Homeಮುಖಪುಟಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದು, ಅವರು ಇಂದು ಸಂಜೆ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಬಾರಿಗೆ ಬಿಜೆಪಿ ಜೊತೆಗಿನ ಮೈತ್ರಿ ತ್ಯಜಿಸುವ ನಿರ್ಧಾರಕ್ಕೆ ಬರುವ ಮುನ್ನ ನಿತೀಶ್ ಕುಮಾರ್ ಅವರು ತಮ್ಮ ಶಾಸಕರೊಂದಿಗೆ ಸಭೆ ನಡೆಸಿದರು. “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಸಭೆಯ ಮೊದಲು ಎನ್‌ಡಿಟಿವಿಗೆ ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದು, “ಈ ಮೈತ್ರಿ ಉಳಿಯುತ್ತದೆ ಎಂದು ನಿರೀಕ್ಷಿಸಲಾಗದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಪಕ್ಷವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿರುವುದು ಇಂದಿನ ಬೆಳವಣಿಗೆಗಳಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಅವರು ತಮ್ಮದೇ ಪಕ್ಷದ ಮಾಜಿ ನಾಯಕ ಆರ್‌ಸಿಪಿ ಸಿಂಗ್ ವಿರುದ್ಧ ಹರಿಹಾಯ್ದಿದ್ದಾರೆ. ಅಮಿತ್ ಶಾ ಅವರ ಪರವಾಗಿ ಆರ್‌ಸಿಪಿ ಸಿಂಗ್‌ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ನಂತರದಲ್ಲಿ ಪಕ್ಷವನ್ನು ಸಿಂಗ್‌ ತೊರೆದಿದ್ದಾರೆ.

ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕೂಡ ಬಿಹಾರ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಸಿದೆ. ತೇಜಸ್ವಿ ಯಾದವ್ ಪಕ್ಷದ ನೇತೃತ್ವ ವಹಿಸಿದ್ದಾರೆ. ನಿತೀಶ್ ಕುಮಾರ್‌ಗೆ ತನ್ನ ಬೆಂಬಲವನ್ನು ಔಪಚಾರಿಕವಾಗಿ ಘೋಷಿಸುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಲು, ಐದು ಅಂಶಗಳು ಕಾರಣವಾದವು ಎಂದು ಕುರಿತು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

  1. ಸ್ಪೀಕರ್‌ ಹಸ್ತಕ್ಷೇಪ

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು.

2. ಕೇಂದ್ರದಲ್ಲಿ ಸಿಗದ ಸ್ಥಾನಮಾನ

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

3. ಏಕಕಾಲದ ಚುನಾವಣೆ ಚಿಂತನೆಗೆ ಜೆಡಿಯು ವಿರೋಧ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿರಲಿಲ್ಲ.

4.  ಬಿಹಾರದ ಮೇಲೆ ಅಮಿತ್ ಶಾ ಹಿಡಿತ

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದರು ಎಂಬ ಆರೋಪಗಳು ಬಂದವು.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

5. ನಿತೀಶ್‌ಕುಮಾರ್‌ ಮಾತು ಕೇಳದ ಆರ್‌ಸಿಪಿ ಸಿಂಗ್‌

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...