Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

- Advertisement -
- Advertisement -

ಬಿಹಾರದ ಸಿಪಿಐ(ಎಂಎಲ್) ಪಕ್ಷದ ಲೋಕಸಭಾ ಸದಸ್ಯರಾಗಿರುವ (ಕರಕಟ್ ಕ್ಷೇತ್ರ) ರಾಜ ರಾಮ್ ಸಿಂಗ್ ಅವರು, ಚನ್ನರಾಯಪಟ್ಟಣ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ದೇವನಹಳ್ಳಿ ರೈತರ ಕೊಡುಗೆಯನ್ನು ಶ್ಲಾಘಿಸಿ ಪತ್ರ ಬರೆದಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯರಿ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಸಿಪಿಐ(ಎಂಎಲ್) ಲಿಬರೇಶನ್‌ನೊಂದಿಗೆ ಸಂಬಂಧ ಹೊಂದಿರುವ ರೈತರ ಸಂಘಟನೆಯಾದ ಅಖಿಲ ಭಾರತ ಕಿಸಾನ್ ಮಹಾಸಭಾದ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ, ಕರ್ನಾಟಕ ಸರ್ಕಾರವು ದೇವನಹಳ್ಳಿ ತಾಲ್ಲೂಕಿನಲ್ಲಿ 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಪ್ರಸ್ತಾವಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ಕೈಬಿಡಬೇಕೆಂದು ಒತ್ತಾಯಿಸುತ್ತಿದ್ದೇನೆ. ಇದರ ವಿರುದ್ಧ ರೈತರು ಕಳೆದ ಸುಮಾರು 1200 ಕ್ಕೈ ಹೆಚ್ಚು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿಮಗೆ ತಿಳಿದಿರುವಂತೆ ದೇವನಹಳ್ಳಿಯ ಸುತ್ತಮುತ್ತಲಿನ ಈ ಪ್ರದೇಶವು ಹೆಚ್ಚು ಫಲವತ್ತಾದ ಭೂಮಿಯನ್ನು ಹೊಂದಿದೆ. ನಗರಕ್ಕೆ ಹಣ್ಣು, ತರಕಾರಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳನ್ನು ಪೂರೈಸುತ್ತದೆ. ಬೆಂಗಳೂರಿನ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆಗೆ ಇದು ಸುತ್ತಮುತ್ತಲಿನ ಜಿಲ್ಲೆಗಳೊಂದಿಗೆ ವಾರ್ಷಿಕವಾಗಿ ಅಂದಾಜು 7-8 ಮಿಲಿಯನ್ ಟನ್ ತೋಟಗಾರಿಕಾ ಬೆಳೆಗಳನ್ನು ಉತ್ಪಾದಿಸುತ್ತದೆ ಎಂದು ಹೇಳಲಾಗುತ್ತದೆ. ಹೈನುಗಾರಿಕೆ ಮೂಲಕ ಬೆಂಗಳೂರಿನ ನಂದಿನಿ/ಮದರ್ ಡೈರಿ ಕೇಂದ್ರಕ್ಕೆ ಪ್ರತಿದಿನ 10 ಮಿಲಿಯನ್ ಲೀಟರ್‌ಗಳಿಗಿಂತ ಹೆಚ್ಚು ಹಾಲನ್ನು ತಲುಪಿಸುತ್ತವೆ. ಹೆಚ್ಚಿನ ಬಾಧಿತ ರೈತರು, ಸ್ವಾಧೀನದ ಭಾಗವನ್ನು ಕೈಬಿಡುವ ಅಥವಾ ಕೇವಲ ಪರಿಹಾರವನ್ನು ನೀಡುವ ಯಾವುದೇ ಪರಿಹಾರಗಳನ್ನು ತಿರಸ್ಕರಿಸಿದ್ದಾರೆ. ಬದಲಿಗೆ, ಯಾವುದೇ ಸ್ವಾಧೀನ ಬೇಡ ಎಂದು ಹೇಳಿದ್ದಾರೆ. ರೈತರು ತಮ್ಮ ಕೃಷಿಯನ್ನು ಮುಂದುವರಿಸಲು, ತಲೆಮಾರುಗಳಿಂದ ನಡೆಸುವಕೊಂಡು ಬಂದಿರುವ ಜೀವನ ಮತ್ತು ಜೀವನೋಪಾಯವನ್ನು ಉಳಿಸಿಕೊಂಡಿರುವ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಬಯಸುತ್ತಾರೆ.

ಕೈಗಾರೊಕೋದ್ಯಮ ಸ್ಥಾಪನೆ ತತ್ವವನ್ನು ಆಧರಿಸಿದ ಬಲವಂತದ ಸ್ವಾಧೀನವು ವಸಾಹತುಶಾಹಿ ಅವಶೇಷವಾಗಿದೆ. ಅದಕ್ಕೆ ಪ್ರಜಾಪ್ರಭುತ್ವದಲ್ಲಿ ಯಾವುದೇ ಸ್ಥಾನವಿಲ್ಲ. ಇದಲ್ಲದೆ, ಇಲ್ಲಿಯವರೆಗೆ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಹೆಚ್ಚಿನ ಭಾಗಗಳು ಬಳಕೆಯಾಗದೆ ಉಳಿದಿವೆ ಎಂಬುದು ಈಗ ಸಾಮಾನ್ಯ ಜ್ಞಾನವಾಗಿದೆ. ಹೀಗಾಗಿ, ಕರ್ನಾಟಕ ಸರ್ಕಾರ ಸೇರಿದಂತೆ ಎಲ್ಲಾ ಸರ್ಕಾರಗಳು ವಿವಿಧ ಕಾನೂನುಗಳ ಅಡಿಯಲ್ಲಿ ಮತ್ತು ವಿವಿಧ ಉದ್ದೇಶಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಕುರಿತು ಶ್ವೇತಪತ್ರವನ್ನು ಸಿದ್ಧಪಡಿಸಿ ಪ್ರಕಟಿಸುವ ಸಮಯ ಬಂದಿದೆ, ಇದು ಕಾರ್ಯನಿರ್ವಹಿಸದ ಕೈಗಾರಿಕೆಗಳು ಮತ್ತು ಯೋಜನೆಗಳೊಂದಿಗೆ ಬಳಸಿದ, ಬಳಕೆಯಾಗದ ಮತ್ತು ಸ್ವಾಧೀನಪಡಿಸಿಕೊಂಡ ಭೂಮಿಯ ಪ್ರಮಾಣವನ್ನು ಒಳಗೊಂಡಿದೆ.

ದೇವನಹಳ್ಳಿಯ 13 ಹಳ್ಳಿಗಳಲ್ಲಿ 1777 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ರಾಜ್ಯ ಸರ್ಕಾರವು ನಿಜವಾಗಿಯೂ ಕೈಬಿಡುತ್ತದೆ ಎಂದು ಘೋಷಿಸಲು ಮತ್ತು ಮುಂಬರುವ ತಿಂಗಳುಗಳಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಗಳ ಕುರಿತು ಶ್ವೇತಪತ್ರವನ್ನು ಪ್ರಕಟಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಜುಲೈ 4 ರಂದು ಪ್ರತಿಭಟನಾ ನಿರತ ರೈತರೊಂದಿಗೆ ನಡೆಯುವ ಸಭೆಯನ್ನು ಸೂಕ್ತ ಸಂದರ್ಭವಾಗಿ ಬಳಸಿಕೊಳ್ಳಬೇಕೆಂದು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ.

ದೇವನಹಳ್ಳಿ ರೈತ ಹೋರಾಟಕ್ಕೆ ದನಿಗೂಡಿಸಿದ ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...