Homeಮುಖಪುಟ9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

ಆರೋಪಿ ಆಲಂ ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದರು. ಆಕೆಯ ಹತ್ಯೆಯನ್ನು ಮುಚ್ಚಿಹಾಕಲು ಆಲಂ ಮತ್ತು ಅವನ ಕುಟುಂಬದ ಇತರ ಐದು ಸದಸ್ಯರು ಮತ್ತು ಇಬ್ಬರು ಕಾರ್ಮಿಕರನ್ನು ಕೊಲೆ ಮಾಡಿದ್ದರು.

- Advertisement -
- Advertisement -

ಗೋರೆಕುಂಟಾ ಗ್ರಾಮದಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರಕ್ಕೆ ಸೇರಿದ ಒಂಬತ್ತು ವಲಸೆ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಗಲ್ ನ್ಯಾಯಾಲಯ ಅಪರಾಧಿಗೆ ಮರಣದಂಡನೆ ವಿಧಿಸಿದೆ. ಬಿಹಾರದ ಬೆಗುಸರಾಯ್ ಜಿಲ್ಲೆಯ ನೂರ್ಪುರ್ ಗ್ರಾಮದ ಸಂಜಯ್ ಕುಮಾರ್ ಯಾದವ್ ಎಂಬ 24 ವರ್ಷದ ಯುವಕ ಮೇ 21 ರಂದು ವಾರಂಗಲ್ ಗ್ರಾಮೀಣ ಜಿಲ್ಲೆಯ ಗೀಸುಗೊಂಡ ಮಂಡಲದಲ್ಲಿ 9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದರು.

ವಾರಂಗಲ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಜಯಕುಮಾರ್ ಅಪರಾಧಿ ಸಂಜಯ್ ಕುಮಾರ್ ಯಾದವ್‌ರನ್ನು ಗಲ್ಲಿಗೇರಿಸಬೇಕು ಎಂದು ತೀರ್ಪು ನೀಡಿದ್ದಾರೆ. ಗೋರೆಕುಂಟಾದ ಗೋಣಿ ಚೀಲ ಉತ್ಪಾದನಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ 56 ವರ್ಷದ ಮಸೂದ್ ಆಲಂ ಅವರ ಇಡೀ ಕುಟುಂಬವನ್ನು ಯಾದವ್ ಕೊಂದಿದ್ದ.

ಯಾದವ್ ಈ ಹಿಂದೆ ಆಂಧ್ರಪ್ರದೇಶದಲ್ಲಿ ಆಲಂ ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದರು. ನಂತರ ಆಕೆಯ ಹತ್ಯೆಯನ್ನು ಮುಚ್ಚಿಹಾಕಲು ಆಲಂ ಮತ್ತು ಅವನ ಕುಟುಂಬದ ಇತರ ಐದು ಸದಸ್ಯರನ್ನು ಕೊಲೆ ಮಾಡಿದ್ದಾರೆ.

ಮೃತ ಆಲಂ ಅವರ ಹೆಂಡತಿ, ಮಗಳು, ಇಬ್ಬರು ಗಂಡು ಮತ್ತು ಮೊಮ್ಮಗಳ ಜೊತೆಗೆ ಕುಟುಂಬಕ್ಕೆ ಸಂಬಂಧವಿಲ್ಲದ ಬಿಹಾರ ಮತ್ತು ಒಬ್ಬರು ತ್ರಿಪುರದ ಇಬ್ಬರು ವಲಸೆ ಕಾರ್ಮಿಕರನ್ನು ಕೊಲೆ ಮಾಡಿದ್ದನು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಅಪರಾಧಿ ಯಾದವ್ ಗೋಣಿ ಚೀಲಗಳ ಉತ್ಪಾದನಾ ಘಟಕದಲ್ಲಿ ನಡೆಯುತ್ತಿದ್ದ ಆಲಂ ಅವರ ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಪಾಲ್ಗೊಂಡಿದ್ದರು. ಆತ ಊಟದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿ, ಎಲ್ಲರೂ ಪ್ರಜ್ಞೆ ತಪ್ಪಿದ ಬಳಿಕ ಒಬ್ಬೊಬ್ಬರನ್ನೇ ಬಾವಿಗೆ ಎಸೆದಿದ್ದರು. ಇದರಲ್ಲಿ ಆಲಂ ಕುಟುಂಬದ ಜೊತೆಗೆ ಇಬ್ಬರು ಕಾರ್ಮಿಕರು ಇದ್ದರು.

ಪೊಲೀಸರು ಜುಲೈ 28 ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರೆ, ನ್ಯಾಯಾಂಗ ಅಧಿಕಾರಿಗಳು ಸೆಪ್ಟೆಂಬರ್ 21 ರಂದು ವಿಚಾರಣೆಯನ್ನು ಪ್ರಾರಂಭಿಸಿದರು. 48 ದಿನಗಳಲ್ಲಿ ಪ್ರಕರಣವನ್ನು ತಾರ್ಕಿಕ ತೀರ್ಮಾನಕ್ಕೆ ತರಲಾಯಿತು. ಪೊಲೀಸರು ಸೆಕ್ಷನ್ ಐಪಿಸಿ 449, 328, 380, 404, 302 ಮತ್ತು 366 ಸಿಆರ್‌ಪಿಸಿ ಮತ್ತು 425 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಅಂತಿಮ ತೀರ್ಪಿಗಾಗಿ ನ್ಯಾಯಾಲಯದ ಆವರಣದಲ್ಲಿ ಹಲವಾರು ಮಂದಿ ಜಮಾಯಿಸಿದ್ದರು.   ನ್ಯಾಯಾಲಯವು ಮರಣದಂಡನೆ ವಿಧಿಸಿದ ವಿಷಯ ತಿಳಿದು ಹರ್ಷ ವ್ಯಕ್ತಪಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಗಲ್ ಪೊಲೀಸರ ಶ್ರಮ ನಿಜಕ್ಕೂ ಪ್ರಶಂಸನೀಯ. ಪೊಲೀಸರು 67ಕ್ಕೂ ಹೆಚ್ಚು ಸಾಕ್ಷಿಗಳನ್ನು ಒಟ್ಟುಗೂಡಿಸಿದರು. ಎಲ್ಲಾ ಸಾಕ್ಷಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸಿದ್ದರು.  ಮರಣೋತ್ತರ ಪರೀಕ್ಷೆ ವರದಿಗಳು ಮತ್ತು ವಿಧಿವಿಜ್ಞಾನ ವರದಿಗಳು ಮತ್ತು ವೈಜ್ಞಾನಿಕ ಪುರಾವೆಗಳು ಯಾವುದನ್ನು ಪೊಲೀಸರು ಬಿಟ್ಟಿರಲಿಲ್ಲ. ಇದರಿಂದಾಗಿ ಅಪರಾಧಿ ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆ ಸಾಧ್ಯವಾಗಿದೆ.


ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...