Homeಮುಖಪುಟಬಿಹಾರ ವಿಧಾನಸಭೆ: ವಿಶ್ವಾಸ ಸಾಬೀತುಪಡಿಸಿದ ನಿತೀಶ್ ಕುಮಾರ್, ಸದನ ಬಹಿಷ್ಕರಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ: ವಿಶ್ವಾಸ ಸಾಬೀತುಪಡಿಸಿದ ನಿತೀಶ್ ಕುಮಾರ್, ಸದನ ಬಹಿಷ್ಕರಿಸಿದ ಆರ್‌ಜೆಡಿ

- Advertisement -
- Advertisement -

ಬಿಹಾರ ವಿಧಾನಸಭೆಯಲ್ಲಿ ಸೋಮವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 130-0 ಅಂತರದಲ್ಲಿ ಗೆದ್ದಿದ್ದಾರೆ. ಈ ವೇಳೆ ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸದನ ಬಹಿಷ್ಕರಿಸಿದರು.

ಜೆಡಿಯು, ಆರ್‌ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟವಾದ ಮಹಾಘಟಬಂಧನ್ ತೊರೆದು, ಎನ್‌ಡಿಎ ಒಕ್ಕೂಟಕ್ಕೆ ನಿತೀಶ್ ಜಿಗಿದ ಎರಡು ವಾರಗಳ ನಂತರ ವಿಶ್ವಾಸ ಮತ ಪರೀಕ್ಷೆ ಇಂದು ನಡೆಯಿತು. ಇದೇ ಅಧಿವೇಶನದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ದ ಮೂವರು ಶಾಸಕರಾದ ಪ್ರಹ್ಲಾದ್ ಯಾದವ್, ನೀಲಂ ದೇವಿ ಮತ್ತು ಚೇತನ್ ಆನಂದ್ ಎನ್‌ಡಿಎ ಒಕ್ಕೂಟಕ್ಕೆ ಬೆಂಬಲಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ‘ಕಳೆದ 15 ವರ್ಷಗಳಿಂದ ಲಾಲು ಪ್ರಸಾದ್-ರಾಬ್ರಿ ದೇವಿ ಸರ್ಕಾರಗಳು ಬಿಹಾರದ ಅಭಿವೃದ್ಧಿಗೆ ಏನನ್ನೂ ಮಾಡಿಲ್ಲ’ ಎಂದು ಆರೋಪಿಸಿದರು.

ಮತದಾನದ ಮೊದಲು ಸ್ಪೀಕರ್ ಅವಧ್ ಬಿಹಾರಿ ಚೌಧರಿ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಸಭೆಯು ಅಂಗೀಕರಿಸಿತು. ಉಚ್ಛಾಟನೆಯ ಪರವಾಗಿ 125 ಸದಸ್ಯರು ಮತ ಚಲಾಯಿಸಿದರು. ವಿಶ್ವಾಸಮತಕ್ಕೂ ಮುನ್ನ, ‘ಆಪರೇಷನ್’ ಕಳವಳದ ನಡುವೆ ಕಾಂಗ್ರೆಸ್ ಕಳೆದ ವಾರವೆ ತನ್ನ ಶಾಸಕರನ್ನು ಹೈದರಾಬಾದ್‌ಗೆ ಸ್ಥಳಾಂತರಿಸಿತ್ತು. ಆದರೆ, ಆರ್‌ಜೆಡಿಯ ಶಾಸಕರು ತೇಜಸ್ವಿ ಯಾದವ್ ಅವರ ಮನೆಯಲ್ಲಿ ಒಟ್ಟಿಗೆ ಇರಲು ನಿರ್ಧರಿಸಿದ್ದರು. ಬಿಜೆಪಿ ನಾಯಕ ನಿತ್ಯಾನಂದ ರೈ ಕೇಸರಿ ಪಕ್ಷದ ಎಲ್ಲಾ 78 ಶಾಸಕರನ್ನು ನಿರ್ವಹಿಸಿದರು. ಅವರೆಲ್ಲರೂ ಪಾಟ್ನಾದ ಹೋಟೆಲ್‌ನಲ್ಲಿ ಇದ್ದರು. ನಿತೀಶ್ ಕುಮಾರ್ ಅವರ ಜೆಡಿಯು ತನ್ನ 40 ಶಾಸಕರನ್ನು ರಾಜ್ಯ ರಾಜಧಾನಿಯ ಮತ್ತೊಂದು ಹೋಟೆಲ್‌ನಲ್ಲಿ ತಂಗುವಂತೆ ಮಾಡಿತ್ತು.

ವಿಶ್ವಾಸ ಮತಕ್ಕೆ ನಿಮಿಷಗಳ ಮೊದಲು, ಆರ್‌ಜೆಡಿ ನೇತೃತ್ವದ ಪ್ರತಿಪಕ್ಷಗಳು ಸದನದಿಂದ ಹೊರನಡೆದವು. ಜನತಾ ದಳ (ಯುನೈಟೆಡ್) ಮುಖ್ಯಸ್ಥರು ತೇಜಸ್ವಿ ಯಾದವ್ ಅವರ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರು.

ಪ್ರತಿಪಕ್ಷಗಳ ಅನುಪಸ್ಥಿತಿಯಲ್ಲಿ, ನಿತೀಶ್‌ ಕುಮಾರ್ ಮೊದಲು ಧ್ವನಿ ಮತದ ಮೂಲಕ ಬಹುಮತವನ್ನು ಸಾಬೀತುಪಡಿಸಿದರು. ನಂತರ, ಅವರು ಕೈಯಿಂದ ಮತದಾನಕ್ಕೆ ಒತ್ತಾಯಿಸಿದರು. ಅವರು ವಿಶ್ವಾಸ ಮತವನ್ನು ಗೆದ್ದರು, ಅವರ ಸರ್ಕಾರದ ಪರವಾಗಿ 129 ಮತಗಳನ್ನು ಪಡೆದರು.

ಕಳೆದ ತಿಂಗಳು ಮಿತ್ರಪಕ್ಷ ಆರ್‌ಜೆಡಿಯನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಅವರ ಪೋಷಕರಾದ ಲಾಲು ಯಾದವ್ ಮತ್ತು ರಾಬ್ರಿ ದೇವಿ ಅವರ ಮೇಲೆ ವಾಗ್ದಾಳಿ ನಡೆಸಿದರು. ‘ಇದಕ್ಕಿಂತ ಮೊದಲು, ಅವರ ತಂದೆ ಮತ್ತು ತಾಯಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು, ಆಗ ಬಿಹಾರದಲ್ಲಿ ಏನಾಯಿತು? ಆ ಸಮಯದಲ್ಲಿ ಯಾರಾದರೂ ರಾತ್ರಿಯಲ್ಲಿ ಹೊರಗೆ ಹೋಗಲು ಧೈರ್ಯ ಮಾಡುತ್ತಾರೆಯೇ? ಯಾವುದೇ ರಸ್ತೆ ಇದೆಯೇ?’ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...