Homeಮುಖಪುಟಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

ಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

- Advertisement -
- Advertisement -

ಬಿಹಾರದಲ್ಲಿ ಮುಂದಿನ ಎರಡು, ಮೂರು ತಿಂಗಳಲ್ಲಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಬೀಳಲಿದೆ ಎಂಬ ಬಿಹಾರದ ಪ್ರತಿಪಕ್ಷ ನಾಯಕ ತೇಜಶ್ವಿ ಪ್ರಸಾದ್ ಯಾದವ್ ಅವರು ಮಾತನ್ನು ಆಡಳಿತಾರೂ ಮೈತ್ರಿ ಸರ್ಕಾರ ತಿರಸ್ಕರಿಸಿದೆ.

ಬದಲಾಗಿ ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತನ್ನ ಕ್ಷೇತ್ರದಿಂದ ಕಾಣೆಯಾಗಿದ್ದಕ್ಕಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಮೇಲೆ ಆಡಳಿತರೂಢ ಸರ್ಕಾರ ಮುಗಿಬಿದ್ದಿದೆ.

ತೇಜಸ್ವಿ ಯಾದವ್ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ರಾಘೋಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಂದಿನ ಎರಡು, ಮೂರು ತಿಂಗಳಲ್ಲಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಬೀಳಲಿದೆ ಎಂದಿದ್ದರು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಸ್ವಕ್ಷೇತ್ರದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳದಿರುವುದಕ್ಕೆ ಪಪ್ಪು ಯಾದವ್ ನೇತೃತ್ವದ ಜನ ಅಧಿಕಾರ ಪಕ್ಷ (ಜೆಎಪಿ)ದ ಕಾರ್ಯಕರ್ತರು ಈ ಹಿಂದೆ ತೇಜಸ್ವಿ ಯಾದವ್‌ಗೆ ಕಪ್ಪು ಧ್ವಜಗಳನ್ನು ತೋರಿಸಿದ್ದರು.

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ತೇಜಶ್ವಿ ಯಾದವ್ ಹೇಳಿಕೆಗೆ ಸಹಮತ ಸೂಚಿಸಿರು ಆರ್‌ಜೆಡಿಯ ಮಿತ್ರ ಕಾಂಗ್ರೆಸ್, “ಪ್ರತಿಪಕ್ಷ ನಾಯಕರ ಹೇಳಿಕೆ ತೂಕದ ಮಾತಾಗಿದೆ (ಒಪಪ್ಪುವಂತಹ ಮಾತು) ಎಂದಿದೆ. ಜೊತೆಗೆ ಎನ್‌ಡಿಎಯ ಹಲವು ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು, ಅವರು ಸರ್ಕಾರದ ಕಾರ್ಯವೈಖರಿ ಬಗ್ಗೆ ಸಂತಸಹೊಂದಿಲ್ಲ ಎಂದು ಪಕ್ಷದ ಮುಖಂಡ ಕುಂತಲ್ ಕೃಷ್ಣ ಹೇಳಿದ್ದಾರೆ.

ಆದರೂ, ಆಡಳಿತಾರೂ ಜೆಡಿಯು ಆರ್‌ಜೆಡಿಯ ತೇಜಸ್ವಿ ಯಾದವ್ ಅವರ ಮಾತನ್ನು ತಳ್ಳಿಹಾಕಿದೆ. “ವಿಶ್ವದ ಯಾವುದೇ ಶಕ್ತಿಯು ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಅವರ ಸರ್ಕಾರವನ್ನು ಉರುಳಿಸಲು ಸಾಧ್ಯವಿಲ್ಲ. ತೇಜಶ್ವಿ ಯಾದವ್ ಕೆಲವು ಜೆಡಿಯು ಶಾಸಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅನೇಕ ಆರ್‌ಜೆಡಿ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಸಮಯದಲ್ಲಿ ನಾವು ಇದಕ್ಕಿಂತ ಹೆಚ್ಚಿನದು ಏನ್ನೂ ಹೇಳುವುದಿಲ್ಲ” ಎಂದು ಜೆಡಿಯು ಪರಿಷತ್ ಸದಸ್ಯ ಉಪೇಂದ್ರ ಕುಶ್ವಾಹ ಹೇಳಿದ್ದಾರೆ.

ಬಿಜೆಪಿ ನಾಯಕ ಮತ್ತು ಪಕ್ಷದ ವಕ್ತಾರ ಪ್ರೇಮ್ ರಂಜನ್ ಪಟೇಲ್, ತೇಜಶ್ವಿ ಯಾದವ್ ಮೊದಲು ತಮ್ಮ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಮಾಡಿಕೊಳ್ಳುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. “ತೇಜಶ್ವಿ ಯಾದವ್‌ಗೆ ಬಿಹಾರದ ಜನರೊಂದಿಗೆ ಅಥವಾ ಅವನ ಸ್ವಂತ ಕ್ಷೇತ್ರದ ಜನರೊಂದಿಗೆ ಯಾವುದೇ ಸಂಬಂಧವಿಲ್ಲ. ಶಾಸಕರು ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ಕೂಡ ಆ ಕ್ಷೇತ್ರದಲ್ಲಿ ಜನರು ಹಾಕಿದ್ದರು. ಜನರಿಗೆ ಅಗತ್ಯವಿದ್ದಾಗ, ಅವರು ಹೋಗಲಿಲ್ಲ. ಈಗ ಬಂದು ಎರಡು ಮೂರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಕನಸು ಕಾಣುತ್ತಿದ್ದಾರೆ. ಆದರೆ ಈ ಕನಸು ಕನಸಾಗಿ ಉಳಿಯುತ್ತದೆ ”ಎಂದು ಪ್ರೇಮ್ ರಂಜನ್ ಪಟೇಲ್ ಹೇಳಿದ್ದಾರೆ.


ಇದನ್ನೂ ಓದಿ: ‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...