Homeಮುಖಪುಟಬಿಹಾರ: ಅಂತಿಮ ಹಂತದ ಚುನಾವಣೆ - 78 ಕ್ಷೇತ್ರಗಳಲ್ಲಿ ಶೇ.56ರಷ್ಟು ಮತದಾನ

ಬಿಹಾರ: ಅಂತಿಮ ಹಂತದ ಚುನಾವಣೆ – 78 ಕ್ಷೇತ್ರಗಳಲ್ಲಿ ಶೇ.56ರಷ್ಟು ಮತದಾನ

- Advertisement -
ಬಿಹಾರ ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು ಸಂಜೆ 5 ಗಂಟೆ ವೇಳೆಗೆ ಶೇ.52.80ರಷ್ಟು ಮತದಾನವಾಗಿದೆ. 78 ಕ್ಷೇತ್ರಗಳ 1204 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ದಾಖಲಾಗಿದೆ.
ರಾಜ್ಯದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಈ 78 ಕ್ಷೇತ್ರಗಳು ಅತಿ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದವು. ಈ ಕ್ಷೇತ್ರಗಳಲ್ಲಿ ಆರ್.ಜೆ.ಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮತ್ತು ಬಿಜೆಪಿ-ಜೆಡಿಯು ನೇತೃತ್ವದ ಎನ್.ಡಿ.ಎ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದು ಮತದಾರರು ನೀಡುವ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಕೋಸಿ, ಮಿಥಿಲ, ತೀರ್ ಹತ್ ವಲಯದ 78 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಈ ಅಂತಿಮ ಹಂತದ ಚುನಾವಣೆಯಲ್ಲಿ ಹಾಲಿ ಸರ್ಕಾರದ 12 ಮಂದಿ ಸಚಿವರು ಸ್ಪರ್ಧೆಗಿಳಿದಿರುವುದು ಮುಖ್ಯ ವಿಷಯವಾಗಿದ್ದು ಮತದಾರ ಯಾರಿಗೆ ಮಣೆಹಾಕುತ್ತಾರೆ ಎಂಬುದನ್ನು ನೋಡಬೇಕಾಗಿದೆ.
ಸೀಮಾಂಚಲ ವಲಯವು ಮುಸ್ಲೀಂ ಬಾಹುಳ್ಯದ ಕ್ಷೇತ್ರಗಳಾಗಿದ್ದು ಎಐಎಂಐಎಂ ಮತ್ತು ಇತರೆ ಸಣ್ಣ ಪಕ್ಷಗಳು ಮಾಡಿಕೊಂಡಿರುವ ಜಾತ್ಯತೀತವಾದಿ ಘಟಬಂಧನ್‌ಗೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಾಜಿ ಸಿಎಂ ಲಾಲೂ ಅವರನ್ನು ಗುರಿಮಾಡಿಕೊಂಡು ದಾಳಿ ನಡೆಸಿದ್ದರು. ಲಾಲೂ ಅವಧಿಯಲ್ಲಿ ಜಂಗಲ್ ರಾಜ್ ಆಗಿತ್ತು ಎಂದು ನಿತೀಶ್ ಆರೋಪ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಮಂಗಲ್ ರಾಜ್ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದರು. ಭಾರತ್ ಮಾತಾಕಿ ಜೈ ಮತ್ತು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುವಂತೆ ಕಾರ್ಯಕರ್ತರನ್ನು ಪ್ರೇರೇಪಿಸಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಬಿಹಾರಕ್ಕೆ ನುಸುಳುಕೋರರು ನುಸುಳಿದ್ದಾರೆ. ಅವರನ್ನು ಹೊರಹಾಕಲು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು. ಇದು ಕಾವೇರಿದ ಚರ್ಚೆಗೂ ಕಾರಣವಾಗಿತ್ತು.
ಮಹಾಘಟಬಂಧನ್ ನೇತೃತ್ವ ವಹಿಸಿರುವ ತೇಜಸ್ವಿ ಯಾದವ್ ಇಲ್ಲಿನ ಜನ ಹೊರಗಿನವರಿಗೆ ಆಡಳಿತ ನಡೆಸಲು ಬಿಡುವುದಿಲ್ಲ. ನಿತೀಶ್ ಕುಮಾರ್ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದೆ. ಜನ ಅವರನ್ನು ತಿರಸ್ಕರಿಸುತ್ತಾರೆ. ಬಿಜೆಪಿ ಮತ್ತು ಜೆಡಿಯು ನಡುವೆ ಸಾಕಷ್ಟು ಭಿನ್ನಮತ ಉದ್ಭವಿಸಿದೆ. ಬಿಜೆಪಿ ನೀಡಿರುವ ಜಾಹಿರಾತುಗಳಲ್ಲಿ ನಿತೀಶ್ ಕುಮಾರ್ ಭಾವಚಿತ್ರವಿಲ್ಲ ಎಂದು ಜನರ ಗಮನ ಸೆಳೆದಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...