Homeಮುಖಪುಟಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

- Advertisement -
- Advertisement -

ಬಿಹಾರ ಆಡಳಿತ ಪಕ್ಷವಾಗಿರುವ ಜೆಡಿಯುನ ಶಾಸಕರೊಬ್ಬರು ರೈಲಿನಲ್ಲಿ ಕೇವಲ ಒಳಉಡುಪಿನಲ್ಲಿ ಓಡಾಡಿರುವ ಘಟನೆ ನಡೆದಿದೆ. ಘಟನೆಯು ಕ್ಯಾಮಾರಾದಲ್ಲಿ ಸೆರೆಯಾಗಿದ್ದು, ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗುವಂತೆ ನಡೆದುಕೊಂಡವರನ್ನು ಭಾಗಲ್ಪುರ ಜಿಲ್ಲೆಯ ಗೋಪಾಲಪುರ ವಿಧಾನ ಸಭೆಯ ಶಾಸಕರಾದ ನರೇಂದ್ರ ಕುಮಾರ್ ನೀರಜ್ ಅಲಿಯಾಸ್ ಗೋಪಾಲ್ ಮಂಡಲ್ ಎಂದು ಗುರುತಿಸಲಾಗಿದೆ.

ಅವರು ಪಾಟ್ನಾದಿಂದ ದೆಹಲಿಗೆ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್‌ನ ಎ -1 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು.

ರೈಲು ಪಾಟ್ನಾದಿಂದ ಹೊರಟ ತಕ್ಷಣ, ಶಾಸಕ ತನ್ನ ಒಳ ಉಡುಪುಗಳಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ದ ಸಹ ಪ್ರಯಾಣಿಕರು ಪ್ರತಿಭಟಿಸಿದ ನಂತರವೂ, ಅವರು ಅದೇ ಉಡುಪಿನಲ್ಲಿ ಶೌಚಾಲಯದ ಕಡೆಗೆ ನಡೆಯುತ್ತಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ಆದರೆ ಶಾಸಕ ತನ್ನ ನಡೆಯನ್ನು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. ರೈಲು ಹತ್ತಿದ ಕೆಲವೇ ನಿಮಿಷಗಳಲ್ಲಿ ತಾನು ಅನಾರೋಗ್ಯಕ್ಕೆ ಒಳಗಾದ ಕಾರಣ ತನಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

“ನಾನು ರೈಲು ಹತ್ತಿದ ತಕ್ಷಣ, ಬೇದಿ ಪ್ರಾರಂಭವಾಗಿತ್ತು. ಹಾಗಾಗಿ ನಾನು ನನ್ನ ಕುರ್ತಾ ಪೈಜಾಮಾವನ್ನು ತೆಗೆದು ಟವಲ್ ಅನ್ನು ನನ್ನ ಭುಜದ ಮೇಲೆ ಹಾಕಿಕೊಂಡೆ. ಅದನ್ನು ನನ್ನ ಸೊಂಟಕ್ಕೆ ಸುತ್ತಲು ನನಗೆ ಸಮಯವಿರಲಿಲ್ಲ. ಹಾಗಾಗಿ ನಾನು ಒಳ ಉಡುಪುಗಳನ್ನು ಮಾತ್ರ ಧರಿಸಿ ಓಡಾಡಿದ್ದೆ” ಎಂದು ಮಂಡಲ್ ಹೇಳಿದ್ದಾರೆ.

ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆಗೆ ಮಾಹಿತಿ ನೀಡಿದ್ದರೂ, ಶಾಸಕರ ವಿರುದ್ಧ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ ಕಂಪಾರ್ಟ್ಮೆಂಟ್‌‌‌ನಲ್ಲಿ ಮಹಿಳಾ ಪ್ರಯಾಣಿಕರು ಇರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಬಜೆಟ್ 2021-22: ಉಳ್ಳವರನ್ನು, ಉದ್ಯಮಪತಿಗಳನ್ನು, ವಾಣಿಜ್ಯೋದ್ಯಮಿಗಳನ್ನು ತಣಿಸಲು ಪ್ರಯತ್ನಿಸಿರುವ ವೈಭವದ ಮಾತಿನ ಬಜೆಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...