ಬಿಹಾರದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವಕನೋರ್ವನಿಗೆ ತೀವ್ರವಾಗಿ ಥಳಿಸಿ, ಬಲವಂತವಾಗಿ ತಲೆ ಮತ್ತು ಗಡ್ಡವನ್ನು ಬೋಳಿಸಿ, ಚಪ್ಪಲಿ ಹಾರ ಹಾಕಿದ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.
ಆನಂದ್ ಎಂಬ ವ್ಯಕ್ತಿ ಕಬರ್ ಗ್ರಾಮದ ರಾಜೀವ್ ಕುಮಾರ್ ಒಡೆತನದ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ. ಆನಂದ್, ರಾಜೀವ್ ಕುಮಾರ್ ಅವರ ಪತ್ನಿಯೊಂದಿಗೆ ಫೋನ್ನಲ್ಲಿ ಸಂಭಾಷಣೆ ನಡೆಸುತ್ತಿದ್ದರು. ಆದರೆ ಕಳೆದ ಮೂರು ತಿಂಗಳಿನಿಂದ ಆನಂದ್ ತನಗೆ ಕಿರುಕುಳ ನೀಡುತ್ತಿದ್ದಾನೆ. ಅನಗತ್ಯ ಕರೆಗಳನ್ನು ಮಾಡುತ್ತಿದ್ದಾನೆ ಮತ್ತು ತನ್ನ ಪತಿ ಇಲ್ಲದಿದ್ದಾಗ ತನ್ನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾನೆ. ಆನಂದ್ ತನಗೆ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
ಇದಲ್ಲದೆ ಆನಂದ್ ತನ್ನ ಪತಿಗೆ, ನನ್ನ ಜೊತೆ ಮಾತನಾಡದಂತೆ ಬೆದರಿಸಿದ್ದಾನೆ. ಇದಲ್ಲದೆ ಪತಿಗೆ ಮಾತನಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆಂದು ಮಹಿಳೆ ಆರೋಪಿಸಿದ್ದಾರೆ.
ಇದರಿಂದ ಕೋಪಗೊಂಡ ಗುಂಪು ಆನಂದ್ಗೆ ಕಟ್ಟಿ ಹಾಕಿ ಥಳಿಸಿದ್ದಾರೆ. ತಲೆ ಮತ್ತು ಗಡ್ಡವನ್ನು ಬೋಳಿಸಿ ಚಪ್ಪಲಿಯ ಹಾರವನ್ನು ಹಾಕಿದ್ದಾರೆ.
ಮಹಿಳೆ ಮಾಡಿದ ಆರೋಪವನ್ನು ಆನಂದ್ ನಿರಾಕರಿಸಿದ್ದಾರೆ. ಮಹಿಳೆ ತನಗೆ ಕರೆ ಮಾಡಿ ಮನೆಗೆ ತೆರಳುವಂತೆ ಆಗ್ರಹಿಸಿದ್ದಾರೆ. ಆದರೆ ನಮ್ಮ ನಡುವೆ ಅಂತಹ ಸಂಬಂಧಗಳಿರಲಿಲ್ಲ ಎಂದು ಹೇಳಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಆನಂದನನ್ನು ವಶಕ್ಕೆ ಪಡೆದಿದ್ದರು. ಆದರೆ ದೂರು ದಾಖಲಾಗದ ಕಾರಣ ಆನಂದ್ ಅವರನ್ನು ಪೊಲೀಸ್ ಕಸ್ಟಡಿಯಿಂದ ಬಿಡುಗಡೆಗೊಳಿಸಲಾಗಿದೆ.
ಇದನ್ನು ಓದಿ: ರಾಜಸ್ಥಾನ: ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ