Homeಮುಖಪುಟಬಿಹಾರ: ಲಾಲು ಪ್ರಸಾದ್‌ ಯಾದವ್‌ ನೇತೃತ್ವದ RJDಯೊಂದಿಗೆ ವಿಲೀನಗೊಂಡ LJD

ಬಿಹಾರ: ಲಾಲು ಪ್ರಸಾದ್‌ ಯಾದವ್‌ ನೇತೃತ್ವದ RJDಯೊಂದಿಗೆ ವಿಲೀನಗೊಂಡ LJD

ಲಾಲು ಪ್ರಸಾದ್ ಯಾದವ್‌ ಮತ್ತು ಶರದ್‌ ಯಾದವ್‌ 25 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ

- Advertisement -
- Advertisement -

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಅವರು ಭಾನುವಾರ ತಮ್ಮ ಲೋಕತಾಂತ್ರಿಕ ಜನತಾ ದಳವನ್ನು (ಎಲ್‌ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳದೊಂದಿಗೆ (ಆರ್‌ಜೆಡಿ) ವಿಲೀನಗೊಳಿಸಿದ್ದಾರೆ. ಉಭಯ ಪಕ್ಷಗಳ ವಿಲೀನವನ್ನು ಘೋಷಿಸಿದ ನಂತರ, ಶರದ್ ಯಾದವ್ ಈ ಕ್ರಮವು ‘ಸಂಯುಕ್ತ ವಿರೋಧ ಪಕ್ಷದ ರಚನೆಯ ಕಡೆಗಿನ ಮೊದಲ ಹೆಜ್ಜೆ’ ಎಂದು ಹೇಳಿದ್ದಾರೆ.

“ಆರ್‌ಜೆಡಿಯೊಂದಿಗೆ ನಮ್ಮ ಪಕ್ಷವನ್ನು ವಿಲೀನಗೊಳಿಸುವುದು ಪ್ರತಿಪಕ್ಷಗಳ ಒಗ್ಗಟ್ಟಿನ ಮೊದಲ ಹೆಜ್ಜೆಯಾಗಿದೆ. ಬಿಜೆಪಿಯನ್ನು ಸೋಲಿಸಲು ಇಡೀ ಪ್ರತಿಪಕ್ಷಗಳು ಭಾರತದಾದ್ಯಂತ ಒಗ್ಗೂಡುವುದು ಅತ್ಯಗತ್ಯ. ಸದ್ಯಕ್ಕೆ, ಏಕೀಕರಣವು ನಮ್ಮ ಆದ್ಯತೆಯಾಗಿದ್ದು, ಅದನ್ನು ಮೊದಲು ಮಾಡುತ್ತೇವೆ. ಅದರ ನಂತರ ಒಗ್ಗಟ್ಟಿನ ಪ್ರತಿಪಕ್ಷವನ್ನು ಯಾರು ಮುನ್ನಡೆಸುತ್ತಾರೆ ಎಂಬುದರ ಕುರಿತು ಯೋಚಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಚಂಪಾರಣ್ಯ ಸತ್ಯಾಗ್ರಹ ಸ್ಥಳದಲ್ಲಿದ್ದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ 

ಈ ಮಧ್ಯೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಎಲ್‌ಜೆಡಿಯನ್ನು ತಮ್ಮ ಪಕ್ಷದೊಂದಿಗೆ ವಿಲೀನಗೊಳಿಸುವ ಕ್ರಮವನ್ನು ಸ್ವಾಗತಿಸಿದ್ದಾರೆ. ದೇಶದ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದ ಅವರು, “ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ಏಕೀಕರಣಕ್ಕೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ” ಎಂದು ಹೇಳಿದ್ದಾರೆ.

ಎರಡೂ ಪಕ್ಷಗಳು ತೆಗೆದುಕೊಂಡ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ತೇಜಸ್ವಿ, “ಎಲ್‌ಜೆಡಿಯನ್ನು ಆರ್‌ಜೆಡಿಗೆ ವಿಲೀನಗೊಳಿಸುವ ಬಗ್ಗೆ ಶರದ್ ಯಾದವ್ ಅವರು ತೆಗೆದುಕೊಂಡ ನಿರ್ಧಾರ ಜನರ ಬೇಡಿಕೆಯಾಗಿದೆ. ಇದು ಇತರ ವಿರೋಧ ಪಕ್ಷಗಳಿಗೆ ನಮಗೆ ಉತ್ತಮ ಸಮಯ ಎಂಬ ಸಂದೇಶವನ್ನು ನೀಡಿದೆ. 2019 ರಲ್ಲಿ ಒಂದುಗೂಡಬೇಕಿತ್ತು, ಆದರೂ ಇದು ಸರಿಯಾದ ಸಮಯ” ಎಂದು ಅವರು ಹೇಳಿದ್ದಾರೆ.

ಶರದ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಗೆ ಏಕೀಕೃತ ವಿರೋಧ ಪಕ್ಷವನ್ನು ಕಟ್ಟಲು ಎಲ್ಲಾ ಹಿಂದಿನ ಜನತಾ ದಳದ ಬಣಗಳು ಮತ್ತು ಇದೇ ರೀತಿಯ ಸಿದ್ಧಾಂತಗಳನ್ನು ಹೊಂದಿರುವ ಇತರ ಪಕ್ಷಗಳನ್ನು ಮತ್ತೆ ಒಗ್ಗೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ: ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಕೈಗಳನ್ನು ಕಟ್ಟಿ ಬಂಧಿಸಿದ ಪೊಲೀಸರು

ನಿತೀಶ್ ಕುಮಾರ್‌ ನೇತೃತ್ವದ ಜೆಡಿಯು 2018 ರಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿದ ನಂತರ ಅದರಿಂದ ಹೊರ ಬಂದ ಶರದ್ ಯಾದವ್ ಅವರು LJD ಅನ್ನು ರಚಿಸಿದ್ದರು. LJD ತನ್ನ ಆರಂಭದಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಅದರ ಮುಖ್ಯಸ್ಥ ಆಗಿದ್ದ ಶರದ್ ಯಾದವ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಮಾಧೇಪುರದಿಂದ ತೇಜಸ್ವಿ ಯಾದವ್‌ ನೇತೃತ್ವದ RJD ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು.

ಒಕ್ಕೂಟ ಸರ್ಕಾರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ಇದ್ದಾಗ ಶರದ್ ಯಾದವ್ ಕ್ಯಾಬಿನೆಟ್ ಸಚಿವರಾಗಿದ್ದರು.

ಲಾಲು ಪ್ರಸಾದ್ ಯಾದವ್‌ ಮತ್ತು ಶರದ್‌ ಯಾದವ್‌ 25 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ. 1997 ರಲ್ಲಿ ಲಾಲು ಪ್ರಸಾದ್ ಯಾದವ್ ಆರ್‌ಜೆಡಿ ಸ್ಥಾಪಿಸಿದಾಗ, ಶರದ್ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ಜೆಡಿಯು ಪ್ರಾರಂಭಿಸಿ ಬೇರೆಯಾಗಿದ್ದರು.

ನಂತರ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಶಿಕ್ಷೆಗೊಳಗಾದರು. ಅವರು 1990 ರ ದಶಕದಲ್ಲಿ ಬಿಹಾರ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಲು ಬೇಕಾಗಿ ‘ಮಂಡಲ್ ಕಮೀಷನ್‌’ ಜಾರಿಗೆ ಹೋರಾಟ ನಡೆಸಿದ್ದರು. ಜೊತೆಗೆ ರಾಷ್ಟ್ರೀಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್‌ಜೆಡಿ-ಆರ್‌ಜೆಡಿ ವಿಲೀನದಿಂದಾಗಿ ಜೂನ್‌ನಲ್ಲಿ ನಡೆಯಲಿರುವ, ಮೇಲ್ಮನೆಗೆ ನಡೆಯುವ ಚುನಾವಣೆಯಲ್ಲಿ ಆರ್‌ಜೆಡಿ ಶರದ್ ಯಾದವ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....