Homeಮುಖಪುಟಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ...

ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ

- Advertisement -
- Advertisement -

ಹಾವು ಸತ್ತು ಬಿದ್ದ ಬಿಸಿಯೂಟವನ್ನೆ ಶಾಲಾ ಮಕ್ಕಳಿಗೆ ನೀಡಿರುವ ಘಟನೆ ಬಿಹಾರದ ಶಾಲೆಯಲ್ಲಿ ನಡೆದಿದ್ದು, ಅದನ್ನು ಸೇವಿಸಿದ ಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಮಾನವ ಹಕ್ಕುಗಳ ಸಂಸ್ಥೆ ಗುರುವಾರ ತನಿಖೆ ನಡೆಸುತ್ತಿದೆ ಎಂದು ವರದಿ  ತಿಳಿಸಿದೆ. ಬಿಸಿಯೂಟ ಸೇವಿಸಿ

“ಅಡುಗೆಯವರು ಸತ್ತ ಹಾವನ್ನು ಅದರಿಂದ ಹೊರತೆಗೆದು ಮಕ್ಕಳಿಗೆ ಆಹಾರವನ್ನು ಬಡಿಸಿದ್ದಾರೆ ಎಂದು ವರದಿಯಾಗಿದೆ” ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಹೇಳಿಕೆಯಲ್ಲಿ ತಿಳಿಸಿದೆ. ಭಾರತದ ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾದ ಬಿಹಾರದ ಮೊಕಾಮಾ ನಗರದ ಸರ್ಕಾರಿ ಶಾಲೆಯಲ್ಲಿ ಕಳೆದ ವಾರ ಈ ಊಟವನ್ನು ಬಡಿಸಲಾಗಿತ್ತು ಎಂದು ಅದು ಹೇಳಿದೆ.

ಶಾಲೆಯ ಊಟವನ್ನು ತಿಂದ ನಂತರ “100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದರು” ಎಂಬ ಮಾಧ್ಯಮ ವರದಿಗಳನ್ನು ತನಿಖೆ ಮಾಡಬೇಕೆಂದು ಆಯೋಗವು ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರನ್ನು ಒತ್ತಾಯಿಸಿದೆ.

ಈ ಘಟನೆಯಿಂದ ಉದ್ರಿಕ್ತರಾದ ಮಕ್ಕಳ ಕುಟುಂಬಗಳು ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ. “ಮಧ್ಯಾಹ್ನದ ಊಟ ಸೇವಿಸಿದ ಕಾರಣ ಮಕ್ಕಳು ಅನಾರೋಗ್ಯಕ್ಕೆ ಒಳಗಾದ ಸುದ್ದಿಯ ನಂತರ ಪ್ರತಿಭಟನಾ ನಿರತ ಗ್ರಾಮಸ್ಥರು ರಸ್ತೆ ತಡೆ ಕೂಡಾ ಮಾಡಿದ್ದಾರೆ” ಎಂದು ಅದು ಹೇಳಿದೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಲಕ್ಷಾಂತರ ಮಕ್ಕಳಿಗೆ ಉಚಿತ ಊಟವನ್ನು ನೀಡಲಾಗುತ್ತದೆ. ಇದನ್ನು ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಿಸುವ ಒಂದು ಮಾರ್ಗವೆಂದು ಅಧಿಕಾರಿಗಳು ನೋಡುತ್ತಾರೆ.

“ಮಕ್ಕಳ ಆರೋಗ್ಯ ಸ್ಥಿತಿ”ಯನ್ನು ಒಳಗೊಂಡಂತೆ ಹಿರಿಯ ರಾಜ್ಯ ಅಧಿಕಾರಿಗಳು ಮತ್ತು ಪೊಲೀಸರಿಂದ “ವಿವರವಾದ ವರದಿ”ಯನ್ನು ಕೋರಿರುವುದಾಗಿ ಆಯೋಗ ಹೇಳಿದೆ. ವರದಿ ದೃಢಪಟ್ಟರೆ, “ವಿದ್ಯಾರ್ಥಿಗಳ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆ ಮುನ್ನಲೆಗೆ ಬರುತ್ತದೆ ಎಂದು ಅದು ಹೇಳಿದೆ.

2013 ರಲ್ಲಿ, ಬಿಹಾರದ ಸರನ್ ಜಿಲ್ಲೆಯಲ್ಲಿ ಕೀಟನಾಶಕಗಳನ್ನು ಬೆರೆಸಿದ ಊಟವನ್ನು ಸೇವಿಸಿದ ನಂತರ 23 ಶಾಲಾ ಮಕ್ಕಳು ಸಾವನ್ನಪ್ಪಿದ್ದರು. ಈ ವಿಪತ್ತು ಸರ್ಕಾರವು ಶಾಲೆಗಳಲ್ಲಿ ಆಹಾರ ಸುರಕ್ಷತೆಯನ್ನು ಸುಧಾರಿಸಲು ಪ್ರೇರೇಪಿಸಿತ್ತು. ಬಿಸಿಯೂಟ ಸೇವಿಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನೈನಿತಾಲ್‌ನಲ್ಲಿ ಭುಗಿಲೆದ್ದ ಕೋಮು ಉದ್ವಿಗ್ನತೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನೈನಿತಾಲ್‌ನಲ್ಲಿ ಭುಗಿಲೆದ್ದ ಕೋಮು ಉದ್ವಿಗ್ನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...