Homeಮುಖಪುಟಪತನದತ್ತ ಬಿಹಾರ ಸರ್ಕಾರ: ಬಿಜೆಪಿ ತೊರೆದು ಆರ್‌ಜೆಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಯು

ಪತನದತ್ತ ಬಿಹಾರ ಸರ್ಕಾರ: ಬಿಜೆಪಿ ತೊರೆದು ಆರ್‌ಜೆಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಯು

ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

- Advertisement -
- Advertisement -

ಬಿಹಾರದಲ್ಲಿ ಆಡಳಿತರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳ ಮೈತ್ರಿ ನಡುವೆ ಕಾಣಿಸಿಕೊಂಡ ಬಿರುಕು ದೊಡ್ಡದಾಗತೊಡಗಿದೆ. ಜೆಡಿಯು ಶಾಸಕರ ಸಭೆ ಕರೆದಿರುವ ಸಿಎಂ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಜೆಡಿಯು ಪಕ್ಷವನ್ನು ಇಬ್ಭಾಗ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಜೆಡಿಯು ರಾಷ್ಟ್ರಿಯ ಅಧ್ಯಕ್ಷ ರಾಜೀವ್ ರಂಜನ್ ಸೂಕ್ತ ಸಮಯದಲ್ಲಿ ಈ ಪಿತೂರಿಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನೊಂದೆಡೆ ಜೆಡಿಯು ಸದಸ್ಯರು ಮಧ್ಯಂತರ ಚುನಾವಣೆ ಎದುರಿಸಲು ಸಿದ್ದರಿಲ್ಲದ ಕಾರಣ ಬಿಜೆಪಿ ಜೊತೆಗಿನ ಮೈತ್ರಿ ಕಳೆದುಕೊಂಡಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಬಿಹಾರ ಅಸೆಂಬ್ಲಿಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು ಸದ್ಯ ಎನ್‌ಡಿಎ ಮೈತ್ರಿ 127 ಸ್ಥಾನ ಹೊಂದುವ ಮೂಲಕ ಸರ್ಕಾರ ರಚಿಸಿದೆ. ಅದರಲ್ಲಿ ಬಿಜೆಪಿ 77, ಜೆಡಿಯು 45, ಹಿಂದೂಸ್ತಾನ್ ಅವಾಜ್ ಮೋರ್ಚಾ 04 ಮತ್ತು ಒಬ್ಬರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿರೋಧ ಪಕ್ಷಗಳ ಪಾಳಯದಲ್ಲಿ ಮಹಾಘಟಬಂಧನ್ ಮೈತ್ರಿಯಲ್ಲಿ ಆರ್‌ಜೆಡಿ 80, ಸಿಪಿಐ-ಎಂಎಲ್ 12, ಸಿಪಿಐ(ಎಂ)-02, ಸಿಪಿಐ 02 ಸ್ಥಾನದೊಂದಿಗೆ ಒಟ್ಟು 96 ಸ್ಥಾನ ಹೊಂದಿವೆ. ಅಲ್ಲದೆ ಕಾಂಗ್ರೆಸ್ 19 ಮತ್ತು ಎಐಎಂಐಎಂ ಪಕ್ಷವು 01 ಸ್ಥಾನ ಹೊಂದಿದೆ.

ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

ಜೆಡಿಯು ಮುನಿಸಿಗೆ ಕಾರಣವೇನು?

ಜೆಡಿಯುವಿನಿಂದ ರಾಜ್ಯಸಭಾ ಸದಸ್ಯನಾಗಿದ್ದ ಆರ್‌ಪಿ ಸಿಂಗ್‌ಗೆ ಬಿಜೆಪಿಯು ಜೆಡಿಯು ಪಕ್ಷದ ವಿರೋಧದ ನಡುವೆಯು ಕೇಂದ್ರ ಸಚಿವ ಸ್ಥಾನ ನೀಡಿತ್ತು. ಇದು ಜೆಡಿಯುಗೆ ಇರಿಸು ಮುರಿಸು ತಂದಿತ್ತು. ಹಾಗಾಗಿಯೇ ಅವರಿಗೆ ಮತ್ತೊಂದು ಅವಧಿಗೆ ರಾಜ್ಯಸಭಾ ಸ್ಥಾನವನ್ನು ನೀಡದಿರಲು ಜೆಡಿಯು ನಿರ್ಧಿರಿಸಿತ್ತು. ಇದರಿಂದ ಕೆರಳಿದ ಆರ್‌ಪಿ ಸಿಂಗ್ ಜೆಡಿಯು ತೊರೆದರಲ್ಲದೆ ಸಿಎಂ ನಿತೀಶ್ ಕುಮಾರ್ ವಿರುದ್ಧ ಬಹಿರಂಗವಾಗಿ ಟೀಕೆ ನಡೆಸಿದ್ದರು. ನಿತೀಶ್ ಕುಮಾರ್ ಕುಟುಂಬದ ವ್ಯಕ್ತಿಗಳ ವಿರುದ್ಧ ದಾಳಿ ನಡೆಸಿದ್ದರು.

ಬಿಹಾರ ಅಸೆಂಬ್ಲಿ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಕೂಡ ನಿತೀಶ್ ಕುಮಾರ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅವರನ್ನು ಸ್ಪೀಕರ್ ಸ್ಥಾನದಿಂದ ತೆಗೆಯುವಂತೆ ಜೆಡಿಯು ಆಗ್ರಹಿಸಿತ್ತು. ಆದರೆ ಬಿಜೆಪಿ ಅವರನ್ನೇ ಮುಂದುವರೆಸಿತ್ತು.

ಕೇಂದ್ರ ಸಚಿವ ಸ್ಥಾನಗಳನ್ನು ನೀಡುವಾಗ ಜೆಡಿಯು ಪಕ್ಷವನ್ನು ಕಡೆಗಣಿಸಲಾಗುತ್ತಿದೆ ಎಂಬುದು ಜೆಡಿಯು ಆರೋಪವಾಗಿದೆ. ಈ ಎಲ್ಲಾ ಕಾರಣಗಳಿಂದ ಬಿಜೆಪಿ ವಿರುದ್ಧ ತಿರುಗಿ ಬಿದ್ದಿರುವ ನಿತೀಶ್ ಕುಮಾರ್ ಎನ್‌ಡಿಎ ವತಿಯಿಂದ ನಡೆದ ಹಲವು ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ಬಿಜೆಪಿ ವಿರುದ್ಧ ಟೀಕೆ ಮಾಡುವುದಕ್ಕೆ ಬದಲಾಗಿ ಜೆಡಿಯು ಮುಖಂಡರು ಸರ್ಕಾರದಿಂದ ಹೊರನಡೆಯುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಫಲಿಸುತ್ತದೆ ಎಂಬುದು ಇನ್ನ ಎರಡು ಮೂರು ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ; ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...