Homeಮುಖಪುಟಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

ಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

- Advertisement -
- Advertisement -

ಬಿಹಾರದಲ್ಲಿ ಮುಂದಿನ ಎರಡು, ಮೂರು ತಿಂಗಳಲ್ಲಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಬೀಳಲಿದೆ ಎಂಬ ಬಿಹಾರದ ಪ್ರತಿಪಕ್ಷ ನಾಯಕ ತೇಜಶ್ವಿ ಪ್ರಸಾದ್ ಯಾದವ್ ಅವರು ಮಾತನ್ನು ಆಡಳಿತಾರೂ ಮೈತ್ರಿ ಸರ್ಕಾರ ತಿರಸ್ಕರಿಸಿದೆ.

ಬದಲಾಗಿ ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತನ್ನ ಕ್ಷೇತ್ರದಿಂದ ಕಾಣೆಯಾಗಿದ್ದಕ್ಕಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಮೇಲೆ ಆಡಳಿತರೂಢ ಸರ್ಕಾರ ಮುಗಿಬಿದ್ದಿದೆ.

ತೇಜಸ್ವಿ ಯಾದವ್ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ರಾಘೋಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಂದಿನ ಎರಡು, ಮೂರು ತಿಂಗಳಲ್ಲಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಬೀಳಲಿದೆ ಎಂದಿದ್ದರು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಸ್ವಕ್ಷೇತ್ರದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳದಿರುವುದಕ್ಕೆ ಪಪ್ಪು ಯಾದವ್ ನೇತೃತ್ವದ ಜನ ಅಧಿಕಾರ ಪಕ್ಷ (ಜೆಎಪಿ)ದ ಕಾರ್ಯಕರ್ತರು ಈ ಹಿಂದೆ ತೇಜಸ್ವಿ ಯಾದವ್‌ಗೆ ಕಪ್ಪು ಧ್ವಜಗಳನ್ನು ತೋರಿಸಿದ್ದರು.

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ತೇಜಶ್ವಿ ಯಾದವ್ ಹೇಳಿಕೆಗೆ ಸಹಮತ ಸೂಚಿಸಿರು ಆರ್‌ಜೆಡಿಯ ಮಿತ್ರ ಕಾಂಗ್ರೆಸ್, “ಪ್ರತಿಪಕ್ಷ ನಾಯಕರ ಹೇಳಿಕೆ ತೂಕದ ಮಾತಾಗಿದೆ (ಒಪಪ್ಪುವಂತಹ ಮಾತು) ಎಂದಿದೆ. ಜೊತೆಗೆ ಎನ್‌ಡಿಎಯ ಹಲವು ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು, ಅವರು ಸರ್ಕಾರದ ಕಾರ್ಯವೈಖರಿ ಬಗ್ಗೆ ಸಂತಸಹೊಂದಿಲ್ಲ ಎಂದು ಪಕ್ಷದ ಮುಖಂಡ ಕುಂತಲ್ ಕೃಷ್ಣ ಹೇಳಿದ್ದಾರೆ.

ಆದರೂ, ಆಡಳಿತಾರೂ ಜೆಡಿಯು ಆರ್‌ಜೆಡಿಯ ತೇಜಸ್ವಿ ಯಾದವ್ ಅವರ ಮಾತನ್ನು ತಳ್ಳಿಹಾಕಿದೆ. “ವಿಶ್ವದ ಯಾವುದೇ ಶಕ್ತಿಯು ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಅವರ ಸರ್ಕಾರವನ್ನು ಉರುಳಿಸಲು ಸಾಧ್ಯವಿಲ್ಲ. ತೇಜಶ್ವಿ ಯಾದವ್ ಕೆಲವು ಜೆಡಿಯು ಶಾಸಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅನೇಕ ಆರ್‌ಜೆಡಿ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಸಮಯದಲ್ಲಿ ನಾವು ಇದಕ್ಕಿಂತ ಹೆಚ್ಚಿನದು ಏನ್ನೂ ಹೇಳುವುದಿಲ್ಲ” ಎಂದು ಜೆಡಿಯು ಪರಿಷತ್ ಸದಸ್ಯ ಉಪೇಂದ್ರ ಕುಶ್ವಾಹ ಹೇಳಿದ್ದಾರೆ.

ಬಿಜೆಪಿ ನಾಯಕ ಮತ್ತು ಪಕ್ಷದ ವಕ್ತಾರ ಪ್ರೇಮ್ ರಂಜನ್ ಪಟೇಲ್, ತೇಜಶ್ವಿ ಯಾದವ್ ಮೊದಲು ತಮ್ಮ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಮಾಡಿಕೊಳ್ಳುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. “ತೇಜಶ್ವಿ ಯಾದವ್‌ಗೆ ಬಿಹಾರದ ಜನರೊಂದಿಗೆ ಅಥವಾ ಅವನ ಸ್ವಂತ ಕ್ಷೇತ್ರದ ಜನರೊಂದಿಗೆ ಯಾವುದೇ ಸಂಬಂಧವಿಲ್ಲ. ಶಾಸಕರು ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ಕೂಡ ಆ ಕ್ಷೇತ್ರದಲ್ಲಿ ಜನರು ಹಾಕಿದ್ದರು. ಜನರಿಗೆ ಅಗತ್ಯವಿದ್ದಾಗ, ಅವರು ಹೋಗಲಿಲ್ಲ. ಈಗ ಬಂದು ಎರಡು ಮೂರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಕನಸು ಕಾಣುತ್ತಿದ್ದಾರೆ. ಆದರೆ ಈ ಕನಸು ಕನಸಾಗಿ ಉಳಿಯುತ್ತದೆ ”ಎಂದು ಪ್ರೇಮ್ ರಂಜನ್ ಪಟೇಲ್ ಹೇಳಿದ್ದಾರೆ.


ಇದನ್ನೂ ಓದಿ: ‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...