Homeಮುಖಪುಟಪತನದತ್ತ ಬಿಹಾರ ಸರ್ಕಾರ: ಬಿಜೆಪಿ ತೊರೆದು ಆರ್‌ಜೆಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಯು

ಪತನದತ್ತ ಬಿಹಾರ ಸರ್ಕಾರ: ಬಿಜೆಪಿ ತೊರೆದು ಆರ್‌ಜೆಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಯು

ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

- Advertisement -
- Advertisement -

ಬಿಹಾರದಲ್ಲಿ ಆಡಳಿತರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳ ಮೈತ್ರಿ ನಡುವೆ ಕಾಣಿಸಿಕೊಂಡ ಬಿರುಕು ದೊಡ್ಡದಾಗತೊಡಗಿದೆ. ಜೆಡಿಯು ಶಾಸಕರ ಸಭೆ ಕರೆದಿರುವ ಸಿಎಂ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಜೆಡಿಯು ಪಕ್ಷವನ್ನು ಇಬ್ಭಾಗ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಜೆಡಿಯು ರಾಷ್ಟ್ರಿಯ ಅಧ್ಯಕ್ಷ ರಾಜೀವ್ ರಂಜನ್ ಸೂಕ್ತ ಸಮಯದಲ್ಲಿ ಈ ಪಿತೂರಿಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನೊಂದೆಡೆ ಜೆಡಿಯು ಸದಸ್ಯರು ಮಧ್ಯಂತರ ಚುನಾವಣೆ ಎದುರಿಸಲು ಸಿದ್ದರಿಲ್ಲದ ಕಾರಣ ಬಿಜೆಪಿ ಜೊತೆಗಿನ ಮೈತ್ರಿ ಕಳೆದುಕೊಂಡಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಬಿಹಾರ ಅಸೆಂಬ್ಲಿಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು ಸದ್ಯ ಎನ್‌ಡಿಎ ಮೈತ್ರಿ 127 ಸ್ಥಾನ ಹೊಂದುವ ಮೂಲಕ ಸರ್ಕಾರ ರಚಿಸಿದೆ. ಅದರಲ್ಲಿ ಬಿಜೆಪಿ 77, ಜೆಡಿಯು 45, ಹಿಂದೂಸ್ತಾನ್ ಅವಾಜ್ ಮೋರ್ಚಾ 04 ಮತ್ತು ಒಬ್ಬರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿರೋಧ ಪಕ್ಷಗಳ ಪಾಳಯದಲ್ಲಿ ಮಹಾಘಟಬಂಧನ್ ಮೈತ್ರಿಯಲ್ಲಿ ಆರ್‌ಜೆಡಿ 80, ಸಿಪಿಐ-ಎಂಎಲ್ 12, ಸಿಪಿಐ(ಎಂ)-02, ಸಿಪಿಐ 02 ಸ್ಥಾನದೊಂದಿಗೆ ಒಟ್ಟು 96 ಸ್ಥಾನ ಹೊಂದಿವೆ. ಅಲ್ಲದೆ ಕಾಂಗ್ರೆಸ್ 19 ಮತ್ತು ಎಐಎಂಐಎಂ ಪಕ್ಷವು 01 ಸ್ಥಾನ ಹೊಂದಿದೆ.

ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

ಜೆಡಿಯು ಮುನಿಸಿಗೆ ಕಾರಣವೇನು?

ಜೆಡಿಯುವಿನಿಂದ ರಾಜ್ಯಸಭಾ ಸದಸ್ಯನಾಗಿದ್ದ ಆರ್‌ಪಿ ಸಿಂಗ್‌ಗೆ ಬಿಜೆಪಿಯು ಜೆಡಿಯು ಪಕ್ಷದ ವಿರೋಧದ ನಡುವೆಯು ಕೇಂದ್ರ ಸಚಿವ ಸ್ಥಾನ ನೀಡಿತ್ತು. ಇದು ಜೆಡಿಯುಗೆ ಇರಿಸು ಮುರಿಸು ತಂದಿತ್ತು. ಹಾಗಾಗಿಯೇ ಅವರಿಗೆ ಮತ್ತೊಂದು ಅವಧಿಗೆ ರಾಜ್ಯಸಭಾ ಸ್ಥಾನವನ್ನು ನೀಡದಿರಲು ಜೆಡಿಯು ನಿರ್ಧಿರಿಸಿತ್ತು. ಇದರಿಂದ ಕೆರಳಿದ ಆರ್‌ಪಿ ಸಿಂಗ್ ಜೆಡಿಯು ತೊರೆದರಲ್ಲದೆ ಸಿಎಂ ನಿತೀಶ್ ಕುಮಾರ್ ವಿರುದ್ಧ ಬಹಿರಂಗವಾಗಿ ಟೀಕೆ ನಡೆಸಿದ್ದರು. ನಿತೀಶ್ ಕುಮಾರ್ ಕುಟುಂಬದ ವ್ಯಕ್ತಿಗಳ ವಿರುದ್ಧ ದಾಳಿ ನಡೆಸಿದ್ದರು.

ಬಿಹಾರ ಅಸೆಂಬ್ಲಿ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಕೂಡ ನಿತೀಶ್ ಕುಮಾರ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅವರನ್ನು ಸ್ಪೀಕರ್ ಸ್ಥಾನದಿಂದ ತೆಗೆಯುವಂತೆ ಜೆಡಿಯು ಆಗ್ರಹಿಸಿತ್ತು. ಆದರೆ ಬಿಜೆಪಿ ಅವರನ್ನೇ ಮುಂದುವರೆಸಿತ್ತು.

ಕೇಂದ್ರ ಸಚಿವ ಸ್ಥಾನಗಳನ್ನು ನೀಡುವಾಗ ಜೆಡಿಯು ಪಕ್ಷವನ್ನು ಕಡೆಗಣಿಸಲಾಗುತ್ತಿದೆ ಎಂಬುದು ಜೆಡಿಯು ಆರೋಪವಾಗಿದೆ. ಈ ಎಲ್ಲಾ ಕಾರಣಗಳಿಂದ ಬಿಜೆಪಿ ವಿರುದ್ಧ ತಿರುಗಿ ಬಿದ್ದಿರುವ ನಿತೀಶ್ ಕುಮಾರ್ ಎನ್‌ಡಿಎ ವತಿಯಿಂದ ನಡೆದ ಹಲವು ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ಬಿಜೆಪಿ ವಿರುದ್ಧ ಟೀಕೆ ಮಾಡುವುದಕ್ಕೆ ಬದಲಾಗಿ ಜೆಡಿಯು ಮುಖಂಡರು ಸರ್ಕಾರದಿಂದ ಹೊರನಡೆಯುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಫಲಿಸುತ್ತದೆ ಎಂಬುದು ಇನ್ನ ಎರಡು ಮೂರು ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ; ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...