Homeಮುಖಪುಟಹೈಕೋರ್ಟ್‌ ಜಡ್ಜ್‌ ನಕಲಿ ಪ್ರೊಫೈಲ್ ಸೃಷ್ಟಿ: IPS ಅಧಿಕಾರಿ ನ್ಯಾಯಾಲಯಕ್ಕೆ ಶರಣು

ಹೈಕೋರ್ಟ್‌ ಜಡ್ಜ್‌ ನಕಲಿ ಪ್ರೊಫೈಲ್ ಸೃಷ್ಟಿ: IPS ಅಧಿಕಾರಿ ನ್ಯಾಯಾಲಯಕ್ಕೆ ಶರಣು

- Advertisement -
- Advertisement -

ಪಾಟ್ನಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯೊಬ್ಬರ ನಕಲಿ ವಾಟ್ಸಾಪ್ ಪ್ರೊಫೈಲ್ ಸೃಷ್ಟಿಸಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಐಪಿಎಸ್ ಅಧಿಕಾರಿ ಆದಿತ್ಯ ಕುಮಾರ್ ಅವರು ಪಾಟ್ನಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಒಂದು ವರ್ಷಕ್ಕೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದ 2011ರ ಬ್ಯಾಚ್‌ನ ಐಪಿಎಸ್ ಅಧಿಕಾರಿ, ಸುಪ್ರೀಂಕೋರ್ಟ್‌ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ನ್ಯಾಯಾಲಯಕ್ಕೆ ಶರಣಾದರು.

ಎಸ್ಪ್ಪಿ ಶ್ರೇಣಿಯ ಪೊಲೀಸ್ ಅಧಿಕಾರಿ ಕುಮಾರ್, ಮಾಜಿ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರ ಫೋಟೋವನ್ನು ಪ್ರೊಫೈಲ್ ಚಿತ್ರವನ್ನಾಗಿ ಹೊಂದಿರುವ ನಕಲಿ ವಾಟ್ಸಾಪ್ ಖಾತೆಯ ಮೂಲಕ ಆಗಿನ ಬಿಹಾರ ಡಿಜಿಪಿ ಎಸ್‌ಕೆ ಸಿಂಘಾಲ್ ಅವರನ್ನು ವಂಚಿಸಿದ್ದಾರೆ.

ಈ ಕುರಿತು ಕೆಳ ನ್ಯಾಯಾಲಯಗಳು ಜಾಮೀನು ಅರ್ಜಿ ತಿರಸ್ಕರಿಸಿದ ನಂತರ ಕುಮಾರ್ ಸುಪ್ರೀಂಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದರು. ಆದರೆ ಉನ್ನತ ನ್ಯಾಯಾಲಯವು ಮನವಿಯನ್ನು ರದ್ದುಗೊಳಿಸಿತು ಮತ್ತು ಶರಣಾಗುವಂತೆ ಐಪಿಎಸ್ ಅಧಿಕಾರಿಗೆ ಸೂಚಿಸಿತ್ತು. ಮುಖ್ಯವಾಗಿ ಅಪರಾಧಗಳ ಗಂಭೀರತೆ ಮತ್ತು ತನಿಖೆಗೆ ಸಂಬಂಧಿಸಿ ಸ್ಪಷ್ಟವಾದ ಅಸಹಕಾರದ ಕಾರಣದಿಂದಾಗಿ ಅರ್ಜಿದಾರರು ನಿರೀಕ್ಷಣಾ ಜಾಮೀನಿನ ಪ್ರಯೋಜನಕ್ಕೆ ಅರ್ಹರಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.

ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ, ಅನಿರುದ್ಧ ಬೋಸ್ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರ ವಿಭಾಗೀಯ ಪೀಠವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಕುಮಾರ್‌ಗೆ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ.

ಈ ಪ್ರಕರಣದ ಸಂಪೂರ್ಣ ಕೇಸ್‌ ಡೈರಿಯನ್ನು ಮುಂದಿನ ವಿಚಾರಣೆಯ ಡಿ.12ರಂದು ಸೀಲ್‌ ಮಾಡಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಹಸ್ತಾಂತರಿಸುವಂತೆ ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ.

2022ರ ಅ.15ರಂದು ಮದ್ಯದ ಮಾಫಿಯಾ ಜೊತೆ ನಂಟಿನ ಆರೋಪದಲ್ಲಿ ಗಯಾದ ಫತೇಪುರ್ ಪೊಲೀಸ್ ಠಾಣೆಯಲ್ಲಿ ಆರ್ಥಿಕ ಅಪರಾಧಗಳ ಘಟಕವು ಕುಮಾರ್‌ ವಿರುದ್ಧ ಪ್ರಕರಣವನ್ನು ದಾಖಲಿಸಿದೆ. ಆ ಬಳಿಕ ಐಪಿಎಸ್ ಅಧಿಕಾರಿ ಆದಿತ್ಯ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಕುಮಾರ್‌ ವಿರುದ್ಧದ ಪ್ರಕರಣವನ್ನು ಮುಚ್ಚಿಹಾಕಲು ಅವರ ಸಹಚರ ಅಭಿಷೇಕ್ ಅಗರ್ವಾಲ್ ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರ ನಕಲಿ ವಾಟ್ಸಾಪ್‌ ಪ್ರೊಫೈಲ್ ಸೃಷ್ಟಿಸಿದ್ದಾನೆ ಮತ್ತು ಆಗಿನ ಬಿಹಾರದ ಡಿಜಿಪಿ ಎಸ್‌ಕೆ ಸಿಂಘಾಲ್‌ನ್ನು ಸಂಪರ್ಕಿಸಿ ಕುಮಾರ್ ವಿರುದ್ಧದ ಪ್ರಕರಣವನ್ನು ಕೈಬಿಡುವಂತೆ ಕೇಳಿಕೊಂಡಿದ್ದಾನೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...