Homeಮುಖಪುಟಪತನದತ್ತ ಬಿಹಾರ ಸರ್ಕಾರ: ಬಿಜೆಪಿ ತೊರೆದು ಆರ್‌ಜೆಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಯು

ಪತನದತ್ತ ಬಿಹಾರ ಸರ್ಕಾರ: ಬಿಜೆಪಿ ತೊರೆದು ಆರ್‌ಜೆಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಯು

ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

- Advertisement -
- Advertisement -

ಬಿಹಾರದಲ್ಲಿ ಆಡಳಿತರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳ ಮೈತ್ರಿ ನಡುವೆ ಕಾಣಿಸಿಕೊಂಡ ಬಿರುಕು ದೊಡ್ಡದಾಗತೊಡಗಿದೆ. ಜೆಡಿಯು ಶಾಸಕರ ಸಭೆ ಕರೆದಿರುವ ಸಿಎಂ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಜೆಡಿಯು ಪಕ್ಷವನ್ನು ಇಬ್ಭಾಗ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಜೆಡಿಯು ರಾಷ್ಟ್ರಿಯ ಅಧ್ಯಕ್ಷ ರಾಜೀವ್ ರಂಜನ್ ಸೂಕ್ತ ಸಮಯದಲ್ಲಿ ಈ ಪಿತೂರಿಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನೊಂದೆಡೆ ಜೆಡಿಯು ಸದಸ್ಯರು ಮಧ್ಯಂತರ ಚುನಾವಣೆ ಎದುರಿಸಲು ಸಿದ್ದರಿಲ್ಲದ ಕಾರಣ ಬಿಜೆಪಿ ಜೊತೆಗಿನ ಮೈತ್ರಿ ಕಳೆದುಕೊಂಡಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಬಿಹಾರ ಅಸೆಂಬ್ಲಿಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು ಸದ್ಯ ಎನ್‌ಡಿಎ ಮೈತ್ರಿ 127 ಸ್ಥಾನ ಹೊಂದುವ ಮೂಲಕ ಸರ್ಕಾರ ರಚಿಸಿದೆ. ಅದರಲ್ಲಿ ಬಿಜೆಪಿ 77, ಜೆಡಿಯು 45, ಹಿಂದೂಸ್ತಾನ್ ಅವಾಜ್ ಮೋರ್ಚಾ 04 ಮತ್ತು ಒಬ್ಬರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿರೋಧ ಪಕ್ಷಗಳ ಪಾಳಯದಲ್ಲಿ ಮಹಾಘಟಬಂಧನ್ ಮೈತ್ರಿಯಲ್ಲಿ ಆರ್‌ಜೆಡಿ 80, ಸಿಪಿಐ-ಎಂಎಲ್ 12, ಸಿಪಿಐ(ಎಂ)-02, ಸಿಪಿಐ 02 ಸ್ಥಾನದೊಂದಿಗೆ ಒಟ್ಟು 96 ಸ್ಥಾನ ಹೊಂದಿವೆ. ಅಲ್ಲದೆ ಕಾಂಗ್ರೆಸ್ 19 ಮತ್ತು ಎಐಎಂಐಎಂ ಪಕ್ಷವು 01 ಸ್ಥಾನ ಹೊಂದಿದೆ.

ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

ಜೆಡಿಯು ಮುನಿಸಿಗೆ ಕಾರಣವೇನು?

ಜೆಡಿಯುವಿನಿಂದ ರಾಜ್ಯಸಭಾ ಸದಸ್ಯನಾಗಿದ್ದ ಆರ್‌ಪಿ ಸಿಂಗ್‌ಗೆ ಬಿಜೆಪಿಯು ಜೆಡಿಯು ಪಕ್ಷದ ವಿರೋಧದ ನಡುವೆಯು ಕೇಂದ್ರ ಸಚಿವ ಸ್ಥಾನ ನೀಡಿತ್ತು. ಇದು ಜೆಡಿಯುಗೆ ಇರಿಸು ಮುರಿಸು ತಂದಿತ್ತು. ಹಾಗಾಗಿಯೇ ಅವರಿಗೆ ಮತ್ತೊಂದು ಅವಧಿಗೆ ರಾಜ್ಯಸಭಾ ಸ್ಥಾನವನ್ನು ನೀಡದಿರಲು ಜೆಡಿಯು ನಿರ್ಧಿರಿಸಿತ್ತು. ಇದರಿಂದ ಕೆರಳಿದ ಆರ್‌ಪಿ ಸಿಂಗ್ ಜೆಡಿಯು ತೊರೆದರಲ್ಲದೆ ಸಿಎಂ ನಿತೀಶ್ ಕುಮಾರ್ ವಿರುದ್ಧ ಬಹಿರಂಗವಾಗಿ ಟೀಕೆ ನಡೆಸಿದ್ದರು. ನಿತೀಶ್ ಕುಮಾರ್ ಕುಟುಂಬದ ವ್ಯಕ್ತಿಗಳ ವಿರುದ್ಧ ದಾಳಿ ನಡೆಸಿದ್ದರು.

ಬಿಹಾರ ಅಸೆಂಬ್ಲಿ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಕೂಡ ನಿತೀಶ್ ಕುಮಾರ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅವರನ್ನು ಸ್ಪೀಕರ್ ಸ್ಥಾನದಿಂದ ತೆಗೆಯುವಂತೆ ಜೆಡಿಯು ಆಗ್ರಹಿಸಿತ್ತು. ಆದರೆ ಬಿಜೆಪಿ ಅವರನ್ನೇ ಮುಂದುವರೆಸಿತ್ತು.

ಕೇಂದ್ರ ಸಚಿವ ಸ್ಥಾನಗಳನ್ನು ನೀಡುವಾಗ ಜೆಡಿಯು ಪಕ್ಷವನ್ನು ಕಡೆಗಣಿಸಲಾಗುತ್ತಿದೆ ಎಂಬುದು ಜೆಡಿಯು ಆರೋಪವಾಗಿದೆ. ಈ ಎಲ್ಲಾ ಕಾರಣಗಳಿಂದ ಬಿಜೆಪಿ ವಿರುದ್ಧ ತಿರುಗಿ ಬಿದ್ದಿರುವ ನಿತೀಶ್ ಕುಮಾರ್ ಎನ್‌ಡಿಎ ವತಿಯಿಂದ ನಡೆದ ಹಲವು ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ಬಿಜೆಪಿ ವಿರುದ್ಧ ಟೀಕೆ ಮಾಡುವುದಕ್ಕೆ ಬದಲಾಗಿ ಜೆಡಿಯು ಮುಖಂಡರು ಸರ್ಕಾರದಿಂದ ಹೊರನಡೆಯುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಫಲಿಸುತ್ತದೆ ಎಂಬುದು ಇನ್ನ ಎರಡು ಮೂರು ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ; ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...