Homeಮುಖಪುಟ9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

ಆರೋಪಿ ಆಲಂ ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದರು. ಆಕೆಯ ಹತ್ಯೆಯನ್ನು ಮುಚ್ಚಿಹಾಕಲು ಆಲಂ ಮತ್ತು ಅವನ ಕುಟುಂಬದ ಇತರ ಐದು ಸದಸ್ಯರು ಮತ್ತು ಇಬ್ಬರು ಕಾರ್ಮಿಕರನ್ನು ಕೊಲೆ ಮಾಡಿದ್ದರು.

- Advertisement -
- Advertisement -

ಗೋರೆಕುಂಟಾ ಗ್ರಾಮದಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರಕ್ಕೆ ಸೇರಿದ ಒಂಬತ್ತು ವಲಸೆ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಗಲ್ ನ್ಯಾಯಾಲಯ ಅಪರಾಧಿಗೆ ಮರಣದಂಡನೆ ವಿಧಿಸಿದೆ. ಬಿಹಾರದ ಬೆಗುಸರಾಯ್ ಜಿಲ್ಲೆಯ ನೂರ್ಪುರ್ ಗ್ರಾಮದ ಸಂಜಯ್ ಕುಮಾರ್ ಯಾದವ್ ಎಂಬ 24 ವರ್ಷದ ಯುವಕ ಮೇ 21 ರಂದು ವಾರಂಗಲ್ ಗ್ರಾಮೀಣ ಜಿಲ್ಲೆಯ ಗೀಸುಗೊಂಡ ಮಂಡಲದಲ್ಲಿ 9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದರು.

ವಾರಂಗಲ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಜಯಕುಮಾರ್ ಅಪರಾಧಿ ಸಂಜಯ್ ಕುಮಾರ್ ಯಾದವ್‌ರನ್ನು ಗಲ್ಲಿಗೇರಿಸಬೇಕು ಎಂದು ತೀರ್ಪು ನೀಡಿದ್ದಾರೆ. ಗೋರೆಕುಂಟಾದ ಗೋಣಿ ಚೀಲ ಉತ್ಪಾದನಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ 56 ವರ್ಷದ ಮಸೂದ್ ಆಲಂ ಅವರ ಇಡೀ ಕುಟುಂಬವನ್ನು ಯಾದವ್ ಕೊಂದಿದ್ದ.

ಯಾದವ್ ಈ ಹಿಂದೆ ಆಂಧ್ರಪ್ರದೇಶದಲ್ಲಿ ಆಲಂ ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದರು. ನಂತರ ಆಕೆಯ ಹತ್ಯೆಯನ್ನು ಮುಚ್ಚಿಹಾಕಲು ಆಲಂ ಮತ್ತು ಅವನ ಕುಟುಂಬದ ಇತರ ಐದು ಸದಸ್ಯರನ್ನು ಕೊಲೆ ಮಾಡಿದ್ದಾರೆ.

ಮೃತ ಆಲಂ ಅವರ ಹೆಂಡತಿ, ಮಗಳು, ಇಬ್ಬರು ಗಂಡು ಮತ್ತು ಮೊಮ್ಮಗಳ ಜೊತೆಗೆ ಕುಟುಂಬಕ್ಕೆ ಸಂಬಂಧವಿಲ್ಲದ ಬಿಹಾರ ಮತ್ತು ಒಬ್ಬರು ತ್ರಿಪುರದ ಇಬ್ಬರು ವಲಸೆ ಕಾರ್ಮಿಕರನ್ನು ಕೊಲೆ ಮಾಡಿದ್ದನು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಅಪರಾಧಿ ಯಾದವ್ ಗೋಣಿ ಚೀಲಗಳ ಉತ್ಪಾದನಾ ಘಟಕದಲ್ಲಿ ನಡೆಯುತ್ತಿದ್ದ ಆಲಂ ಅವರ ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಪಾಲ್ಗೊಂಡಿದ್ದರು. ಆತ ಊಟದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿ, ಎಲ್ಲರೂ ಪ್ರಜ್ಞೆ ತಪ್ಪಿದ ಬಳಿಕ ಒಬ್ಬೊಬ್ಬರನ್ನೇ ಬಾವಿಗೆ ಎಸೆದಿದ್ದರು. ಇದರಲ್ಲಿ ಆಲಂ ಕುಟುಂಬದ ಜೊತೆಗೆ ಇಬ್ಬರು ಕಾರ್ಮಿಕರು ಇದ್ದರು.

ಪೊಲೀಸರು ಜುಲೈ 28 ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರೆ, ನ್ಯಾಯಾಂಗ ಅಧಿಕಾರಿಗಳು ಸೆಪ್ಟೆಂಬರ್ 21 ರಂದು ವಿಚಾರಣೆಯನ್ನು ಪ್ರಾರಂಭಿಸಿದರು. 48 ದಿನಗಳಲ್ಲಿ ಪ್ರಕರಣವನ್ನು ತಾರ್ಕಿಕ ತೀರ್ಮಾನಕ್ಕೆ ತರಲಾಯಿತು. ಪೊಲೀಸರು ಸೆಕ್ಷನ್ ಐಪಿಸಿ 449, 328, 380, 404, 302 ಮತ್ತು 366 ಸಿಆರ್‌ಪಿಸಿ ಮತ್ತು 425 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಅಂತಿಮ ತೀರ್ಪಿಗಾಗಿ ನ್ಯಾಯಾಲಯದ ಆವರಣದಲ್ಲಿ ಹಲವಾರು ಮಂದಿ ಜಮಾಯಿಸಿದ್ದರು.   ನ್ಯಾಯಾಲಯವು ಮರಣದಂಡನೆ ವಿಧಿಸಿದ ವಿಷಯ ತಿಳಿದು ಹರ್ಷ ವ್ಯಕ್ತಪಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಗಲ್ ಪೊಲೀಸರ ಶ್ರಮ ನಿಜಕ್ಕೂ ಪ್ರಶಂಸನೀಯ. ಪೊಲೀಸರು 67ಕ್ಕೂ ಹೆಚ್ಚು ಸಾಕ್ಷಿಗಳನ್ನು ಒಟ್ಟುಗೂಡಿಸಿದರು. ಎಲ್ಲಾ ಸಾಕ್ಷಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸಿದ್ದರು.  ಮರಣೋತ್ತರ ಪರೀಕ್ಷೆ ವರದಿಗಳು ಮತ್ತು ವಿಧಿವಿಜ್ಞಾನ ವರದಿಗಳು ಮತ್ತು ವೈಜ್ಞಾನಿಕ ಪುರಾವೆಗಳು ಯಾವುದನ್ನು ಪೊಲೀಸರು ಬಿಟ್ಟಿರಲಿಲ್ಲ. ಇದರಿಂದಾಗಿ ಅಪರಾಧಿ ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆ ಸಾಧ್ಯವಾಗಿದೆ.


ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...