Homeಮುಖಪುಟ9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

ಆರೋಪಿ ಆಲಂ ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದರು. ಆಕೆಯ ಹತ್ಯೆಯನ್ನು ಮುಚ್ಚಿಹಾಕಲು ಆಲಂ ಮತ್ತು ಅವನ ಕುಟುಂಬದ ಇತರ ಐದು ಸದಸ್ಯರು ಮತ್ತು ಇಬ್ಬರು ಕಾರ್ಮಿಕರನ್ನು ಕೊಲೆ ಮಾಡಿದ್ದರು.

- Advertisement -
- Advertisement -

ಗೋರೆಕುಂಟಾ ಗ್ರಾಮದಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರಕ್ಕೆ ಸೇರಿದ ಒಂಬತ್ತು ವಲಸೆ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಗಲ್ ನ್ಯಾಯಾಲಯ ಅಪರಾಧಿಗೆ ಮರಣದಂಡನೆ ವಿಧಿಸಿದೆ. ಬಿಹಾರದ ಬೆಗುಸರಾಯ್ ಜಿಲ್ಲೆಯ ನೂರ್ಪುರ್ ಗ್ರಾಮದ ಸಂಜಯ್ ಕುಮಾರ್ ಯಾದವ್ ಎಂಬ 24 ವರ್ಷದ ಯುವಕ ಮೇ 21 ರಂದು ವಾರಂಗಲ್ ಗ್ರಾಮೀಣ ಜಿಲ್ಲೆಯ ಗೀಸುಗೊಂಡ ಮಂಡಲದಲ್ಲಿ 9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದರು.

ವಾರಂಗಲ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಜಯಕುಮಾರ್ ಅಪರಾಧಿ ಸಂಜಯ್ ಕುಮಾರ್ ಯಾದವ್‌ರನ್ನು ಗಲ್ಲಿಗೇರಿಸಬೇಕು ಎಂದು ತೀರ್ಪು ನೀಡಿದ್ದಾರೆ. ಗೋರೆಕುಂಟಾದ ಗೋಣಿ ಚೀಲ ಉತ್ಪಾದನಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ 56 ವರ್ಷದ ಮಸೂದ್ ಆಲಂ ಅವರ ಇಡೀ ಕುಟುಂಬವನ್ನು ಯಾದವ್ ಕೊಂದಿದ್ದ.

ಯಾದವ್ ಈ ಹಿಂದೆ ಆಂಧ್ರಪ್ರದೇಶದಲ್ಲಿ ಆಲಂ ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದರು. ನಂತರ ಆಕೆಯ ಹತ್ಯೆಯನ್ನು ಮುಚ್ಚಿಹಾಕಲು ಆಲಂ ಮತ್ತು ಅವನ ಕುಟುಂಬದ ಇತರ ಐದು ಸದಸ್ಯರನ್ನು ಕೊಲೆ ಮಾಡಿದ್ದಾರೆ.

ಮೃತ ಆಲಂ ಅವರ ಹೆಂಡತಿ, ಮಗಳು, ಇಬ್ಬರು ಗಂಡು ಮತ್ತು ಮೊಮ್ಮಗಳ ಜೊತೆಗೆ ಕುಟುಂಬಕ್ಕೆ ಸಂಬಂಧವಿಲ್ಲದ ಬಿಹಾರ ಮತ್ತು ಒಬ್ಬರು ತ್ರಿಪುರದ ಇಬ್ಬರು ವಲಸೆ ಕಾರ್ಮಿಕರನ್ನು ಕೊಲೆ ಮಾಡಿದ್ದನು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಅಪರಾಧಿ ಯಾದವ್ ಗೋಣಿ ಚೀಲಗಳ ಉತ್ಪಾದನಾ ಘಟಕದಲ್ಲಿ ನಡೆಯುತ್ತಿದ್ದ ಆಲಂ ಅವರ ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಪಾಲ್ಗೊಂಡಿದ್ದರು. ಆತ ಊಟದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿ, ಎಲ್ಲರೂ ಪ್ರಜ್ಞೆ ತಪ್ಪಿದ ಬಳಿಕ ಒಬ್ಬೊಬ್ಬರನ್ನೇ ಬಾವಿಗೆ ಎಸೆದಿದ್ದರು. ಇದರಲ್ಲಿ ಆಲಂ ಕುಟುಂಬದ ಜೊತೆಗೆ ಇಬ್ಬರು ಕಾರ್ಮಿಕರು ಇದ್ದರು.

ಪೊಲೀಸರು ಜುಲೈ 28 ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರೆ, ನ್ಯಾಯಾಂಗ ಅಧಿಕಾರಿಗಳು ಸೆಪ್ಟೆಂಬರ್ 21 ರಂದು ವಿಚಾರಣೆಯನ್ನು ಪ್ರಾರಂಭಿಸಿದರು. 48 ದಿನಗಳಲ್ಲಿ ಪ್ರಕರಣವನ್ನು ತಾರ್ಕಿಕ ತೀರ್ಮಾನಕ್ಕೆ ತರಲಾಯಿತು. ಪೊಲೀಸರು ಸೆಕ್ಷನ್ ಐಪಿಸಿ 449, 328, 380, 404, 302 ಮತ್ತು 366 ಸಿಆರ್‌ಪಿಸಿ ಮತ್ತು 425 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಅಂತಿಮ ತೀರ್ಪಿಗಾಗಿ ನ್ಯಾಯಾಲಯದ ಆವರಣದಲ್ಲಿ ಹಲವಾರು ಮಂದಿ ಜಮಾಯಿಸಿದ್ದರು.   ನ್ಯಾಯಾಲಯವು ಮರಣದಂಡನೆ ವಿಧಿಸಿದ ವಿಷಯ ತಿಳಿದು ಹರ್ಷ ವ್ಯಕ್ತಪಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಗಲ್ ಪೊಲೀಸರ ಶ್ರಮ ನಿಜಕ್ಕೂ ಪ್ರಶಂಸನೀಯ. ಪೊಲೀಸರು 67ಕ್ಕೂ ಹೆಚ್ಚು ಸಾಕ್ಷಿಗಳನ್ನು ಒಟ್ಟುಗೂಡಿಸಿದರು. ಎಲ್ಲಾ ಸಾಕ್ಷಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸಿದ್ದರು.  ಮರಣೋತ್ತರ ಪರೀಕ್ಷೆ ವರದಿಗಳು ಮತ್ತು ವಿಧಿವಿಜ್ಞಾನ ವರದಿಗಳು ಮತ್ತು ವೈಜ್ಞಾನಿಕ ಪುರಾವೆಗಳು ಯಾವುದನ್ನು ಪೊಲೀಸರು ಬಿಟ್ಟಿರಲಿಲ್ಲ. ಇದರಿಂದಾಗಿ ಅಪರಾಧಿ ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆ ಸಾಧ್ಯವಾಗಿದೆ.


ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...