Homeಕರ್ನಾಟಕUnion Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ?...

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಕೇಂದ್ರ ಬಜೆಟ್‌ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೂಡಾ, ಕೇಂದ್ರ ಬಜೆಟ್‌ನ ಈ ದಿನ ಕರ್ನಾಟಕಕ್ಕೆ ಕರಾಳ ದಿನ ಎಂದು ಬಣ್ಣಿಸಿದ್ದಾರೆ. Union Budget 2025

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಖಂಡ್ರೆ ಅವರು, “ಬಜೆಟ್‌ನಲ್ಲಿ ಎಂ.ಎಸ್.ಪಿ. (ಕನಿಷ್ಠ ಬೆಂಬಲ ಬೆಲೆ) ಕಾಯ್ದೆ ಕುರಿತು ಯಾವುದೇ ಘೋಷಣೆ ಮಾಡದಿರುವುದು ಅನ್ನದಾತರ ಮೇಲೆ ದೊಡ್ಡ ಅನ್ಯಾಯವಾಗಿದೆ. ರೈತರು ಬೆಳೆದ ಬೆಳೆಗೆ ಖಚಿತ ಬೆಲೆ ನಿರ್ಧಾರವಾಗಬೇಕೆಂಬ ಬಹುದಿನದ ಬೇಡಿಕೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಪ್ರಕೃತಿ ವಿಕೋಪದ ಹೊಡೆತದಿಂದ ತತ್ತರಿಸಿರುವ ರೈತರ ಸಾಲ ಮನ್ನಾ ಕುರಿತು ಯಾವುದೇ ಘೋಷಣೆ ಇಲ್ಲ ಎಂಬುದು ವಿಷಾದನೀಯ” ಎಂದು ಹೇಳಿದ್ದಾರೆ. Union Budget 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಅಸಡ್ಡೆ ತೋರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕದ 7 ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ₹5000 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಆದರೆ, ಇದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಈ ಪ್ರದೇಶದ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟಿಲ್ಲ ಎಂಬುದು ದೌರ್ಭಾಗ್ಯಕರ” ಎಂದು ಅವರು ಹೇಳಿದ್ದಾರೆ.

“ಎನ್.ಡಿ.ಎ. ಆಡಳಿತದ 11 ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಸಾಕಷ್ಟು ಉಲ್ಭಣಿಸಿದೆ. ಈ ಬಜೆಟ್‌ನಲ್ಲಿ ಯುವಕರ ಕೈಗೆ ಉದ್ಯೋಗ ನೀಡುವ ಯಾವುದೇ ಗಂಭೀರ ಯೋಜನೆ ರೂಪಿಸದಿರುವುದು ಖಂಡನಾರ್ಹ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ, ಬಿಜೆಪಿ ನೇತೃತ್ವದ ಸರ್ಕಾರ ಎನ್.ಡಿ.ಎ.ಯೇತರ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿರುವುದು ಅಕ್ಷಮ್ಯ. ರಾಜ್ಯಗಳ ನಡುವೆ ರಾಜಕೀಯ ವ್ಯತ್ಯಾಸಗಳನ್ನು ಮೆಟ್ಟಿಲು ಮಾಡಿಕೊಳ್ಳುವ ನೀತಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಬೇರೇ ಕಡೆ ಗಂಭೀರ ಯೋಜನೆಗಳನ್ನು ಘೋಷಿಸಿ, ಕರ್ನಾಟಕದ ಭಾಗ್ಯ ತಿರಸ್ಕರಿಸಿರುವುದು ಅಕ್ಷಮ್ಯ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದೆ? – ಸಚಿವ ಕೃಷ್ಣಬೈರೇಗೌಡ

ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರತಿಕ್ರಿಯಿಸಿ, “ಬಜೆಟ್ ಕರ್ನಾಟಕಕ್ಕೆ ಕರಾಳ ದಿನವಾಗಿದೆ. ಕರ್ನಾಟಕದ ಯಾವ ಬೇಡಿಕೆಯೂ ಈಡೇರಿಲ್ಲ. ಕರ್ನಾಟಕಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ರಾಜ್ಯದ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರ ರಾಜ್ಯಕ್ಕೆ ಐದಾರು ಯೋಜನೆ ಕೊಟ್ಟಿದ್ದಾರೆ. ಹಾಗಾದರೆ, ಕರ್ನಾಟಕದ ನಾವು ಕಡ್ಲೆ ಬೀಜ ತಿನ್ನೋಕೆ ಇರುವುದೆ? ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬರೀ ಚೊಂಬು ಸಿಕ್ಕಿದೆ. ಇದು ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹ. 11,495 ಕೋಟಿ ಫೈನಾನ್ಸ್ ಕಮೀಷನ್ ಕೊಡಲು ಹೇಳಿತ್ತು. ಬರಲೇ ಬೇಕಾದ ಅನುದಾನ ದ ಬಗ್ಗೆ ಚಕಾರ ಎತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ಪೈಸಾ ಕೂಡ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ್ಕೆ ಏನೂ ನೀಡಿಲ್ಲ.” ಎಂದು ಹೇಳಿದ್ದಾರೆ.

“ಬೆಂಗಳೂರು ದೇಶಕ್ಕೆ ಉದ್ಯೋಗ ಕೊಡುತ್ತಿದೆ. ರಪ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ಕೊಡುತ್ತಿದೆ. ಆದರೂ ಬಜೆಟ್‌ನಲ್ಲಿ ಏನು ಕೊಟ್ಟಿಲ್ಲ. ಯುಪಿ, ಬಿಹಾರ ಮಾತ್ರ ಕೇಂದ್ರಕ್ಕೆ ಕಾಣುತ್ತಿದೆ, ಕರ್ನಾಟಕ ಕಾಣುತ್ತಿಲ್ಲ. ತೆರಿಗೆ ಕಟ್ಟಿದ ಕನ್ನಡಿಗರು ಕಾಣುತ್ತಿಲ್ಲ. ನಮ್ಮ ರಾಜ್ಯ ಕೇವಲ ದುಡಿಯವ ಆಳಿನ ರೀತಿ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಹಾಗೇ ಸರ್ಕಾರದ ಪರವಾಗಿ ಇದನ್ನ ನಾನು ಖಂಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...