Homeಮುಖಪುಟಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

- Advertisement -
- Advertisement -

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ ಆಘಾತ ನಿಡಿದೆ.

ಮತ ಚಲಾಯಿಸದವರಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಶಾಸಕ ಫೈಸಲ್ ರೆಹಮಾನ್ ಮತ್ತು ಮೂವರು ಕಾಂಗ್ರೆಸ್ ಶಾಸಕರಾದ ಮನೋಹರ್ ಪ್ರಸಾದ್, ಸುರೇಂದ್ರ ಕುಶ್ವಾಹ ಮತ್ತು ಮನೋಜ್ ಬಿಸ್ವಾಸ್ ಸೇರಿದ್ದಾರೆ.

ಮತದಾನ ಮುಂದುವರೆದಂತೆ ಮೂವರು ಕಾಂಗ್ರೆಸ್ ಶಾಸಕರು ದಿನವಿಡೀ ಪಕ್ಷದೊಂದಿಗೆ ಸಂಪರ್ಕದಿಂದ ಹೊರಗಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಶಾಸಕರ ಫೋನ್‌ಗಳು ಸ್ವಿಚ್ ಆಫ್ ಆಗಿದ್ದವು. ಅವರ ಈ ನಡೆಯು ವಿರೋಧ ಪಕ್ಷದ ಬಣದೊಳಗೆ ಕಳವಳವನ್ನುಂಟುಮಾಡಿತು.

ನಾಲ್ವರು ಶಾಸಕರ ಅನುಪಸ್ಥಿತಿಯು ನಿರ್ಣಾಯಕ ಕ್ಷಣದಲ್ಲಿ ಬಂದಿತು. ಐದನೇ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಇಮಡಿಯಾ ಬಣ ನೇರ ಸ್ಪರ್ಧೆಯಲ್ಲಿ ಸಿಲುಕಿದೆ.

ಜೆಡಿ(ಯು) ನಾಯಕರಾದ ನಿತೀಶ್ ಕುಮಾರ್ ಮತ್ತು ರಾಮನಾಥ್ ಠಾಕೂರ್, ಬಿಜೆಪಿಯ ನಿತಿನ್ ನಬಿನ್ ಮತ್ತು ಶಿವಂ ಕುಮಾರ್ ಅವರ ಗೆಲುವು ಖಚಿತವೆಂದು ಪರಿಗಣಿಸಲಾಗಿದ್ದರೂ, ಅಂತಿಮ ಸ್ಥಾನಕ್ಕೆ ನಡೆಯುವ ಹೋರಾಟವು ಎನ್‌ಡಿಎ ಅಭ್ಯರ್ಥಿ ಉಪೇಂದ್ರ ಕುಶ್ವಾಹ ಮತ್ತು ಮಹಾಘಟಬಂಧನ್ ಅಭ್ಯರ್ಥಿ ಎ.ಡಿ. ಸಿಂಗ್ ನಡುವೆ ತೀವ್ರ ಪೈಪೋಟಿಯಾಗಿ ಮಾರ್ಪಟ್ಟಿದೆ.

ಎನ್‌ಡಿಎಗೆ ಸೇರಿದ ಎಲ್ಲಾ 202 ಶಾಸಕರು ಈಗಾಗಲೇ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ನಾಲ್ವರು ಶಾಸಕರು ಮತದಾನಕ್ಕೆ ಹಾಜರಾಗದ ಕಾರಣ ಮಹಾಘಟಬಂಧನ್‌ನ ಮತ ಎಣಿಕೆ 37 ರಲ್ಲೇ ಉಳಿದಿದೆ.

243 ಸದಸ್ಯರ ವಿಧಾನಸಭೆಯಲ್ಲಿ 35 ಶಾಸಕರನ್ನು ಹೊಂದಿರುವ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಗೆಲುವು ಖಚಿತಪಡಿಸಿಕೊಳ್ಳಲು ಕನಿಷ್ಠ 41 ಶಾಸಕರ ಬೆಂಬಲ ಅಗತ್ಯವಿತ್ತು. ಮೈತ್ರಿಕೂಟವು ಐದು ಎಐಎಂಐಎಂ ಶಾಸಕರ ಬೆಂಬಲವನ್ನು ಪಡೆದುಕೊಂಡಿತ್ತು. ಬಿಎಸ್‌ಪಿ ಶಾಸಕರ ಬೆಂಬಲವನ್ನು ಸಹ ನಿರೀಕ್ಷಿಸುತ್ತಿತ್ತು.

ಕುಶ್ವಾಹ ಗೆಲ್ಲಲು, ಎನ್‌ಡಿಎಗೆ ಮಹಾಘಟಬಂಧನ್‌ನ ಕನಿಷ್ಠ ಮೂವರು ಶಾಸಕರ ಮತಗಳು ಬೇಕಾಗಿದ್ದವು. ಈ ಸಂದರ್ಭದಲ್ಲಿ, ವಾಲ್ಮೀಕಿನಗರದ ಸುರೇಂದ್ರ ಕುಶ್ವಾಹ, ಫೋರ್ಬ್ಸ್‌ಗಂಜ್‌ನ ಮನೋಜ್ ಬಿಸ್ವಾಸ್ ಮತ್ತು ಮಣಿಹರಿಯ ಮನೋಹರ್ ಪ್ರಸಾದ್ ಎಂಬ ಮೂವರು ಕಾಂಗ್ರೆಸ್ ಶಾಸಕರ ವಿವರಣೆಯಿಲ್ಲದ ಅನುಪಸ್ಥಿತಿಯು ಮಹತ್ವ ಪಡೆದುಕೊಂಡಿತು.

ಚುನಾವಣೆಗೆ ಮುನ್ನ, ಅಕ್ರಮ ಕುದುರೆವ್ಯಾಪಾರ ಪ್ರಯತ್ನಗಳನ್ನು ತಡೆಗಟ್ಟಲು ಮಹಾ ಮೈತ್ರಿಕೂಟವು ತನ್ನ ಶಾಸಕರನ್ನು ಪಾಟ್ನಾದ ಹೋಟೆಲ್‌ನಲ್ಲಿ ಇರಿಸಿತ್ತು. ಈ ಮಧ್ಯೆ, ಎನ್‌ಡಿಎ ಭಾನುವಾರ ರಾಜ್ಯ ರಾಜಧಾನಿಯಲ್ಲಿ ಸಚಿವರು ಮತ್ತು ಹಿರಿಯ ನಾಯಕರ ನಿವಾಸಗಳಲ್ಲಿ ತನ್ನ ಶಾಸಕರೊಂದಿಗೆ ಸಭೆಗಳನ್ನು ನಡೆಸಿತು.

243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ, ಎನ್‌ಡಿಎ 202 ಶಾಸಕರೊಂದಿಗೆ ಆರಾಮದಾಯಕ ಬಹುಮತವನ್ನು ಹೊಂದಿದೆ. ಆದರೂ ಐದು ರಾಜ್ಯಸಭಾ ಸ್ಥಾನಗಳನ್ನು ಪಡೆಯಲು ಅಗತ್ಯವಿರುವ 205 ಸ್ಥಾನಗಳಲ್ಲಿ ಈ ಸಂಖ್ಯೆಗೆ ಮತಗಳು ಮೂರು ಕಡಿಮೆಯಾಗಿದೆ. ಬಿಹಾರದಿಂದ ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 41 ಶಾಸಕರ ಬೆಂಬಲ ಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...