Homeಮುಖಪುಟಬಿಹಾರ: ರಾಮನವಮಿ ಹಿಂಸಾಚಾರದ ಮಾಸ್ಟರ್ ಮೈಂಡ್, ಬಜರಂಗದಳ ಸಂಚಾಲಕ ಪೊಲೀಸರಿಗೆ ಶರಣು

ಬಿಹಾರ: ರಾಮನವಮಿ ಹಿಂಸಾಚಾರದ ಮಾಸ್ಟರ್ ಮೈಂಡ್, ಬಜರಂಗದಳ ಸಂಚಾಲಕ ಪೊಲೀಸರಿಗೆ ಶರಣು

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿತ್ತು. ಚೆನ್ನಾಗಿ ಪ್ಲ್ಯಾನ್ ಮಾಡಿ ಈ ಹಿಂಸಾಚಾರ ಮಾಡಲಾಗಿತ್ತು. ಇದರ ಮಾಸ್ಟರ್ ಮೈಂಡ್ ಬಜರಂಗದಳ ಸಂಚಾಲಕ ಇದೀಗ ಶರಣಾಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಹಿಂಸಾಚಾರವು ನಳಂದಾದ ಬಿಹಾರಶರೀಫ್‌ನಲ್ಲಿ ನಡೆದಿತ್ತು. ಈ ಘಟನೆ ನಡೆಸಲು ಸಾಮಾಜಿಕ ಮಾಧ್ಯಮ ಮತ್ತು 456 ಸದಸ್ಯರನ್ನು ಹೊಂದಿರುವ ವಾಟ್ಸಾಪ್ ಗ್ರೂಪ್‌ನಲ್ಲಿ ಚರ್ಚೆ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗವಾರ್ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗವಾರ್  ಅವರು, ”ನಳಂದ ಜಿಲ್ಲೆಯ ಬಜರಂಗದಳ ಸಂಚಾಲಕ ಕುಂದನ್ ಕುಮಾರ್ ಅವರು ರಾಮ ನವಮಿಯ ಮುನ್ನ ರಚಿಸಲಾದ ವಾಟ್ಸಾಪ್ ಗ್ರೂಪ್‌ನ ಅಡ್ಮಿನ್ ಆಗಿದ್ದರು. ಸರ್ಕಾರ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಲು ಪ್ರಾರಂಭಿಸಿದ ನಂತರ ಕುಂದನ್ ಕುಮಾರ್ ಶರಣಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

”ಈ ಗ್ರೂಪ್‌ನ ಮತ್ತೋರ್ವ ಅಡ್ಮಿನ್ ಕಿಶನ್ ಕುಮಾರ್ ಕೂಡ ಶರಣಾಗಿದ್ದಾರೆ. ವಾಟ್ಸಾಪ್ ಗ್ರೂಪ್‌ನಲ್ಲಿ, ಹಿಂಸಾಚಾರವನ್ನು ಹರಡಲು ಸಂಚು ರೂಪಿಸಲಾಗಿದೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸುಳ್ಳು ಮಾಹಿತಿ ಒಳಗೊಂಡಿರುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ” ಎಂದು ಗವಾರ್ ಹೇಳಿದರು.

ಇದನ್ನೂ ಓದಿ: ಬಿಹಾರದಲ್ಲಿ ಮುಂದುವರೆದ ಕೋಮು ಹಿಂಸಾಚಾರ: ಬಾಂಬ್ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

ಅನ್ಯಸಮುದಾಯದ ಸದಸ್ಯರ ವಿರುದ್ಧ ಜನರನ್ನು ಪ್ರಚೋದಿಸಲು, ನಕಲಿ ವೀಡಿಯೋಗಳನ್ನು ಹರಡಲು ಈ ಗುಂಪನ್ನು ಬಳಸಲಾಗುತ್ತಿತ್ತು ಎಂದು ಆರಂಭಿಕ ತನಿಖೆಗಳು ಬಹಿರಂಗಪಡಿಸುತ್ತವೆ.

ನಳಂದದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರಲ್ಲಿ ಐವರನ್ನು ಬಂಧಿಸಲಾಗಿದೆ ಮತ್ತು ಕುಂದನ್ ಕುಮಾರ್ ಸೇರಿದಂತೆ ಇಬ್ಬರು ಶರಣಾಗಿದ್ದಾರೆ. ನಾಪತ್ತೆಯಾಗಿರುವ ಆರೋಪಿಯನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರ ಮೊಬೈಲಗಳನ್ನು ವಶಪಡಿಸಿಕೊಳ್ಳಲಾಗಿದೆ. ಆ ಮೊಬೈಲ್ ಫೋನ್‌ಗಳಲ್ಲಿ ಅವರು ಆಪಾದಿತ ವಿಷಯಗಳನ್ನು ಅಪ್‌ಲೋಡ್ ಮಾಡಿದ್ದಾರೆ.

ಮಾರ್ಚ್ 31 ರಂದು, ರಾಮನವಮಿ ಮೆರವಣಿಗೆಯಲ್ಲಿ ಬಿಹಾರ್ ಷರೀಫ್ ಹಿಂಸಾಚಾರವು ಯುವಕನ ಸಾವಿಗೆ ಕಾರಣವಾಯಿತು. ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿಯೂ ಎರಡು ಗುಂಪುಗಳ ನಡುವೆ ಘರ್ಷಣೆಗಳು ವರದಿಯಾಗಿವೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಹಿಂದೆ ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ”ಗಡ್ಬದ್” (ಕಿಡಿಗೇಡಿತನ) ದಲ್ಲಿ ತೊಡಗಿಸಿಕೊಂಡಿರುವ ಕಾರಣದಿಂದ ಉಂಟಾಗಿದೆ ಎಂದು ಆರೋಪಿಸಿದ್ದರು.

”ಸಸಾರಾಮ್ ಮತ್ತು ಬಿಹಾರ ಷರೀಫ್‌ನಲ್ಲಿ ರಾಮನವಮಿ ಹಬ್ಬದ ಸಂದರ್ಭದಲ್ಲಿ ಕೋಮು ಉದ್ವಿಗ್ನತೆಗಳು ಗೊಂದಲವನ್ನುಂಟುಮಾಡುತ್ತವೆ. ಇಂತಹ ಘಟನೆಗಳು ಈ ಪ್ರದೇಶದಲ್ಲಿ ಮೊದಲ ಬಾರಿ ಸಂಭವಿಸಿವೆ” ಎಂದು ಕುಮಾರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...