Homeಮುಖಪುಟಬಿಹಾರ: ಚಲಿಸುತ್ತಿದ್ದ ಬಸ್ಸಿನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ಬಿಹಾರ: ಚಲಿಸುತ್ತಿದ್ದ ಬಸ್ಸಿನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

- Advertisement -
- Advertisement -

ಬಿಹಾರದಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ 17 ವರ್ಷದ ಅಪ್ರಾಪ್ತೆ ಮೇಲೆ ಮಂಗಳವಾರ (ಜೂನ್ 7) ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

“ಬಾಲಕಿಯು ಪಶ್ಚಿಮ ಚಂಪಾರಣ್‌ನಲ್ಲಿರುವ ಬೆಟ್ಟಿಯಾಗೆ ಹೋಗಲು ಬಸ್‌ಗಾಗಿ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಳು. ಬಸ್ ಚಾಲಕನು ಬೆಟ್ಟಿಯಾಗೆ ಹೋಗುವುದಾಗಿ ಹೇಳಿ, ಆಕೆಯನ್ನು ಬಸ್‌ಗೆ ಹತ್ತಿಸಿಕೊಂಡಿದ್ದಾರೆ” ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಬೆಟ್ಟಿಯಾ-ಸದರ್ ) ಮುಕುಲ್ ಪಾಂಡೆ ಹೇಳಿದರು.

“ಬಸ್ಸಿನಲ್ಲಿ ಬಾಲಕಿಗೆ ಮತ್ತು ಬರಿಸುವ ಪಾನೀಯವನ್ನು ನೀಡಿ, ಪ್ರಜ್ಞೆ ತಪ್ಪಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಎಂದು ಪೊಲೀಸರಿಗೆ ಅಪ್ರಾಪ್ತೆ ತಿಳಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

“ಆರೋಪಿಗಳು ಆಕೆಯನ್ನು ಬಸ್ಸಿನೊಳಗೆ ಕೂಡಿಹಾಕಿ ಪರಾರಿಯಾಗಿದ್ದರು. ದಾರಿಯಲ್ಲಿ ಹೋಗುತ್ತಿದ್ದ ಜನರು ಬಸ್ಸಿನ ಬಾಗಿಲು ತೆರೆದು ಪೊಲೀಸರಿಗೆ ಮಾಹಿತಿ ನೀಡಿದರು” ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬೆಟ್ಟಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ, ಘಟನೆಗೆ ಸಂಬಂಧಿಸಿದಂತೆ ಬಸ್ಸಿನ ಚಾಲಕ, ಕಂಡಕ್ಟರ್ ಮತ್ತು ಸಹಾಯಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈಗ, ಸಂಗ್ರಹಿಸಿದ ಸಾಕ್ಷ್ಯಗಳ ವಿಶ್ಲೇಷಣೆಗಾಗಿ ವಿಧಿವಿಜ್ಞಾನ ತಜ್ಞರನ್ನು ಕರೆಯಲಾಗಿದೆ. ಈಗಾಗಲೇ ಬಸ್ ಅನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಜೊತೆಗೆ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ನಡೆದ ಹೈದರಾಬಾದ್‌ನ ಜುಬ್ಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎಐಎಂಐಎಂ ಶಾಸಕರನ ಪುತ್ರ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್: AIMIM ಶಾಸಕನ ಪುತ್ರ ಸೇರಿದಂತೆ ಎಲ್ಲ ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...