Homeಮುಖಪುಟಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಮಂಗಳವಾರ (ಸೆ.30) ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವರ್ಷದ ಜೂನ್ 24ರ ವೇಳೆಗೆ 7.89 ಕೋಟಿ ಇದ್ದ ಬಿಹಾರದ ಒಟ್ಟು ಮತದಾರ ಸಂಖ್ಯೆ, ಎಸ್‌ಐಆರ್‌ ಬಳಿಕ 7.42 ಕೋಟಿಗೆ ಇಳಿದಿದೆ. ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯ ಪ್ರಕಾರ 65 ಲಕ್ಷ ಮತದಾರರನ್ನು  ಪಟ್ಟಿಯಿಂದ ಕೈಬಿಡಲಾಗಿದೆ.

ಎಸ್‌ಐಆರ್ ಬಳಿಕ ಆಗಸ್ಟ್ 1, 2025ರಂದು ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ 7.24 ಕೋಟಿ ಮತದಾರರಿದ್ದರು. ಇವರಲ್ಲಿ 3.66 ಲಕ್ಷ ಅನರ್ಹ ಮತದಾರರನ್ನು ಕೈಬಿಡಲಾಗಿದೆ. ಮತ್ತು 21.53 ಲಕ್ಷ ಅರ್ಹ ಮತದಾರರನ್ನು ಫಾರ್ಮ್ 6 ಬಳಸಿ ಸೇರಿಸಲಾಗಿದೆ. ಇದರಿಂದಾಗಿ ಅಂತಿಮ ಮತದಾರರ ಸಂಖ್ಯೆ 7.42 ಕೋಟಿ ಆಗಿದೆ.

ಎಸ್‌ಐಆರ್ ಪ್ರಕ್ರಿಯೆ ಸಂಕೀರ್ಣವಾಗಿತ್ತು. ಇದಕ್ಕಾಗಿ ಇದರಲ್ಲಿ ಭಾಗಿಯಾಗಿದ್ದ ಎಲ್ಲಾ ಪಕ್ಷಗಳು, ಮತದಾರರು ಮತ್ತು ಇತರ ಪ್ರಮುಖ ಪಾಲುದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಈ ನಡುವೆ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ನಂತರ, ವಿರೋಧ ಪಕ್ಷಗಳಿಂದ ಚುನಾವಣಾ ಆಯೋಗದ ವಿರುದ್ದ ಮೌಖಿಕ ದಾಳಿ ಮತ್ತು ಟೀಕೆಗಳು ಕೇಳಿ ಬಂದಿವೆ.

4.6 ಲಕ್ಷ ಹೊಸ ಮತದಾರರು ಹೇಗೆ ಸೇರ್ಪಡೆಯಾದರು? ಯೋಗೇಂದ್ರ ಯಾದವ್ ಪ್ರಶ್ನೆ

ಅಂತಿಮ ಪಟ್ಟಿಗೆ 4.6 ಲಕ್ಷ ಹೊಸ ಮತದಾರರನ್ನು ಹೇಗೆ ಸೇರಿಸಲಾಗಿದೆ ಎಂದು ಯೋಗೇಂದ್ರ ಯಾದವ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗದ ಪ್ರಕಾರ, ಸೆಪ್ಟೆಂಬರ್ 1ರವರೆಗೆ ಸ್ವೀಕರಿಸಿದ ಹೊಸ ಫಾರ್ಮ್ -6 ಸಂಖ್ಯೆ 16.93 ಲಕ್ಷ. ನಂತರ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಹೀಗಿರುವಾಗ ಚುನಾವಣಾ ಆಯೋಗ ಒಟ್ಟು 21.53 ಲಕ್ಷ ಮತದಾರರನ್ನು ಸೇರ್ಪಡೆಗೊಳಿಸಿರುವುದು ಹೇಗೆ? ಸೆಪ್ಟೆಂಬರ್ 1ರ ನಂತರ ಅಂತಿಮ ಪಟ್ಟಿಗೆ ಕನಿಷ್ಠ 4.6 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದು ಹೇಗೆ? ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಯೋಗೇಂದ್ರ ಯಾದವ್ ಕೇಳಿದ್ದಾರೆ. 

ಅಂತಿಮ ಪಟ್ಟಿಯಲ್ಲಿ ಬಡವರು, ದಲಿತರ ಹೆಸರು ಸೇರಿಸಿಲ್ಲ- ಪ್ರತಿಪಕ್ಷಗಳ ಆರೋಪ

ಕಾಂಗ್ರೆಸ್ ಪಕ್ಷವು ಅಂತಿಮ ಮತದಾರರ ಪಟ್ಟಿಯನ್ನು ತೀವ್ರವಾಗಿ ಟೀಕಿಸಿದೆ. ಎಸ್‌ಐಆರ್ ಅನ್ಯಾಯ ಮತ್ತು ಪಾರದರ್ಶಕತೆ ಕೊರತೆಯಿಂದ ಕೂಡಿದೆ ಎಂದಿದೆ.

ಎಸ್‌ಐಆಎರ್ ಪ್ರಕ್ರಿಯೆಯು ಆರಂಭದಿಂದಲೂ ದೋಷಪೂರಿತವಾಗಿದೆ. ಆದರೂ ಚುನಾವಣಾ ಆಯೋಗ ಎಸ್‌ಐಆರ್ ಯಶಸ್ವಿಯಾಗಿದೆ ಎಂದು ಘೋಷಿಸಿದೆ. 68 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಮತ್ತು ಕೇವಲ 21.53 ಲಕ್ಷ ಹೆಸರುಗಳನ್ನು ಮಾತ್ರ ಸೇರಿಸಲಾಗಿದೆ. ಜನರ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್ ಹೇಳಿದ್ದಾರೆ.

ನಮ್ಮ ಶತ ಪ್ರಯತ್ನಗಳ ಹೊರತಾಗಿಯೂ ಬಡವರು, ದಲಿತರು, ಅತ್ಯಂತ ಹಿಂದುಳಿದವರು ಮತ್ತು ಹಿಂದುಳಿದ ವರ್ಗಗಳ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 10,000 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಕ್ತಾರ ಶಕ್ತಿ ಸಿಂಗ್ ಯಾದವ್ ತಿಳಿಸಿದ್ದಾರೆ.

ಮತಗಳ್ಳತನ ಆರೋಪಗಳಿಗೆ ಸೂಕ್ತ ಉತ್ತರ- ಎನ್‌ಡಿಎ

ಬಿಜೆಪಿ ವಕ್ತಾರ ಪ್ರಭಾಕರ್ ಮಿಶ್ರಾ ಅವರು ವಿರೋಧ ಪಕ್ಷದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ಅಂತಿಮ ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಇದು ಮತಗಳ್ಳತನದ ಆರೋಪ ಮಾಡಿದ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರವಾಗಿದೆ” ಎಂದು ಹೇಳಿದ್ದಾರೆ. 

ಜೆಡಿಯು ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಮಾತನಾಡಿ, 21.53 ಲಕ್ಷ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಅದರಲ್ಲಿ ಹೆಚ್ಚಿನವು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿ) ಮತ್ತು ದಲಿತ ಸಮುದಾಯಗಳಿಗೆ ಸೇರಿದವಾಗಿವೆ. ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಯ ‘ಮತ ಕಳ್ಳತನ’ ಆರೋಪಗಳಿಗೆ ಚುನಾವಣಾ ಆಯೋಗದ ಅಂತಿಮ ಪಟ್ಟಿಯು ಸರಿಯಾದ ಪ್ರತಿಕ್ರಿಯೆ ನೀಡಿದೆ ಎಂದಿದ್ದಾರೆ.

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...