Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

- Advertisement -
- Advertisement -

ಬಿಹಾರದ ಸಿಪಿಐ(ಎಂಎಲ್) ಪಕ್ಷದ ಲೋಕಸಭಾ ಸದಸ್ಯರಾಗಿರುವ (ಕರಕಟ್ ಕ್ಷೇತ್ರ) ರಾಜ ರಾಮ್ ಸಿಂಗ್ ಅವರು, ಚನ್ನರಾಯಪಟ್ಟಣ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ದೇವನಹಳ್ಳಿ ರೈತರ ಕೊಡುಗೆಯನ್ನು ಶ್ಲಾಘಿಸಿ ಪತ್ರ ಬರೆದಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯರಿ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಸಿಪಿಐ(ಎಂಎಲ್) ಲಿಬರೇಶನ್‌ನೊಂದಿಗೆ ಸಂಬಂಧ ಹೊಂದಿರುವ ರೈತರ ಸಂಘಟನೆಯಾದ ಅಖಿಲ ಭಾರತ ಕಿಸಾನ್ ಮಹಾಸಭಾದ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ, ಕರ್ನಾಟಕ ಸರ್ಕಾರವು ದೇವನಹಳ್ಳಿ ತಾಲ್ಲೂಕಿನಲ್ಲಿ 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಪ್ರಸ್ತಾವಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ಕೈಬಿಡಬೇಕೆಂದು ಒತ್ತಾಯಿಸುತ್ತಿದ್ದೇನೆ. ಇದರ ವಿರುದ್ಧ ರೈತರು ಕಳೆದ ಸುಮಾರು 1200 ಕ್ಕೈ ಹೆಚ್ಚು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿಮಗೆ ತಿಳಿದಿರುವಂತೆ ದೇವನಹಳ್ಳಿಯ ಸುತ್ತಮುತ್ತಲಿನ ಈ ಪ್ರದೇಶವು ಹೆಚ್ಚು ಫಲವತ್ತಾದ ಭೂಮಿಯನ್ನು ಹೊಂದಿದೆ. ನಗರಕ್ಕೆ ಹಣ್ಣು, ತರಕಾರಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳನ್ನು ಪೂರೈಸುತ್ತದೆ. ಬೆಂಗಳೂರಿನ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆಗೆ ಇದು ಸುತ್ತಮುತ್ತಲಿನ ಜಿಲ್ಲೆಗಳೊಂದಿಗೆ ವಾರ್ಷಿಕವಾಗಿ ಅಂದಾಜು 7-8 ಮಿಲಿಯನ್ ಟನ್ ತೋಟಗಾರಿಕಾ ಬೆಳೆಗಳನ್ನು ಉತ್ಪಾದಿಸುತ್ತದೆ ಎಂದು ಹೇಳಲಾಗುತ್ತದೆ. ಹೈನುಗಾರಿಕೆ ಮೂಲಕ ಬೆಂಗಳೂರಿನ ನಂದಿನಿ/ಮದರ್ ಡೈರಿ ಕೇಂದ್ರಕ್ಕೆ ಪ್ರತಿದಿನ 10 ಮಿಲಿಯನ್ ಲೀಟರ್‌ಗಳಿಗಿಂತ ಹೆಚ್ಚು ಹಾಲನ್ನು ತಲುಪಿಸುತ್ತವೆ. ಹೆಚ್ಚಿನ ಬಾಧಿತ ರೈತರು, ಸ್ವಾಧೀನದ ಭಾಗವನ್ನು ಕೈಬಿಡುವ ಅಥವಾ ಕೇವಲ ಪರಿಹಾರವನ್ನು ನೀಡುವ ಯಾವುದೇ ಪರಿಹಾರಗಳನ್ನು ತಿರಸ್ಕರಿಸಿದ್ದಾರೆ. ಬದಲಿಗೆ, ಯಾವುದೇ ಸ್ವಾಧೀನ ಬೇಡ ಎಂದು ಹೇಳಿದ್ದಾರೆ. ರೈತರು ತಮ್ಮ ಕೃಷಿಯನ್ನು ಮುಂದುವರಿಸಲು, ತಲೆಮಾರುಗಳಿಂದ ನಡೆಸುವಕೊಂಡು ಬಂದಿರುವ ಜೀವನ ಮತ್ತು ಜೀವನೋಪಾಯವನ್ನು ಉಳಿಸಿಕೊಂಡಿರುವ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಬಯಸುತ್ತಾರೆ.

ಕೈಗಾರೊಕೋದ್ಯಮ ಸ್ಥಾಪನೆ ತತ್ವವನ್ನು ಆಧರಿಸಿದ ಬಲವಂತದ ಸ್ವಾಧೀನವು ವಸಾಹತುಶಾಹಿ ಅವಶೇಷವಾಗಿದೆ. ಅದಕ್ಕೆ ಪ್ರಜಾಪ್ರಭುತ್ವದಲ್ಲಿ ಯಾವುದೇ ಸ್ಥಾನವಿಲ್ಲ. ಇದಲ್ಲದೆ, ಇಲ್ಲಿಯವರೆಗೆ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಹೆಚ್ಚಿನ ಭಾಗಗಳು ಬಳಕೆಯಾಗದೆ ಉಳಿದಿವೆ ಎಂಬುದು ಈಗ ಸಾಮಾನ್ಯ ಜ್ಞಾನವಾಗಿದೆ. ಹೀಗಾಗಿ, ಕರ್ನಾಟಕ ಸರ್ಕಾರ ಸೇರಿದಂತೆ ಎಲ್ಲಾ ಸರ್ಕಾರಗಳು ವಿವಿಧ ಕಾನೂನುಗಳ ಅಡಿಯಲ್ಲಿ ಮತ್ತು ವಿವಿಧ ಉದ್ದೇಶಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಕುರಿತು ಶ್ವೇತಪತ್ರವನ್ನು ಸಿದ್ಧಪಡಿಸಿ ಪ್ರಕಟಿಸುವ ಸಮಯ ಬಂದಿದೆ, ಇದು ಕಾರ್ಯನಿರ್ವಹಿಸದ ಕೈಗಾರಿಕೆಗಳು ಮತ್ತು ಯೋಜನೆಗಳೊಂದಿಗೆ ಬಳಸಿದ, ಬಳಕೆಯಾಗದ ಮತ್ತು ಸ್ವಾಧೀನಪಡಿಸಿಕೊಂಡ ಭೂಮಿಯ ಪ್ರಮಾಣವನ್ನು ಒಳಗೊಂಡಿದೆ.

ದೇವನಹಳ್ಳಿಯ 13 ಹಳ್ಳಿಗಳಲ್ಲಿ 1777 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ರಾಜ್ಯ ಸರ್ಕಾರವು ನಿಜವಾಗಿಯೂ ಕೈಬಿಡುತ್ತದೆ ಎಂದು ಘೋಷಿಸಲು ಮತ್ತು ಮುಂಬರುವ ತಿಂಗಳುಗಳಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಗಳ ಕುರಿತು ಶ್ವೇತಪತ್ರವನ್ನು ಪ್ರಕಟಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಜುಲೈ 4 ರಂದು ಪ್ರತಿಭಟನಾ ನಿರತ ರೈತರೊಂದಿಗೆ ನಡೆಯುವ ಸಭೆಯನ್ನು ಸೂಕ್ತ ಸಂದರ್ಭವಾಗಿ ಬಳಸಿಕೊಳ್ಳಬೇಕೆಂದು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ.

ದೇವನಹಳ್ಳಿ ರೈತ ಹೋರಾಟಕ್ಕೆ ದನಿಗೂಡಿಸಿದ ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...