Homeಮುಖಪುಟಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಎಲ್ಲ ಪಕ್ಷಗಳಂತೆ ನಾನೂ ಸಾಧ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಲು ಬಯಸಬಹುದಿತ್ತು. ಆದರೆ ಬಿಜೆಪಿ ರಾಜ್ಯದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮುವಂತೆ ಮಾಡುವುದು ನನ್ನ ಚುನಾವಣಾ ಉದ್ದೇಶವಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿಯೊಂದಿಗೆ ಸರ್ಕಾರ ರಚಿಸುವುದಾಗಿ ಹೇಳಿದ್ದ ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್, “ಈ ಚುನಾವಣೆಯಲ್ಲಿ ಜೆಡಿಯು ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು” ಎಂದು ಹೇಳಿದ್ದಾರೆ.

ಈ ಚುನಾವಣೆಯಲ್ಲಿ 137 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿದ್ದ ಚಿರಾಗ್ ಪಾಸ್ವಾನ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದ್ದಾರೆ. ಆದರೆ ಇವರ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಕನಿಷ್ಟ 20 ಕ್ಷೇತ್ರಗಳಲ್ಲಿ ಜೆಡಿಯು ಸೋತಿರುವುದು ಗಮನಾರ್ಹ. ಆದರೆ ಈ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈ ನಡೆಯಿಂದಾಗಿ ಸುಮಾರು 40 ಸ್ಥಾನಗಳನ್ನು ಜೆಡಿಯು ಕಳೆದುಕೊಂಡಿರಬಹುದು.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

“ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮಬೇಕು ಎಂದು ನಾನು ಬಯಸಿದ್ದೆ. ಈ ನಿಟ್ಟಿನಲ್ಲಿ ನನ್ನ ಪಕ್ಷವು ಬೀರಿರುವ ಪರಿಣಾಮ ನನಗೆ ತೃಪ್ತಿಯನ್ನುಂಟು ಮಾಡಿದೆ” ಎಂದು ಎಎನ್‌ಐಗೆ ಹೇಳಿದರು.

‘ಎಲ್ಲ ಪಕ್ಷಗಳಂತೆ ನಾನೂ ಸಾಧ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಲು ಬಯಸಬಹುದಿತ್ತು. ಆದರೆ ಬಿಜೆಪಿ ರಾಜ್ಯದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮುವಂತೆ ಮಾಡುವುದು ನನ್ನ ಚುನಾವಣಾ ಉದ್ದೇಶವಾಗಿತ್ತು ’ಎಂದರು.

ಇದನ್ನೂ ಓದಿ: ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ಚಿರಾಗ್ ಪಾಸ್ವಾನ್ ತನ್ನ ಅಭ್ಯರ್ಥಿಗಳನ್ನು ನಿತೀಶ್ ಎದುರು ನಿಲ್ಲಿಸಿರುವುದೇ ಬಿಜೆಪಿಯನ್ನು ಇನ್ನಷ್ಟು ಬಲಪಡಿಸಲು ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದರು.

2015ರ ಚುನಾವಣೆಯಲ್ಲಿ 71 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಯು ಬಲ ಈ ಚುನಾವಣೆಯಲ್ಲಿ 43 ಸ್ಥಾನಗಳಿಗೆ ಕುಸಿದಿದ್ದರೆ, ಆಗ 53 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಈಗ ತನ್ನ ಗೆಲುವನ್ನು 74ಕ್ಕೆ ಹೆಚ್ಚಿಸಿಕೊಂಡಿದೆ. ನಿತೀಶ್‌ಗೆ ಅಡ್ಡಗಾಲು ಹಾಕಲು ಬಿಜೆಪಿಯೇ ಚಿರಾಗ್‌ ಪಾಸ್ವಾನ್‌ಗೆ ಅವಕಾಶ ಕಲ್ಪಿಸಿತ್ತು ಎಂಬ ಊಹಾಪೋಹಗಳಿಗೆ ಇದು ಪುಷ್ಟಿ ನೀಡಿದೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ಪಕ್ಷದ ಹೀನಾಯ ಸೋಲಿನ ಕುರಿತು ಸುದ್ದಿಗಾರರ ಪ್ರಶ್ನೆಗೆ ಚಿರಾಗ್, ಸೋಲಿನ ವ್ಯಾಖ್ಯೆ ಏನು? ಎಲ್‌ಜೆಪಿ ತನ್ನ ಮತಗಳಿಕೆಯನ್ನು ಹೆಚ್ಚಿಸಿಕೊಂಡಿದೆ ಎಂದು ಉತ್ತರಿಸಿದರು.

ಮಿತ್ರಪಕ್ಷ ಎನ್‌ಡಿಎ ಬಗ್ಗೆ ಜೆಡಿಯು ಅಸಮಾಧಾನಗೊಂಡಿದೆ ಎಂದು ಮಂಗಳವಾರ ಸಂದರ್ಶನದಲ್ಲಿ ಸುಳಿವು ನೀಡಿದ್ದ ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ, ಚಿರಾಗ್ ಪಾಸ್ವಾನ್‌ರನ್ನು ಆರಂಭದಲ್ಲಿಯೇ ಖಂಡಿಸಬೇಕಿತ್ತು ಮತ್ತು ನಿಯಂತ್ರಿಸಬೇಕಿತ್ತು ಎಂದು ಹೇಳಿದ್ದರು.


ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...