Homeಮುಖಪುಟಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಬಿಹಾರವು ಸ್ವಯಂಪ್ರೇರಿತವಾಗಿ ತನ್ನ ಪರ್ಯಾಯವನ್ನು ಕಂಡುಕೊಳ್ಳುತ್ತದೆ. ಇದಕ್ಕೆ ಒಂದು ವಾರ ತೆಗೆದುಕೊಳ್ಳಬಹುದು, ಹತ್ತು ದಿನ ಅಥವಾ 1 ತಿಂಗಳು ತೆಗೆದುಕೊಳ್ಳಬಹುದು. ಆದರೆ ಇದು ಖಂಡಿತ ಸಂಭವಿಸುತ್ತದೆ- ಮನೋಜ್ ಝಾ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ಎನ್‌ಡಿಎ ಸ್ಪಷ್ಟ ಬಹುಮತಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರವನ್ನು ರಚಿಸಲು ಶಕ್ತವಾಗಿದೆ. ಇಂದು ಬಿಹಾರ ಮುಖ್ಯಮಂತ್ರಿ ಮತ್ತು ಇತರೆ ಅಂಶಗಳನ್ನು ನಿರ್ಧರಿಸಲು ಎನ್‌ಡಿಎ ಸಭೆ ಸೇರಿದೆ. ನಿತೀಶ್‌ ಕುಮಾರ್ ಅವರೇ ಮುಖ್ಯಮಂತ್ರಿ ಎಂಬುದನ್ನು ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಬಹುಪಾಲು ನಾಯಕರು ಖಚಿತಪಡಿಸಿದ್ದಾರೆ. ಆದರೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ನಡುವೆ ಆರ್‌ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸ್ಥಾನ ಪಡೆದ, ಜನಾದೇಶ ಇಲ್ಲದವರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಈ ಕುರಿತು ಮನೋಜ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಎಎನ್‌ಐ, “ಕೇವಲ 40 ಸೀಟುಗಳನ್ನು ಗೆದ್ದಿರುವವರು ಹೇಗೆ ಮುಖ್ಯಮಂತ್ರಿಯಾಗಲು ಸಾಧ್ಯ? ಜನಾದೇಶವು ಆತನ ವಿರುದ್ಧವಾಗಿದೆ. ಆತ ನಿರ್ಣಾಮವಾಗುತ್ತಾನೆ ಮತ್ತು ಅದನ್ನು ನಿರ್ಧರಿಸಬೇಕಿದೆ. ಬಿಹಾರವು ಸ್ವಯಂಪ್ರೇರಿತವಾಗಿ ತನ್ನ ಪರ್ಯಾಯವನ್ನು ಕಂಡುಕೊಳ್ಳುತ್ತದೆ. ಇದಕ್ಕೆ ಒಂದು ವಾರ ತೆಗೆದುಕೊಳ್ಳಬಹುದು, ಹತ್ತು ದಿನ ಅಥವಾ 1 ತಿಂಗಳು ತೆಗೆದುಕೊಳ್ಳಬಹುದು. ಆದರೆ ಇದು ಖಂಡಿತ ಸಂಭವಿಸುತ್ತದೆ” ಎಂದು ಹೇಳಿರುವುದಾಗಿ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷವು ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 75 ಸ್ಥಾನಗಳನ್ನು ಗೆದ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದುಕೊಂಡಿದೆ. ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಕೇವಲ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಎನ್‌ಡಿಎ ಮೈತ್ರಿ ಪಕ್ಷವು 125 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 110 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಹುಮತದ ಅಂಚಿಗೆ ಬಂದು ಕೆಳಗಿಳಿದಿತ್ತು. ಇದರ ನಡುವೆ ಬಿಹಾರದಲ್ಲಿ ಎಡ ಪಕ್ಷಗಳಾದ ಸಿಪಿಐ (ಎಂ-ಎಲ್) ಬಹುತೇಕ ಮುಂಚೂಣಿಯ ಪಕ್ಷಗಳಾಗಿ ಹೊರಹೊಮ್ಮಿವೆ. ಇನ್ನು ಓವೈಸಿ ನೇತೃತ್ವದ ಪಕ್ಷವು ಸುಮಾರು 5 ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: ಬಿಹಾರದಲ್ಲಿ ಎಡಪಕ್ಷಗಳ ಗೆಲುವು: ಒಂದು ವಿಶ್ಲೇಷಣೆ

ಈ ನಡುವೆ ತೇಜಸ್ವಿ ಯಾದವ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮತ ಮರು ಎಣಿಕೆಗೆ ಒತ್ತಾಯಿಸಿ ಅಭಿಯಾನವನ್ನು ಆರಂಭಿಸಿದ್ದಾರೆ. ಮತ್ತೊಂದು ಕಡೆ ಈ ಬಾರಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಈ ಎಲ್ಲಾ ಗೊಂದಲಗಳಿಗೆ ಇಂದು ತೆರೆ ಬೀಳಲಿದ್ದು, ಎನ್‌ಡಿಎ ತನ್ನ ನಿರ್ಧಾರವನ್ನು ಇನ್ನೇನು ಪ್ರಕಟಿಸಲಿದೆ.


ಇದನ್ನೂ ಓದಿ: ಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್‌ಜೆಪಿಯ ಚಿರಾಗ್ ಪಾಸ್ವಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...