Homeಮುಖಪುಟಬಿಹಾರ ವಿಧಾನಸಭೆ: ವಿಶ್ವಾಸ ಸಾಬೀತುಪಡಿಸಿದ ನಿತೀಶ್ ಕುಮಾರ್, ಸದನ ಬಹಿಷ್ಕರಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ: ವಿಶ್ವಾಸ ಸಾಬೀತುಪಡಿಸಿದ ನಿತೀಶ್ ಕುಮಾರ್, ಸದನ ಬಹಿಷ್ಕರಿಸಿದ ಆರ್‌ಜೆಡಿ

- Advertisement -
- Advertisement -

ಬಿಹಾರ ವಿಧಾನಸಭೆಯಲ್ಲಿ ಸೋಮವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 130-0 ಅಂತರದಲ್ಲಿ ಗೆದ್ದಿದ್ದಾರೆ. ಈ ವೇಳೆ ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸದನ ಬಹಿಷ್ಕರಿಸಿದರು.

ಜೆಡಿಯು, ಆರ್‌ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟವಾದ ಮಹಾಘಟಬಂಧನ್ ತೊರೆದು, ಎನ್‌ಡಿಎ ಒಕ್ಕೂಟಕ್ಕೆ ನಿತೀಶ್ ಜಿಗಿದ ಎರಡು ವಾರಗಳ ನಂತರ ವಿಶ್ವಾಸ ಮತ ಪರೀಕ್ಷೆ ಇಂದು ನಡೆಯಿತು. ಇದೇ ಅಧಿವೇಶನದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ದ ಮೂವರು ಶಾಸಕರಾದ ಪ್ರಹ್ಲಾದ್ ಯಾದವ್, ನೀಲಂ ದೇವಿ ಮತ್ತು ಚೇತನ್ ಆನಂದ್ ಎನ್‌ಡಿಎ ಒಕ್ಕೂಟಕ್ಕೆ ಬೆಂಬಲಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ‘ಕಳೆದ 15 ವರ್ಷಗಳಿಂದ ಲಾಲು ಪ್ರಸಾದ್-ರಾಬ್ರಿ ದೇವಿ ಸರ್ಕಾರಗಳು ಬಿಹಾರದ ಅಭಿವೃದ್ಧಿಗೆ ಏನನ್ನೂ ಮಾಡಿಲ್ಲ’ ಎಂದು ಆರೋಪಿಸಿದರು.

ಮತದಾನದ ಮೊದಲು ಸ್ಪೀಕರ್ ಅವಧ್ ಬಿಹಾರಿ ಚೌಧರಿ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಸಭೆಯು ಅಂಗೀಕರಿಸಿತು. ಉಚ್ಛಾಟನೆಯ ಪರವಾಗಿ 125 ಸದಸ್ಯರು ಮತ ಚಲಾಯಿಸಿದರು. ವಿಶ್ವಾಸಮತಕ್ಕೂ ಮುನ್ನ, ‘ಆಪರೇಷನ್’ ಕಳವಳದ ನಡುವೆ ಕಾಂಗ್ರೆಸ್ ಕಳೆದ ವಾರವೆ ತನ್ನ ಶಾಸಕರನ್ನು ಹೈದರಾಬಾದ್‌ಗೆ ಸ್ಥಳಾಂತರಿಸಿತ್ತು. ಆದರೆ, ಆರ್‌ಜೆಡಿಯ ಶಾಸಕರು ತೇಜಸ್ವಿ ಯಾದವ್ ಅವರ ಮನೆಯಲ್ಲಿ ಒಟ್ಟಿಗೆ ಇರಲು ನಿರ್ಧರಿಸಿದ್ದರು. ಬಿಜೆಪಿ ನಾಯಕ ನಿತ್ಯಾನಂದ ರೈ ಕೇಸರಿ ಪಕ್ಷದ ಎಲ್ಲಾ 78 ಶಾಸಕರನ್ನು ನಿರ್ವಹಿಸಿದರು. ಅವರೆಲ್ಲರೂ ಪಾಟ್ನಾದ ಹೋಟೆಲ್‌ನಲ್ಲಿ ಇದ್ದರು. ನಿತೀಶ್ ಕುಮಾರ್ ಅವರ ಜೆಡಿಯು ತನ್ನ 40 ಶಾಸಕರನ್ನು ರಾಜ್ಯ ರಾಜಧಾನಿಯ ಮತ್ತೊಂದು ಹೋಟೆಲ್‌ನಲ್ಲಿ ತಂಗುವಂತೆ ಮಾಡಿತ್ತು.

ವಿಶ್ವಾಸ ಮತಕ್ಕೆ ನಿಮಿಷಗಳ ಮೊದಲು, ಆರ್‌ಜೆಡಿ ನೇತೃತ್ವದ ಪ್ರತಿಪಕ್ಷಗಳು ಸದನದಿಂದ ಹೊರನಡೆದವು. ಜನತಾ ದಳ (ಯುನೈಟೆಡ್) ಮುಖ್ಯಸ್ಥರು ತೇಜಸ್ವಿ ಯಾದವ್ ಅವರ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರು.

ಪ್ರತಿಪಕ್ಷಗಳ ಅನುಪಸ್ಥಿತಿಯಲ್ಲಿ, ನಿತೀಶ್‌ ಕುಮಾರ್ ಮೊದಲು ಧ್ವನಿ ಮತದ ಮೂಲಕ ಬಹುಮತವನ್ನು ಸಾಬೀತುಪಡಿಸಿದರು. ನಂತರ, ಅವರು ಕೈಯಿಂದ ಮತದಾನಕ್ಕೆ ಒತ್ತಾಯಿಸಿದರು. ಅವರು ವಿಶ್ವಾಸ ಮತವನ್ನು ಗೆದ್ದರು, ಅವರ ಸರ್ಕಾರದ ಪರವಾಗಿ 129 ಮತಗಳನ್ನು ಪಡೆದರು.

ಕಳೆದ ತಿಂಗಳು ಮಿತ್ರಪಕ್ಷ ಆರ್‌ಜೆಡಿಯನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಅವರ ಪೋಷಕರಾದ ಲಾಲು ಯಾದವ್ ಮತ್ತು ರಾಬ್ರಿ ದೇವಿ ಅವರ ಮೇಲೆ ವಾಗ್ದಾಳಿ ನಡೆಸಿದರು. ‘ಇದಕ್ಕಿಂತ ಮೊದಲು, ಅವರ ತಂದೆ ಮತ್ತು ತಾಯಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು, ಆಗ ಬಿಹಾರದಲ್ಲಿ ಏನಾಯಿತು? ಆ ಸಮಯದಲ್ಲಿ ಯಾರಾದರೂ ರಾತ್ರಿಯಲ್ಲಿ ಹೊರಗೆ ಹೋಗಲು ಧೈರ್ಯ ಮಾಡುತ್ತಾರೆಯೇ? ಯಾವುದೇ ರಸ್ತೆ ಇದೆಯೇ?’ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...