Homeಮುಖಪುಟಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

- Advertisement -
- Advertisement -

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ ಆಘಾತ ನಿಡಿದೆ.

ಮತ ಚಲಾಯಿಸದವರಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಶಾಸಕ ಫೈಸಲ್ ರೆಹಮಾನ್ ಮತ್ತು ಮೂವರು ಕಾಂಗ್ರೆಸ್ ಶಾಸಕರಾದ ಮನೋಹರ್ ಪ್ರಸಾದ್, ಸುರೇಂದ್ರ ಕುಶ್ವಾಹ ಮತ್ತು ಮನೋಜ್ ಬಿಸ್ವಾಸ್ ಸೇರಿದ್ದಾರೆ.

ಮತದಾನ ಮುಂದುವರೆದಂತೆ ಮೂವರು ಕಾಂಗ್ರೆಸ್ ಶಾಸಕರು ದಿನವಿಡೀ ಪಕ್ಷದೊಂದಿಗೆ ಸಂಪರ್ಕದಿಂದ ಹೊರಗಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಶಾಸಕರ ಫೋನ್‌ಗಳು ಸ್ವಿಚ್ ಆಫ್ ಆಗಿದ್ದವು. ಅವರ ಈ ನಡೆಯು ವಿರೋಧ ಪಕ್ಷದ ಬಣದೊಳಗೆ ಕಳವಳವನ್ನುಂಟುಮಾಡಿತು.

ನಾಲ್ವರು ಶಾಸಕರ ಅನುಪಸ್ಥಿತಿಯು ನಿರ್ಣಾಯಕ ಕ್ಷಣದಲ್ಲಿ ಬಂದಿತು. ಐದನೇ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಇಮಡಿಯಾ ಬಣ ನೇರ ಸ್ಪರ್ಧೆಯಲ್ಲಿ ಸಿಲುಕಿದೆ.

ಜೆಡಿ(ಯು) ನಾಯಕರಾದ ನಿತೀಶ್ ಕುಮಾರ್ ಮತ್ತು ರಾಮನಾಥ್ ಠಾಕೂರ್, ಬಿಜೆಪಿಯ ನಿತಿನ್ ನಬಿನ್ ಮತ್ತು ಶಿವಂ ಕುಮಾರ್ ಅವರ ಗೆಲುವು ಖಚಿತವೆಂದು ಪರಿಗಣಿಸಲಾಗಿದ್ದರೂ, ಅಂತಿಮ ಸ್ಥಾನಕ್ಕೆ ನಡೆಯುವ ಹೋರಾಟವು ಎನ್‌ಡಿಎ ಅಭ್ಯರ್ಥಿ ಉಪೇಂದ್ರ ಕುಶ್ವಾಹ ಮತ್ತು ಮಹಾಘಟಬಂಧನ್ ಅಭ್ಯರ್ಥಿ ಎ.ಡಿ. ಸಿಂಗ್ ನಡುವೆ ತೀವ್ರ ಪೈಪೋಟಿಯಾಗಿ ಮಾರ್ಪಟ್ಟಿದೆ.

ಎನ್‌ಡಿಎಗೆ ಸೇರಿದ ಎಲ್ಲಾ 202 ಶಾಸಕರು ಈಗಾಗಲೇ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ನಾಲ್ವರು ಶಾಸಕರು ಮತದಾನಕ್ಕೆ ಹಾಜರಾಗದ ಕಾರಣ ಮಹಾಘಟಬಂಧನ್‌ನ ಮತ ಎಣಿಕೆ 37 ರಲ್ಲೇ ಉಳಿದಿದೆ.

243 ಸದಸ್ಯರ ವಿಧಾನಸಭೆಯಲ್ಲಿ 35 ಶಾಸಕರನ್ನು ಹೊಂದಿರುವ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಗೆಲುವು ಖಚಿತಪಡಿಸಿಕೊಳ್ಳಲು ಕನಿಷ್ಠ 41 ಶಾಸಕರ ಬೆಂಬಲ ಅಗತ್ಯವಿತ್ತು. ಮೈತ್ರಿಕೂಟವು ಐದು ಎಐಎಂಐಎಂ ಶಾಸಕರ ಬೆಂಬಲವನ್ನು ಪಡೆದುಕೊಂಡಿತ್ತು. ಬಿಎಸ್‌ಪಿ ಶಾಸಕರ ಬೆಂಬಲವನ್ನು ಸಹ ನಿರೀಕ್ಷಿಸುತ್ತಿತ್ತು.

ಕುಶ್ವಾಹ ಗೆಲ್ಲಲು, ಎನ್‌ಡಿಎಗೆ ಮಹಾಘಟಬಂಧನ್‌ನ ಕನಿಷ್ಠ ಮೂವರು ಶಾಸಕರ ಮತಗಳು ಬೇಕಾಗಿದ್ದವು. ಈ ಸಂದರ್ಭದಲ್ಲಿ, ವಾಲ್ಮೀಕಿನಗರದ ಸುರೇಂದ್ರ ಕುಶ್ವಾಹ, ಫೋರ್ಬ್ಸ್‌ಗಂಜ್‌ನ ಮನೋಜ್ ಬಿಸ್ವಾಸ್ ಮತ್ತು ಮಣಿಹರಿಯ ಮನೋಹರ್ ಪ್ರಸಾದ್ ಎಂಬ ಮೂವರು ಕಾಂಗ್ರೆಸ್ ಶಾಸಕರ ವಿವರಣೆಯಿಲ್ಲದ ಅನುಪಸ್ಥಿತಿಯು ಮಹತ್ವ ಪಡೆದುಕೊಂಡಿತು.

ಚುನಾವಣೆಗೆ ಮುನ್ನ, ಅಕ್ರಮ ಕುದುರೆವ್ಯಾಪಾರ ಪ್ರಯತ್ನಗಳನ್ನು ತಡೆಗಟ್ಟಲು ಮಹಾ ಮೈತ್ರಿಕೂಟವು ತನ್ನ ಶಾಸಕರನ್ನು ಪಾಟ್ನಾದ ಹೋಟೆಲ್‌ನಲ್ಲಿ ಇರಿಸಿತ್ತು. ಈ ಮಧ್ಯೆ, ಎನ್‌ಡಿಎ ಭಾನುವಾರ ರಾಜ್ಯ ರಾಜಧಾನಿಯಲ್ಲಿ ಸಚಿವರು ಮತ್ತು ಹಿರಿಯ ನಾಯಕರ ನಿವಾಸಗಳಲ್ಲಿ ತನ್ನ ಶಾಸಕರೊಂದಿಗೆ ಸಭೆಗಳನ್ನು ನಡೆಸಿತು.

243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ, ಎನ್‌ಡಿಎ 202 ಶಾಸಕರೊಂದಿಗೆ ಆರಾಮದಾಯಕ ಬಹುಮತವನ್ನು ಹೊಂದಿದೆ. ಆದರೂ ಐದು ರಾಜ್ಯಸಭಾ ಸ್ಥಾನಗಳನ್ನು ಪಡೆಯಲು ಅಗತ್ಯವಿರುವ 205 ಸ್ಥಾನಗಳಲ್ಲಿ ಈ ಸಂಖ್ಯೆಗೆ ಮತಗಳು ಮೂರು ಕಡಿಮೆಯಾಗಿದೆ. ಬಿಹಾರದಿಂದ ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 41 ಶಾಸಕರ ಬೆಂಬಲ ಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...