Homeರಾಜಕೀಯಮಿತ್ರಪಕ್ಷ BJP ವಿರೋಧದ ನಡುವೆಯೂ ‘ಜಾತಿ ಗಣತಿ’ಗೆ ಮುಂದಾದ ಬಿಹಾರ ಸರ್ಕಾರ

ಮಿತ್ರಪಕ್ಷ BJP ವಿರೋಧದ ನಡುವೆಯೂ ‘ಜಾತಿ ಗಣತಿ’ಗೆ ಮುಂದಾದ ಬಿಹಾರ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್ ಅವರ ಬೇಡಿಕೆಯನ್ನು ಬೆಂಬಲಿಸಿ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ತಮ್ಮ ಸರ್ಕಾರ ಶೀಘ್ರದಲ್ಲೇ ಜಾತಿ ಗಣತಿ ಕಾರ್ಯವನ್ನು ಪ್ರಾರಂಭಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಹೇಳಿದ್ದಾರೆ. ಮೇ 27 ರಂದು ಜಾತಿ ಗಣತಿ ಕುರಿತು ಸರ್ವಪಕ್ಷಗಳ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಸರ್ಕಾರದ ಮಿತ್ರಪಕ್ಷವಾದ ಬಿಜೆಪಿ ಈ ಬಗ್ಗೆ ವಿರೋಧವನ್ನು ಸೂಚಿಸಿದೆ.

“ಜಾತಿವಾರು ಜನಗಣತಿ ಕುರಿತು ಎಲ್ಲರ ಅಭಿಪ್ರಾಯ ಪಡೆಯಲು ಸರ್ವಪಕ್ಷ ಸಭೆ ಕರೆಯುತ್ತೇವೆ. ನಂತರ ರಾಜ್ಯ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಲಾಗುವುದು. 27ರಂದು ಸಭೆ ನಡೆಸುವ ಕುರಿತು ಕೆಲ ಪಕ್ಷಗಳೊಂದಿಗೆ ಮಾತನಾಡಿದ್ದೇವೆ ಆದರೆ ಕೆಲವು ಪಕ್ಷಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಅಂತಿಮ ತೀರ್ಮಾನದ ನಂತರ, ಪ್ರಸ್ತಾವನೆಯು ಸಂಪುಟಕ್ಕೆ ಹೋಗಲಿದ್ದು, ಅದರ ನಂತರ ನಾವು ಕೆಲಸ ಪ್ರಾರಂಭಿಸುತ್ತೇವೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರತಿ ಪಕ್ಷದೊಂದಿಗೆ ಮಾತುಕತೆ ಆರಂಭಿಸಿದ್ದೇವೆ. ಎಲ್ಲರೂ ಮಂಡಳಿಯಲ್ಲಿಲ್ಲ. ಅವರ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ನಿತೀಶ್ ಕುಮಾರ್ ಹೇಳಿದ್ದರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಜಾತಿ ಜನಗಣತಿ ಕುರಿತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ದೆಹಲಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ಎಚ್ಚರಿಸಿದ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಜಾತಿ ಗಣತಿಯ ಮಾರ್ಗಸೂಚಿಯನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದು ಬಿಜೆಪಿಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ತಿಳಿದಿದ್ದರೂ ಅವರು ಈ ನಿರ್ಧಾರವನ್ನು ಮಾಡಿದ್ದಾಗಿ ವರದಿಯಾಗಿದೆ.

ಈ ಸಭೆಯ ನಂತರ ಪಕ್ಷದ ಸಂಸ್ಥಾಪಕ ಲಾಲು ಯಾದವ್ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಆರ್‌ಜೆಡಿ ಆರೋಪಿಸಿದೆ. ಒಂದು ವೇಳೆ ಅವರು ಆರ್‌ಜೆಡಿಯೊಂದಿಗೆ ಸ್ನೇಹ ಮಾಡಲು ಯೋಜಿಸಿದ್ದರೆ ನಿತೀಶ್ ಕುಮಾರ್ ಅವರಿಗೂ ಇದುವೆ ಗತಿ ಎಂಬ ತೀಕ್ಷ್ಣ ಸಂದೇಶವನ್ನು ರವಾನಿಸಲು ಬಿಜೆಪಿ ಬಯಸಿದ್ದು, ಅದಕ್ಕಾಗಿಯೆ ದಾಳಿಗಳು ಸಮಯಕ್ಕೆ ಸರಿಯಾಗಿ ನಡೆದಿವೆ ಎಂದು ಆರ್‌ಜೆಡಿ ಹೇಳಿಕೊಂಡಿದೆ.

ಜಾತಿ ಗಣತಿ ವಿಚಾರದಲ್ಲಿ ನಿತೀಶ್ ಕುಮಾರ್ ಅವರ ನಿರ್ಧಾರಕ್ಕೆ ಬಿಜೆಪಿ ಒಪ್ಪುತ್ತದೆ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಉಪಮುಖ್ಯಮಂತ್ರಿ, ಬಿಜೆಪಿ ತಾರಕಿಶೋರ್‌‌ ಪ್ರಸಾದ್ ಸೂಚಿಸಿದ್ದಾರೆ. “ನಾವು ಈ ಬಗ್ಗೆ ಚರ್ಚಿಸಿ, ವಿವಿಧ ಅಂಶಗಳನ್ನು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ಜಾತಿ ಗಣತಿಯನ್ನು ಬಿಜೆಪಿಯು ತಾತ್ವಿಕವಾಗಿ ವಿರೋಧಿಸುತ್ತಿದೆ. ಜಾತಿ ಆಧಾರಿತ ಜನಗಣತಿ ಎಂಬುದು ವಿಭಜನೆಯ ಕಸರತ್ತು ಎಂದು ಒಕ್ಕೂಟ ಸರ್ಕಾರ ಬಹಳ ಹಿಂದೆಯೇ ಹೇಳುತ್ತಲೇ ಬಂದಿತ್ತು. ಆದರೆ ಬಿಹಾರದ ರಾಜಕೀಯ ಪಕ್ಷಗಳು ಜಾತಿ ಗಣತಿಯು ಸಮಾಜದಲ್ಲಿ ಅತ್ಯಂತ ನಿರ್ಲಕ್ಷಿತರಿಗೆ ಸಹಾಯ ಮಾಡಲು ಉತ್ತಮ ನೀತಿ ರೂಪಿಸಲು ಕಾರಣವಾಗುತ್ತದೆ ಎಂದು ವಾದಿಸುತ್ತಿವೆ.

ಕಳೆದ ವರ್ಷ, ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನೊಳಗೊಂಡ ಬಿಹಾರ ರಾಜಕಾರಣಿಗಳ ನಿಯೋಗವು ಜಾತಿ ಗಣತಿಗಾಗಿ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಜಾತಿ-ಆಧಾರಿತ ಎಣಿಕೆಯನ್ನು ಕೊನೆಯ ಬಾರಿಗೆ 1931 ರಲ್ಲಿ ನಡೆಸಲಾಯಿತು. ಈ ವೇಳೆ ಬಿಹಾರವು ಬ್ರಿಟಿಷ್ ಆಳ್ವಿಕೆಯಲ್ಲಿದ್ದು, ಜಾರ್ಖಂಡ್ ಮತ್ತು ಒಡಿಶಾ ರಾಜ್ಯಗಳು ಬಿಹಾರದ ಭಾಗವಾಗಿದ್ದವು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...