Homeಮುಖಪುಟಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

- Advertisement -
- Advertisement -

ಬಿಹಾರ ಆಡಳಿತ ಪಕ್ಷವಾಗಿರುವ ಜೆಡಿಯುನ ಶಾಸಕರೊಬ್ಬರು ರೈಲಿನಲ್ಲಿ ಕೇವಲ ಒಳಉಡುಪಿನಲ್ಲಿ ಓಡಾಡಿರುವ ಘಟನೆ ನಡೆದಿದೆ. ಘಟನೆಯು ಕ್ಯಾಮಾರಾದಲ್ಲಿ ಸೆರೆಯಾಗಿದ್ದು, ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗುವಂತೆ ನಡೆದುಕೊಂಡವರನ್ನು ಭಾಗಲ್ಪುರ ಜಿಲ್ಲೆಯ ಗೋಪಾಲಪುರ ವಿಧಾನ ಸಭೆಯ ಶಾಸಕರಾದ ನರೇಂದ್ರ ಕುಮಾರ್ ನೀರಜ್ ಅಲಿಯಾಸ್ ಗೋಪಾಲ್ ಮಂಡಲ್ ಎಂದು ಗುರುತಿಸಲಾಗಿದೆ.

ಅವರು ಪಾಟ್ನಾದಿಂದ ದೆಹಲಿಗೆ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್‌ನ ಎ -1 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು.

ರೈಲು ಪಾಟ್ನಾದಿಂದ ಹೊರಟ ತಕ್ಷಣ, ಶಾಸಕ ತನ್ನ ಒಳ ಉಡುಪುಗಳಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ದ ಸಹ ಪ್ರಯಾಣಿಕರು ಪ್ರತಿಭಟಿಸಿದ ನಂತರವೂ, ಅವರು ಅದೇ ಉಡುಪಿನಲ್ಲಿ ಶೌಚಾಲಯದ ಕಡೆಗೆ ನಡೆಯುತ್ತಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ಆದರೆ ಶಾಸಕ ತನ್ನ ನಡೆಯನ್ನು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. ರೈಲು ಹತ್ತಿದ ಕೆಲವೇ ನಿಮಿಷಗಳಲ್ಲಿ ತಾನು ಅನಾರೋಗ್ಯಕ್ಕೆ ಒಳಗಾದ ಕಾರಣ ತನಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

“ನಾನು ರೈಲು ಹತ್ತಿದ ತಕ್ಷಣ, ಬೇದಿ ಪ್ರಾರಂಭವಾಗಿತ್ತು. ಹಾಗಾಗಿ ನಾನು ನನ್ನ ಕುರ್ತಾ ಪೈಜಾಮಾವನ್ನು ತೆಗೆದು ಟವಲ್ ಅನ್ನು ನನ್ನ ಭುಜದ ಮೇಲೆ ಹಾಕಿಕೊಂಡೆ. ಅದನ್ನು ನನ್ನ ಸೊಂಟಕ್ಕೆ ಸುತ್ತಲು ನನಗೆ ಸಮಯವಿರಲಿಲ್ಲ. ಹಾಗಾಗಿ ನಾನು ಒಳ ಉಡುಪುಗಳನ್ನು ಮಾತ್ರ ಧರಿಸಿ ಓಡಾಡಿದ್ದೆ” ಎಂದು ಮಂಡಲ್ ಹೇಳಿದ್ದಾರೆ.

ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆಗೆ ಮಾಹಿತಿ ನೀಡಿದ್ದರೂ, ಶಾಸಕರ ವಿರುದ್ಧ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ ಕಂಪಾರ್ಟ್ಮೆಂಟ್‌‌‌ನಲ್ಲಿ ಮಹಿಳಾ ಪ್ರಯಾಣಿಕರು ಇರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಬಜೆಟ್ 2021-22: ಉಳ್ಳವರನ್ನು, ಉದ್ಯಮಪತಿಗಳನ್ನು, ವಾಣಿಜ್ಯೋದ್ಯಮಿಗಳನ್ನು ತಣಿಸಲು ಪ್ರಯತ್ನಿಸಿರುವ ವೈಭವದ ಮಾತಿನ ಬಜೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...