Homeಮುಖಪುಟಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಮಂಗಳವಾರ (ಸೆ.30) ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವರ್ಷದ ಜೂನ್ 24ರ ವೇಳೆಗೆ 7.89 ಕೋಟಿ ಇದ್ದ ಬಿಹಾರದ ಒಟ್ಟು ಮತದಾರ ಸಂಖ್ಯೆ, ಎಸ್‌ಐಆರ್‌ ಬಳಿಕ 7.42 ಕೋಟಿಗೆ ಇಳಿದಿದೆ. ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯ ಪ್ರಕಾರ 65 ಲಕ್ಷ ಮತದಾರರನ್ನು  ಪಟ್ಟಿಯಿಂದ ಕೈಬಿಡಲಾಗಿದೆ.

ಎಸ್‌ಐಆರ್ ಬಳಿಕ ಆಗಸ್ಟ್ 1, 2025ರಂದು ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ 7.24 ಕೋಟಿ ಮತದಾರರಿದ್ದರು. ಇವರಲ್ಲಿ 3.66 ಲಕ್ಷ ಅನರ್ಹ ಮತದಾರರನ್ನು ಕೈಬಿಡಲಾಗಿದೆ. ಮತ್ತು 21.53 ಲಕ್ಷ ಅರ್ಹ ಮತದಾರರನ್ನು ಫಾರ್ಮ್ 6 ಬಳಸಿ ಸೇರಿಸಲಾಗಿದೆ. ಇದರಿಂದಾಗಿ ಅಂತಿಮ ಮತದಾರರ ಸಂಖ್ಯೆ 7.42 ಕೋಟಿ ಆಗಿದೆ.

ಎಸ್‌ಐಆರ್ ಪ್ರಕ್ರಿಯೆ ಸಂಕೀರ್ಣವಾಗಿತ್ತು. ಇದಕ್ಕಾಗಿ ಇದರಲ್ಲಿ ಭಾಗಿಯಾಗಿದ್ದ ಎಲ್ಲಾ ಪಕ್ಷಗಳು, ಮತದಾರರು ಮತ್ತು ಇತರ ಪ್ರಮುಖ ಪಾಲುದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಈ ನಡುವೆ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ನಂತರ, ವಿರೋಧ ಪಕ್ಷಗಳಿಂದ ಚುನಾವಣಾ ಆಯೋಗದ ವಿರುದ್ದ ಮೌಖಿಕ ದಾಳಿ ಮತ್ತು ಟೀಕೆಗಳು ಕೇಳಿ ಬಂದಿವೆ.

4.6 ಲಕ್ಷ ಹೊಸ ಮತದಾರರು ಹೇಗೆ ಸೇರ್ಪಡೆಯಾದರು? ಯೋಗೇಂದ್ರ ಯಾದವ್ ಪ್ರಶ್ನೆ

ಅಂತಿಮ ಪಟ್ಟಿಗೆ 4.6 ಲಕ್ಷ ಹೊಸ ಮತದಾರರನ್ನು ಹೇಗೆ ಸೇರಿಸಲಾಗಿದೆ ಎಂದು ಯೋಗೇಂದ್ರ ಯಾದವ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗದ ಪ್ರಕಾರ, ಸೆಪ್ಟೆಂಬರ್ 1ರವರೆಗೆ ಸ್ವೀಕರಿಸಿದ ಹೊಸ ಫಾರ್ಮ್ -6 ಸಂಖ್ಯೆ 16.93 ಲಕ್ಷ. ನಂತರ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಹೀಗಿರುವಾಗ ಚುನಾವಣಾ ಆಯೋಗ ಒಟ್ಟು 21.53 ಲಕ್ಷ ಮತದಾರರನ್ನು ಸೇರ್ಪಡೆಗೊಳಿಸಿರುವುದು ಹೇಗೆ? ಸೆಪ್ಟೆಂಬರ್ 1ರ ನಂತರ ಅಂತಿಮ ಪಟ್ಟಿಗೆ ಕನಿಷ್ಠ 4.6 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದು ಹೇಗೆ? ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಯೋಗೇಂದ್ರ ಯಾದವ್ ಕೇಳಿದ್ದಾರೆ. 

ಅಂತಿಮ ಪಟ್ಟಿಯಲ್ಲಿ ಬಡವರು, ದಲಿತರ ಹೆಸರು ಸೇರಿಸಿಲ್ಲ- ಪ್ರತಿಪಕ್ಷಗಳ ಆರೋಪ

ಕಾಂಗ್ರೆಸ್ ಪಕ್ಷವು ಅಂತಿಮ ಮತದಾರರ ಪಟ್ಟಿಯನ್ನು ತೀವ್ರವಾಗಿ ಟೀಕಿಸಿದೆ. ಎಸ್‌ಐಆರ್ ಅನ್ಯಾಯ ಮತ್ತು ಪಾರದರ್ಶಕತೆ ಕೊರತೆಯಿಂದ ಕೂಡಿದೆ ಎಂದಿದೆ.

ಎಸ್‌ಐಆಎರ್ ಪ್ರಕ್ರಿಯೆಯು ಆರಂಭದಿಂದಲೂ ದೋಷಪೂರಿತವಾಗಿದೆ. ಆದರೂ ಚುನಾವಣಾ ಆಯೋಗ ಎಸ್‌ಐಆರ್ ಯಶಸ್ವಿಯಾಗಿದೆ ಎಂದು ಘೋಷಿಸಿದೆ. 68 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಮತ್ತು ಕೇವಲ 21.53 ಲಕ್ಷ ಹೆಸರುಗಳನ್ನು ಮಾತ್ರ ಸೇರಿಸಲಾಗಿದೆ. ಜನರ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್ ಹೇಳಿದ್ದಾರೆ.

ನಮ್ಮ ಶತ ಪ್ರಯತ್ನಗಳ ಹೊರತಾಗಿಯೂ ಬಡವರು, ದಲಿತರು, ಅತ್ಯಂತ ಹಿಂದುಳಿದವರು ಮತ್ತು ಹಿಂದುಳಿದ ವರ್ಗಗಳ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 10,000 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಕ್ತಾರ ಶಕ್ತಿ ಸಿಂಗ್ ಯಾದವ್ ತಿಳಿಸಿದ್ದಾರೆ.

ಮತಗಳ್ಳತನ ಆರೋಪಗಳಿಗೆ ಸೂಕ್ತ ಉತ್ತರ- ಎನ್‌ಡಿಎ

ಬಿಜೆಪಿ ವಕ್ತಾರ ಪ್ರಭಾಕರ್ ಮಿಶ್ರಾ ಅವರು ವಿರೋಧ ಪಕ್ಷದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ಅಂತಿಮ ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಇದು ಮತಗಳ್ಳತನದ ಆರೋಪ ಮಾಡಿದ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರವಾಗಿದೆ” ಎಂದು ಹೇಳಿದ್ದಾರೆ. 

ಜೆಡಿಯು ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಮಾತನಾಡಿ, 21.53 ಲಕ್ಷ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಅದರಲ್ಲಿ ಹೆಚ್ಚಿನವು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿ) ಮತ್ತು ದಲಿತ ಸಮುದಾಯಗಳಿಗೆ ಸೇರಿದವಾಗಿವೆ. ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಯ ‘ಮತ ಕಳ್ಳತನ’ ಆರೋಪಗಳಿಗೆ ಚುನಾವಣಾ ಆಯೋಗದ ಅಂತಿಮ ಪಟ್ಟಿಯು ಸರಿಯಾದ ಪ್ರತಿಕ್ರಿಯೆ ನೀಡಿದೆ ಎಂದಿದ್ದಾರೆ.

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...