Homeಮುಖಪುಟಬಿಹಾರ| 'ಬಾಂಗ್ಲಾದೇಶಿ' ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

- Advertisement -
- Advertisement -

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ.

ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು 50 ಜನರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದರು. ಹಲ್ಲೆ ಘಟನೆಯನ್ನು ನೆನಪಿಸಿಕೊಂಡ ಖುರ್ಷಿದ್, ತಾನು ಕೆಲಸ ಮಾಡುತ್ತಿದ್ದಾಗ ತೊಂದರೆ ಪ್ರಾರಂಭವಾಯಿತು. ಸ್ವಲ್ಪ ಸಮಯದ ಬಳಿಕ ನಾನು ಹತ್ತಿರದ ಅಂಗಡಿಗೆ ತೆರಳಿದೆ. ಅಲ್ಲಿ ಒರ್ವ ವ್ಯಕ್ತಿ ನನ್ನ ಬಳಿಗೆ ಬಂದು ಜೈ ಶ್ರೀ ರಾಮ್, ಜೈ ಸೀತಾ ರಾಮ್ ಮತ್ತು ಭಾರತ್ ಮಾತಾ ಕಿ ಜೈ ಎಂದು ಕೂಗುವಂತೆ ಹೇಳಿದನು. ನಾನು ಅವನಿಗೆ ಭಾರತ್ ಕಿ ಜೈ ಎಂದು ಹೇಳಬಲ್ಲೆ ಎಂದು ಹೇಳಿದೆ” ಎಂದು ಅವರು ಹೇಳಿದರು.

ಖುರ್ಷಿದ್ ಪ್ರಕಾರ, ಆ ವ್ಯಕ್ತಿ ಮಾತಿನ ವಿನಿಮಯದ ನಂತರ ಹೊರಟುಹೋದನು. ಆದರೆ, ಅವನು ವೀಡಿಯೊವನ್ನು ರೆಕಾರ್ಡ್ ಮಾಡಿ ನಂತರ ಅದನ್ನು ವೈರಲ್ ಮಾಡಿದ. ಸುಮಾರು ಒಂದು ಗಂಟೆಯ ನಂತರ, ಅವನು ಹಿಂತಿರುಗಿ ಬಂದು ನನಗೆ ಬೆದರಿಕೆ ಹಾಕಿದ. ನಾನು ಘೋಷಣೆಗಳನ್ನು ಪಠಿಸದಿದ್ದರೆ ನನ್ನನ್ನು ಕರೆದುಕೊಂಡು ಹೋಗುವುದಾಗಿ ಅವನು ಹೇಳಿದ ಎಂದು ಖುರ್ಷಿದ್ ಆರೋಪಿಸಿದರು.

ವಿಡಿಯೊ ವೈರಲ್ ಆದ ಬಳಿಕ ಕೆಲವು ಜನರು ನನ್ನನ್ನು ಗುರುತಿಸಿ, ಬಾಂಗ್ಲಾದೇಶಿ ಎಂದು ಕರೆದು ಹೊಡೆಯಲು ಪ್ರಾರಂಭಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತು. “ನಾನು ಕೆಲಸಕ್ಕೆ ಹೋಗಿದ್ದಾಗ ಇಬ್ಬರು ಅಥವಾ ಮೂವರು ನನ್ನನ್ನು ನೋಡಿ ಹೊಡೆಯಲು ಪ್ರಾರಂಭಿಸಿದರು. ಅವರು ನನ್ನನ್ನು ಹಿಂದಿನಿಂದ ಹೊಡೆದು ‘ಬಾಂಗ್ಲಾದೇಶಿ’ ಎಂದು ಆರೋಪಿಸಿದರು” ಎಂದು ಅವರು ಹೇಳಿದರು.

ಗುಂಪು ನನ್ನನ್ನು ಹಳ್ಳಿಯ ರಸ್ತೆಗಳಲ್ಲಿ ಓಡಾಡುವಂತೆ ಒತ್ತಾಯಿಸಿತು. ಸುಮಾರು ಎರಡು ಮೂರು ಕಿಲೋಮೀಟರ್‌ಗಳವರೆಗೆ ನಿರಂತರವಾಗಿ ಹಲ್ಲೆ ಮಾಡಿದರು ಎಂದು ಖುರ್ಷಿದ್ ಆರೋಪಿಸಿದರು. “ಅವರು ನನ್ನನ್ನು ಮೆರವಣಿಗೆ ಮಾಡುತ್ತಾ ಹೊಡೆಯುತ್ತಲೇ ಇದ್ದರು. ದಾರಿಯಲ್ಲಿ ಕಾಳಿ ಮಂದಿರವಿದೆ. ಅಲ್ಲಿ ನನ್ನನ್ನು ಬಲಿಕೊಡುವುದಾಗಿ ಅವರು ಹೇಳಿದರು ಎಂದು ವಿವರಿಸಿದ್ದಾರೆ.

“ಅವರು ‘ಹಮ್ ತುಮ್ಕೋ ಕಾತ್ ದೇಂಗೆ’ ಎಂದು ಹೇಳುತ್ತಿದ್ದರು” ಎಂದು ಖುರ್ಷಿದ್ ಹಲ್ಲೆಯ ಸಮಯದಲ್ಲಿ ಅನುಭವಿಸಿದ ಭಯವನ್ನು ವಿವರಿಸುತ್ತಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...