Homeಮುಖಪುಟಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ...

ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ

- Advertisement -
- Advertisement -

ಹಾವು ಸತ್ತು ಬಿದ್ದ ಬಿಸಿಯೂಟವನ್ನೆ ಶಾಲಾ ಮಕ್ಕಳಿಗೆ ನೀಡಿರುವ ಘಟನೆ ಬಿಹಾರದ ಶಾಲೆಯಲ್ಲಿ ನಡೆದಿದ್ದು, ಅದನ್ನು ಸೇವಿಸಿದ ಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಮಾನವ ಹಕ್ಕುಗಳ ಸಂಸ್ಥೆ ಗುರುವಾರ ತನಿಖೆ ನಡೆಸುತ್ತಿದೆ ಎಂದು ವರದಿ  ತಿಳಿಸಿದೆ. ಬಿಸಿಯೂಟ ಸೇವಿಸಿ

“ಅಡುಗೆಯವರು ಸತ್ತ ಹಾವನ್ನು ಅದರಿಂದ ಹೊರತೆಗೆದು ಮಕ್ಕಳಿಗೆ ಆಹಾರವನ್ನು ಬಡಿಸಿದ್ದಾರೆ ಎಂದು ವರದಿಯಾಗಿದೆ” ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಹೇಳಿಕೆಯಲ್ಲಿ ತಿಳಿಸಿದೆ. ಭಾರತದ ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾದ ಬಿಹಾರದ ಮೊಕಾಮಾ ನಗರದ ಸರ್ಕಾರಿ ಶಾಲೆಯಲ್ಲಿ ಕಳೆದ ವಾರ ಈ ಊಟವನ್ನು ಬಡಿಸಲಾಗಿತ್ತು ಎಂದು ಅದು ಹೇಳಿದೆ.

ಶಾಲೆಯ ಊಟವನ್ನು ತಿಂದ ನಂತರ “100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದರು” ಎಂಬ ಮಾಧ್ಯಮ ವರದಿಗಳನ್ನು ತನಿಖೆ ಮಾಡಬೇಕೆಂದು ಆಯೋಗವು ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರನ್ನು ಒತ್ತಾಯಿಸಿದೆ.

ಈ ಘಟನೆಯಿಂದ ಉದ್ರಿಕ್ತರಾದ ಮಕ್ಕಳ ಕುಟುಂಬಗಳು ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ. “ಮಧ್ಯಾಹ್ನದ ಊಟ ಸೇವಿಸಿದ ಕಾರಣ ಮಕ್ಕಳು ಅನಾರೋಗ್ಯಕ್ಕೆ ಒಳಗಾದ ಸುದ್ದಿಯ ನಂತರ ಪ್ರತಿಭಟನಾ ನಿರತ ಗ್ರಾಮಸ್ಥರು ರಸ್ತೆ ತಡೆ ಕೂಡಾ ಮಾಡಿದ್ದಾರೆ” ಎಂದು ಅದು ಹೇಳಿದೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಲಕ್ಷಾಂತರ ಮಕ್ಕಳಿಗೆ ಉಚಿತ ಊಟವನ್ನು ನೀಡಲಾಗುತ್ತದೆ. ಇದನ್ನು ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಿಸುವ ಒಂದು ಮಾರ್ಗವೆಂದು ಅಧಿಕಾರಿಗಳು ನೋಡುತ್ತಾರೆ.

“ಮಕ್ಕಳ ಆರೋಗ್ಯ ಸ್ಥಿತಿ”ಯನ್ನು ಒಳಗೊಂಡಂತೆ ಹಿರಿಯ ರಾಜ್ಯ ಅಧಿಕಾರಿಗಳು ಮತ್ತು ಪೊಲೀಸರಿಂದ “ವಿವರವಾದ ವರದಿ”ಯನ್ನು ಕೋರಿರುವುದಾಗಿ ಆಯೋಗ ಹೇಳಿದೆ. ವರದಿ ದೃಢಪಟ್ಟರೆ, “ವಿದ್ಯಾರ್ಥಿಗಳ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆ ಮುನ್ನಲೆಗೆ ಬರುತ್ತದೆ ಎಂದು ಅದು ಹೇಳಿದೆ.

2013 ರಲ್ಲಿ, ಬಿಹಾರದ ಸರನ್ ಜಿಲ್ಲೆಯಲ್ಲಿ ಕೀಟನಾಶಕಗಳನ್ನು ಬೆರೆಸಿದ ಊಟವನ್ನು ಸೇವಿಸಿದ ನಂತರ 23 ಶಾಲಾ ಮಕ್ಕಳು ಸಾವನ್ನಪ್ಪಿದ್ದರು. ಈ ವಿಪತ್ತು ಸರ್ಕಾರವು ಶಾಲೆಗಳಲ್ಲಿ ಆಹಾರ ಸುರಕ್ಷತೆಯನ್ನು ಸುಧಾರಿಸಲು ಪ್ರೇರೇಪಿಸಿತ್ತು. ಬಿಸಿಯೂಟ ಸೇವಿಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನೈನಿತಾಲ್‌ನಲ್ಲಿ ಭುಗಿಲೆದ್ದ ಕೋಮು ಉದ್ವಿಗ್ನತೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನೈನಿತಾಲ್‌ನಲ್ಲಿ ಭುಗಿಲೆದ್ದ ಕೋಮು ಉದ್ವಿಗ್ನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...