Homeಮುಖಪುಟಬಿಹಾರ: ಲಾಲು ಪ್ರಸಾದ್‌ ಯಾದವ್‌ ನೇತೃತ್ವದ RJDಯೊಂದಿಗೆ ವಿಲೀನಗೊಂಡ LJD

ಬಿಹಾರ: ಲಾಲು ಪ್ರಸಾದ್‌ ಯಾದವ್‌ ನೇತೃತ್ವದ RJDಯೊಂದಿಗೆ ವಿಲೀನಗೊಂಡ LJD

ಲಾಲು ಪ್ರಸಾದ್ ಯಾದವ್‌ ಮತ್ತು ಶರದ್‌ ಯಾದವ್‌ 25 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ

- Advertisement -
- Advertisement -

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಅವರು ಭಾನುವಾರ ತಮ್ಮ ಲೋಕತಾಂತ್ರಿಕ ಜನತಾ ದಳವನ್ನು (ಎಲ್‌ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳದೊಂದಿಗೆ (ಆರ್‌ಜೆಡಿ) ವಿಲೀನಗೊಳಿಸಿದ್ದಾರೆ. ಉಭಯ ಪಕ್ಷಗಳ ವಿಲೀನವನ್ನು ಘೋಷಿಸಿದ ನಂತರ, ಶರದ್ ಯಾದವ್ ಈ ಕ್ರಮವು ‘ಸಂಯುಕ್ತ ವಿರೋಧ ಪಕ್ಷದ ರಚನೆಯ ಕಡೆಗಿನ ಮೊದಲ ಹೆಜ್ಜೆ’ ಎಂದು ಹೇಳಿದ್ದಾರೆ.

“ಆರ್‌ಜೆಡಿಯೊಂದಿಗೆ ನಮ್ಮ ಪಕ್ಷವನ್ನು ವಿಲೀನಗೊಳಿಸುವುದು ಪ್ರತಿಪಕ್ಷಗಳ ಒಗ್ಗಟ್ಟಿನ ಮೊದಲ ಹೆಜ್ಜೆಯಾಗಿದೆ. ಬಿಜೆಪಿಯನ್ನು ಸೋಲಿಸಲು ಇಡೀ ಪ್ರತಿಪಕ್ಷಗಳು ಭಾರತದಾದ್ಯಂತ ಒಗ್ಗೂಡುವುದು ಅತ್ಯಗತ್ಯ. ಸದ್ಯಕ್ಕೆ, ಏಕೀಕರಣವು ನಮ್ಮ ಆದ್ಯತೆಯಾಗಿದ್ದು, ಅದನ್ನು ಮೊದಲು ಮಾಡುತ್ತೇವೆ. ಅದರ ನಂತರ ಒಗ್ಗಟ್ಟಿನ ಪ್ರತಿಪಕ್ಷವನ್ನು ಯಾರು ಮುನ್ನಡೆಸುತ್ತಾರೆ ಎಂಬುದರ ಕುರಿತು ಯೋಚಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಚಂಪಾರಣ್ಯ ಸತ್ಯಾಗ್ರಹ ಸ್ಥಳದಲ್ಲಿದ್ದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ 

ಈ ಮಧ್ಯೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಎಲ್‌ಜೆಡಿಯನ್ನು ತಮ್ಮ ಪಕ್ಷದೊಂದಿಗೆ ವಿಲೀನಗೊಳಿಸುವ ಕ್ರಮವನ್ನು ಸ್ವಾಗತಿಸಿದ್ದಾರೆ. ದೇಶದ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದ ಅವರು, “ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ಏಕೀಕರಣಕ್ಕೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ” ಎಂದು ಹೇಳಿದ್ದಾರೆ.

ಎರಡೂ ಪಕ್ಷಗಳು ತೆಗೆದುಕೊಂಡ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ತೇಜಸ್ವಿ, “ಎಲ್‌ಜೆಡಿಯನ್ನು ಆರ್‌ಜೆಡಿಗೆ ವಿಲೀನಗೊಳಿಸುವ ಬಗ್ಗೆ ಶರದ್ ಯಾದವ್ ಅವರು ತೆಗೆದುಕೊಂಡ ನಿರ್ಧಾರ ಜನರ ಬೇಡಿಕೆಯಾಗಿದೆ. ಇದು ಇತರ ವಿರೋಧ ಪಕ್ಷಗಳಿಗೆ ನಮಗೆ ಉತ್ತಮ ಸಮಯ ಎಂಬ ಸಂದೇಶವನ್ನು ನೀಡಿದೆ. 2019 ರಲ್ಲಿ ಒಂದುಗೂಡಬೇಕಿತ್ತು, ಆದರೂ ಇದು ಸರಿಯಾದ ಸಮಯ” ಎಂದು ಅವರು ಹೇಳಿದ್ದಾರೆ.

ಶರದ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಗೆ ಏಕೀಕೃತ ವಿರೋಧ ಪಕ್ಷವನ್ನು ಕಟ್ಟಲು ಎಲ್ಲಾ ಹಿಂದಿನ ಜನತಾ ದಳದ ಬಣಗಳು ಮತ್ತು ಇದೇ ರೀತಿಯ ಸಿದ್ಧಾಂತಗಳನ್ನು ಹೊಂದಿರುವ ಇತರ ಪಕ್ಷಗಳನ್ನು ಮತ್ತೆ ಒಗ್ಗೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ: ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಕೈಗಳನ್ನು ಕಟ್ಟಿ ಬಂಧಿಸಿದ ಪೊಲೀಸರು

ನಿತೀಶ್ ಕುಮಾರ್‌ ನೇತೃತ್ವದ ಜೆಡಿಯು 2018 ರಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿದ ನಂತರ ಅದರಿಂದ ಹೊರ ಬಂದ ಶರದ್ ಯಾದವ್ ಅವರು LJD ಅನ್ನು ರಚಿಸಿದ್ದರು. LJD ತನ್ನ ಆರಂಭದಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಅದರ ಮುಖ್ಯಸ್ಥ ಆಗಿದ್ದ ಶರದ್ ಯಾದವ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಮಾಧೇಪುರದಿಂದ ತೇಜಸ್ವಿ ಯಾದವ್‌ ನೇತೃತ್ವದ RJD ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು.

ಒಕ್ಕೂಟ ಸರ್ಕಾರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ಇದ್ದಾಗ ಶರದ್ ಯಾದವ್ ಕ್ಯಾಬಿನೆಟ್ ಸಚಿವರಾಗಿದ್ದರು.

ಲಾಲು ಪ್ರಸಾದ್ ಯಾದವ್‌ ಮತ್ತು ಶರದ್‌ ಯಾದವ್‌ 25 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ. 1997 ರಲ್ಲಿ ಲಾಲು ಪ್ರಸಾದ್ ಯಾದವ್ ಆರ್‌ಜೆಡಿ ಸ್ಥಾಪಿಸಿದಾಗ, ಶರದ್ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ಜೆಡಿಯು ಪ್ರಾರಂಭಿಸಿ ಬೇರೆಯಾಗಿದ್ದರು.

ನಂತರ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಶಿಕ್ಷೆಗೊಳಗಾದರು. ಅವರು 1990 ರ ದಶಕದಲ್ಲಿ ಬಿಹಾರ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಲು ಬೇಕಾಗಿ ‘ಮಂಡಲ್ ಕಮೀಷನ್‌’ ಜಾರಿಗೆ ಹೋರಾಟ ನಡೆಸಿದ್ದರು. ಜೊತೆಗೆ ರಾಷ್ಟ್ರೀಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್‌ಜೆಡಿ-ಆರ್‌ಜೆಡಿ ವಿಲೀನದಿಂದಾಗಿ ಜೂನ್‌ನಲ್ಲಿ ನಡೆಯಲಿರುವ, ಮೇಲ್ಮನೆಗೆ ನಡೆಯುವ ಚುನಾವಣೆಯಲ್ಲಿ ಆರ್‌ಜೆಡಿ ಶರದ್ ಯಾದವ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...