Homeಮುಖಪುಟಬಿಹಾರ: ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ, 11 ಮಂದಿ ಕಾರ್ಮಿಕರ ಸಾವು

ಬಿಹಾರ: ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ, 11 ಮಂದಿ ಕಾರ್ಮಿಕರ ಸಾವು

- Advertisement -
- Advertisement -

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬೇಲಾ ಕೈಗಾರಿಕಾ ಪ್ರದೇಶದಲ್ಲಿರುವ ನೂಡಲ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡಿದ್ದು, ದುರಂತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ಸುಮಾರು 25 ಮಂದಿ ಇದ್ದರು ಎನ್ನಲಾಗಿದೆ.

ಗಾಯಾಳುಗಳನ್ನು ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಸ್ಫೋಟದ ತೀವ್ರತೆ ಎರಡು ಕಿಲೋಮೀಟರ್‌ಗಳ ವರೆಗೂ ತಲುಪಿತ್ತು ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲಾಗುತ್ತಿದೆ.

ಕೈಗಾರಿಕಾ ಘಟಕದಲ್ಲಿ ಕೆಲವು ಕಾರ್ಮಿಕರು ನೂಡಲ್ಸ್ ತಯಾರಿಕೆಯಲ್ಲಿ ತೊಡಗಿದ್ದಾಗ ಬೆಳಗ್ಗೆ 9.45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಫೋಟದ ಸದ್ದು ಕೇಳಿ ಸಮೀಪದ ಕೈಗಾರಿಕಾ ಘಟಕಗಳ ಜನರು ಸ್ಥಳಕ್ಕೆ ಧಾವಿಸಿದಾಗ ಕನಿಷ್ಠ 15 ಜನರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ಇದನ್ನೂ ಓದಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

“ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆ ಮತ್ತು SKMCH ಗೆ ದಾಖಲಿಸಲಾಗಿದೆ. ಬಾಯ್ಲರ್ ಸ್ಫೋಟದಿಂದ ಸಮೀಪದ ಕೈಗಾರಿಕಾ ಘಟಕಗಳ ಇತರ ಕೆಲವು ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಆದರೆ ಪ್ರಾಥಮಿಕವಾಗಿ ಬಾಯ್ಲರ್ ಸ್ಫೋಟವೇ ಘಟನೆಯ ಹಿಂದಿನ ಕಾರಣ ಎಂದು ಹೇಳಲಾಗಿದೆ” ಎಂದು ಹೇಳಿದ್ದಾರೆ.

ಹಿರಿಯ ಪೊಲೀಸ್ ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮುಜಾಫರ್‌ಪುರ ಎಸ್‌ಎಸ್‌ಪಿ ಜಯಂತ್ ಕಾಂತ್ ಅವರು ಮುಂಜಾಗ್ರತಾ ಕ್ರಮವಾಗಿ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದ್ದು, ಜನರನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಶಾಸಕ ವಿಜೇಂದ್ರ ಚೌಧರಿ, ಮೇಯರ್ ರಾಕೇಶ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬಾಯ್ಲರ್ ಸ್ಫೋಟದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳಿಗೆ ಹಾನಿಯಾಗಿದೆ ಎಂದು ಸ್ಥಳದಲ್ಲಿದ್ದವರು ಹೇಳಿದ್ದಾರೆ. ಸ್ಫೋಟದಿಂದ ಸಮೀಪದ ಅಕ್ಕಿ ತಯಾರಿಕಾ ಘಟಕದ ಮೂವರು ಕಾರ್ಮಿಕರೂ ಗಾಯಗೊಂಡಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...