ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ಎನ್ಡಿಎ ಸ್ಪಷ್ಟ ಬಹುಮತಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರವನ್ನು ರಚಿಸಲು ಶಕ್ತವಾಗಿದೆ. ಇಂದು ಬಿಹಾರ ಮುಖ್ಯಮಂತ್ರಿ ಮತ್ತು ಇತರೆ ಅಂಶಗಳನ್ನು ನಿರ್ಧರಿಸಲು ಎನ್ಡಿಎ ಸಭೆ ಸೇರಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿ ಎಂಬುದನ್ನು ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಬಹುಪಾಲು ನಾಯಕರು ಖಚಿತಪಡಿಸಿದ್ದಾರೆ. ಆದರೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ನಡುವೆ ಆರ್ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸ್ಥಾನ ಪಡೆದ, ಜನಾದೇಶ ಇಲ್ಲದವರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ” ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್
ಈ ಕುರಿತು ಮನೋಜ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಎಎನ್ಐ, “ಕೇವಲ 40 ಸೀಟುಗಳನ್ನು ಗೆದ್ದಿರುವವರು ಹೇಗೆ ಮುಖ್ಯಮಂತ್ರಿಯಾಗಲು ಸಾಧ್ಯ? ಜನಾದೇಶವು ಆತನ ವಿರುದ್ಧವಾಗಿದೆ. ಆತ ನಿರ್ಣಾಮವಾಗುತ್ತಾನೆ ಮತ್ತು ಅದನ್ನು ನಿರ್ಧರಿಸಬೇಕಿದೆ. ಬಿಹಾರವು ಸ್ವಯಂಪ್ರೇರಿತವಾಗಿ ತನ್ನ ಪರ್ಯಾಯವನ್ನು ಕಂಡುಕೊಳ್ಳುತ್ತದೆ. ಇದಕ್ಕೆ ಒಂದು ವಾರ ತೆಗೆದುಕೊಳ್ಳಬಹುದು, ಹತ್ತು ದಿನ ಅಥವಾ 1 ತಿಂಗಳು ತೆಗೆದುಕೊಳ್ಳಬಹುದು. ಆದರೆ ಇದು ಖಂಡಿತ ಸಂಭವಿಸುತ್ತದೆ” ಎಂದು ಹೇಳಿರುವುದಾಗಿ ವರದಿ ಮಾಡಿದೆ.
How can someone become Chief Minister after getting 40 seats? People's mandate is against him, he is decimated & should decide on it. #Bihar will find its alternative, which will be spontaneous. It might take a week, ten days, or a month but it will happen: RJD leader Manoj Jha pic.twitter.com/SDaUMTc4AY
— ANI (@ANI) November 15, 2020
ಇದನ್ನೂ ಓದಿ: ಬಿಹಾರದಲ್ಲಿ ನಿಜವಾದ ವಿಜೇತ ಆರ್ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ
ಬಿಹಾರ ಚುನಾವಣೆಯಲ್ಲಿ ಆರ್ಜೆಡಿ ಪಕ್ಷವು ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 75 ಸ್ಥಾನಗಳನ್ನು ಗೆದ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದುಕೊಂಡಿದೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಕೇವಲ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಎನ್ಡಿಎ ಮೈತ್ರಿ ಪಕ್ಷವು 125 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.
ಆರ್ಜೆಡಿ ನೇತೃತ್ವದ ಮಹಾಘಟಬಂಧನ್ 110 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಹುಮತದ ಅಂಚಿಗೆ ಬಂದು ಕೆಳಗಿಳಿದಿತ್ತು. ಇದರ ನಡುವೆ ಬಿಹಾರದಲ್ಲಿ ಎಡ ಪಕ್ಷಗಳಾದ ಸಿಪಿಐ (ಎಂ-ಎಲ್) ಬಹುತೇಕ ಮುಂಚೂಣಿಯ ಪಕ್ಷಗಳಾಗಿ ಹೊರಹೊಮ್ಮಿವೆ. ಇನ್ನು ಓವೈಸಿ ನೇತೃತ್ವದ ಪಕ್ಷವು ಸುಮಾರು 5 ಸ್ಥಾನಗಳನ್ನು ಗೆದ್ದುಕೊಂಡಿದೆ.
ಇದನ್ನೂ ಓದಿ: ಬಿಹಾರದಲ್ಲಿ ಎಡಪಕ್ಷಗಳ ಗೆಲುವು: ಒಂದು ವಿಶ್ಲೇಷಣೆ
ಈ ನಡುವೆ ತೇಜಸ್ವಿ ಯಾದವ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮತ ಮರು ಎಣಿಕೆಗೆ ಒತ್ತಾಯಿಸಿ ಅಭಿಯಾನವನ್ನು ಆರಂಭಿಸಿದ್ದಾರೆ. ಮತ್ತೊಂದು ಕಡೆ ಈ ಬಾರಿ ನಿತೀಶ್ ಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.
ಈ ಎಲ್ಲಾ ಗೊಂದಲಗಳಿಗೆ ಇಂದು ತೆರೆ ಬೀಳಲಿದ್ದು, ಎನ್ಡಿಎ ತನ್ನ ನಿರ್ಧಾರವನ್ನು ಇನ್ನೇನು ಪ್ರಕಟಿಸಲಿದೆ.
ಇದನ್ನೂ ಓದಿ: ಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್ಜೆಪಿಯ ಚಿರಾಗ್ ಪಾಸ್ವಾನ್!