Homeಮುಖಪುಟಬಿಹಾರ: ರಾಮನವಮಿ ಹಿಂಸಾಚಾರದ ಮಾಸ್ಟರ್ ಮೈಂಡ್, ಬಜರಂಗದಳ ಸಂಚಾಲಕ ಪೊಲೀಸರಿಗೆ ಶರಣು

ಬಿಹಾರ: ರಾಮನವಮಿ ಹಿಂಸಾಚಾರದ ಮಾಸ್ಟರ್ ಮೈಂಡ್, ಬಜರಂಗದಳ ಸಂಚಾಲಕ ಪೊಲೀಸರಿಗೆ ಶರಣು

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿತ್ತು. ಚೆನ್ನಾಗಿ ಪ್ಲ್ಯಾನ್ ಮಾಡಿ ಈ ಹಿಂಸಾಚಾರ ಮಾಡಲಾಗಿತ್ತು. ಇದರ ಮಾಸ್ಟರ್ ಮೈಂಡ್ ಬಜರಂಗದಳ ಸಂಚಾಲಕ ಇದೀಗ ಶರಣಾಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಹಿಂಸಾಚಾರವು ನಳಂದಾದ ಬಿಹಾರಶರೀಫ್‌ನಲ್ಲಿ ನಡೆದಿತ್ತು. ಈ ಘಟನೆ ನಡೆಸಲು ಸಾಮಾಜಿಕ ಮಾಧ್ಯಮ ಮತ್ತು 456 ಸದಸ್ಯರನ್ನು ಹೊಂದಿರುವ ವಾಟ್ಸಾಪ್ ಗ್ರೂಪ್‌ನಲ್ಲಿ ಚರ್ಚೆ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗವಾರ್ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗವಾರ್  ಅವರು, ”ನಳಂದ ಜಿಲ್ಲೆಯ ಬಜರಂಗದಳ ಸಂಚಾಲಕ ಕುಂದನ್ ಕುಮಾರ್ ಅವರು ರಾಮ ನವಮಿಯ ಮುನ್ನ ರಚಿಸಲಾದ ವಾಟ್ಸಾಪ್ ಗ್ರೂಪ್‌ನ ಅಡ್ಮಿನ್ ಆಗಿದ್ದರು. ಸರ್ಕಾರ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಲು ಪ್ರಾರಂಭಿಸಿದ ನಂತರ ಕುಂದನ್ ಕುಮಾರ್ ಶರಣಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

”ಈ ಗ್ರೂಪ್‌ನ ಮತ್ತೋರ್ವ ಅಡ್ಮಿನ್ ಕಿಶನ್ ಕುಮಾರ್ ಕೂಡ ಶರಣಾಗಿದ್ದಾರೆ. ವಾಟ್ಸಾಪ್ ಗ್ರೂಪ್‌ನಲ್ಲಿ, ಹಿಂಸಾಚಾರವನ್ನು ಹರಡಲು ಸಂಚು ರೂಪಿಸಲಾಗಿದೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸುಳ್ಳು ಮಾಹಿತಿ ಒಳಗೊಂಡಿರುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ” ಎಂದು ಗವಾರ್ ಹೇಳಿದರು.

ಇದನ್ನೂ ಓದಿ: ಬಿಹಾರದಲ್ಲಿ ಮುಂದುವರೆದ ಕೋಮು ಹಿಂಸಾಚಾರ: ಬಾಂಬ್ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

ಅನ್ಯಸಮುದಾಯದ ಸದಸ್ಯರ ವಿರುದ್ಧ ಜನರನ್ನು ಪ್ರಚೋದಿಸಲು, ನಕಲಿ ವೀಡಿಯೋಗಳನ್ನು ಹರಡಲು ಈ ಗುಂಪನ್ನು ಬಳಸಲಾಗುತ್ತಿತ್ತು ಎಂದು ಆರಂಭಿಕ ತನಿಖೆಗಳು ಬಹಿರಂಗಪಡಿಸುತ್ತವೆ.

ನಳಂದದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರಲ್ಲಿ ಐವರನ್ನು ಬಂಧಿಸಲಾಗಿದೆ ಮತ್ತು ಕುಂದನ್ ಕುಮಾರ್ ಸೇರಿದಂತೆ ಇಬ್ಬರು ಶರಣಾಗಿದ್ದಾರೆ. ನಾಪತ್ತೆಯಾಗಿರುವ ಆರೋಪಿಯನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರ ಮೊಬೈಲಗಳನ್ನು ವಶಪಡಿಸಿಕೊಳ್ಳಲಾಗಿದೆ. ಆ ಮೊಬೈಲ್ ಫೋನ್‌ಗಳಲ್ಲಿ ಅವರು ಆಪಾದಿತ ವಿಷಯಗಳನ್ನು ಅಪ್‌ಲೋಡ್ ಮಾಡಿದ್ದಾರೆ.

ಮಾರ್ಚ್ 31 ರಂದು, ರಾಮನವಮಿ ಮೆರವಣಿಗೆಯಲ್ಲಿ ಬಿಹಾರ್ ಷರೀಫ್ ಹಿಂಸಾಚಾರವು ಯುವಕನ ಸಾವಿಗೆ ಕಾರಣವಾಯಿತು. ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿಯೂ ಎರಡು ಗುಂಪುಗಳ ನಡುವೆ ಘರ್ಷಣೆಗಳು ವರದಿಯಾಗಿವೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಹಿಂದೆ ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ”ಗಡ್ಬದ್” (ಕಿಡಿಗೇಡಿತನ) ದಲ್ಲಿ ತೊಡಗಿಸಿಕೊಂಡಿರುವ ಕಾರಣದಿಂದ ಉಂಟಾಗಿದೆ ಎಂದು ಆರೋಪಿಸಿದ್ದರು.

”ಸಸಾರಾಮ್ ಮತ್ತು ಬಿಹಾರ ಷರೀಫ್‌ನಲ್ಲಿ ರಾಮನವಮಿ ಹಬ್ಬದ ಸಂದರ್ಭದಲ್ಲಿ ಕೋಮು ಉದ್ವಿಗ್ನತೆಗಳು ಗೊಂದಲವನ್ನುಂಟುಮಾಡುತ್ತವೆ. ಇಂತಹ ಘಟನೆಗಳು ಈ ಪ್ರದೇಶದಲ್ಲಿ ಮೊದಲ ಬಾರಿ ಸಂಭವಿಸಿವೆ” ಎಂದು ಕುಮಾರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...