 ಸ್ಥಾನಗಳಲ್ಲಿ ಗೆಲ್ಲುವ ಅಗತ್ಯವಿದೆ.

ರಾಜ್ಯದಲ್ಲಿರುವ ಎಲ್ಲಾ ಪಕ್ಷಗಳು ಚುನಾವಣಾ ಪೂರ್ವದಲ್ಲಿ ಸಾಕಷ್ಟು ಪ್ರಚಾರ ನಡೆಸಿವೆ. ಬಿಜೆಪಿ ಮತ್ತು ನಿತೀಶ್‌ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಮತ್ತು 19 ಲಕ್ಷ ಉದ್ಯೋಗಗನ್ನು ನೀಡುವ ಭರವಸೆ ನೀಡಿದೆ. ಆದರೂ ನಿತೀಶ್‌ ಕುಮಾರ್‌ ಅವರ ಮೇಲೆ ರಾಜ್ಯದ ಜನತೆ ಮುನಿಸಿಕೊಂಡಿರುವಂತೆ ಕಾಣುತ್ತಿದೆ. ಚಿರಾಗ್ ಪಾಸ್ವಾನ್ ಕೂಡ ನಿತೀಶ್‌ ಮೇಲಿನ ಮುನಿಸಿನಿಂದ ಮೈತ್ರಿಯಿಂದ ಹೊರಬಂದು ಅವರ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಇನ್ನು ತೇಜಸ್ವಿ ಯಾದವ್ ನೇತೃತ್ವದ ಕಾಂಗ್ರೆಸ್ ಮತ್ತು ಇತರ ಎಡ ಪಕ್ಷಗಳು ಒಟ್ಟಾಗಿದ್ದು, ಇವರ ಪರವಾದ ಒಲವು ರಾಜ್ಯದಲ್ಲಿ ಎದ್ದು ಕಾಣುತ್ತಿದೆ. ಇದಕ್ಕೆ ಸಾಕ್ಷಿ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಮತ್ತು ಚುನಾವಣಾ ಪೂರ್ವದಲ್ಲಿ ಅವರು ನಡೆಸಿದ ರ್ಯಾಲಿಗಳು. ಹಾಗಾಗಿ ಬಿಹಾರದ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂದು ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...