Homeಮುಖಪುಟಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದು, ಅವರು ಇಂದು ಸಂಜೆ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಬಾರಿಗೆ ಬಿಜೆಪಿ ಜೊತೆಗಿನ ಮೈತ್ರಿ ತ್ಯಜಿಸುವ ನಿರ್ಧಾರಕ್ಕೆ ಬರುವ ಮುನ್ನ ನಿತೀಶ್ ಕುಮಾರ್ ಅವರು ತಮ್ಮ ಶಾಸಕರೊಂದಿಗೆ ಸಭೆ ನಡೆಸಿದರು. “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಸಭೆಯ ಮೊದಲು ಎನ್‌ಡಿಟಿವಿಗೆ ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದು, “ಈ ಮೈತ್ರಿ ಉಳಿಯುತ್ತದೆ ಎಂದು ನಿರೀಕ್ಷಿಸಲಾಗದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಪಕ್ಷವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿರುವುದು ಇಂದಿನ ಬೆಳವಣಿಗೆಗಳಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಅವರು ತಮ್ಮದೇ ಪಕ್ಷದ ಮಾಜಿ ನಾಯಕ ಆರ್‌ಸಿಪಿ ಸಿಂಗ್ ವಿರುದ್ಧ ಹರಿಹಾಯ್ದಿದ್ದಾರೆ. ಅಮಿತ್ ಶಾ ಅವರ ಪರವಾಗಿ ಆರ್‌ಸಿಪಿ ಸಿಂಗ್‌ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ನಂತರದಲ್ಲಿ ಪಕ್ಷವನ್ನು ಸಿಂಗ್‌ ತೊರೆದಿದ್ದಾರೆ.

ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕೂಡ ಬಿಹಾರ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಸಿದೆ. ತೇಜಸ್ವಿ ಯಾದವ್ ಪಕ್ಷದ ನೇತೃತ್ವ ವಹಿಸಿದ್ದಾರೆ. ನಿತೀಶ್ ಕುಮಾರ್‌ಗೆ ತನ್ನ ಬೆಂಬಲವನ್ನು ಔಪಚಾರಿಕವಾಗಿ ಘೋಷಿಸುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಲು, ಐದು ಅಂಶಗಳು ಕಾರಣವಾದವು ಎಂದು ಕುರಿತು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

  1. ಸ್ಪೀಕರ್‌ ಹಸ್ತಕ್ಷೇಪ

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು.

2. ಕೇಂದ್ರದಲ್ಲಿ ಸಿಗದ ಸ್ಥಾನಮಾನ

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

3. ಏಕಕಾಲದ ಚುನಾವಣೆ ಚಿಂತನೆಗೆ ಜೆಡಿಯು ವಿರೋಧ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿರಲಿಲ್ಲ.

4.  ಬಿಹಾರದ ಮೇಲೆ ಅಮಿತ್ ಶಾ ಹಿಡಿತ

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದರು ಎಂಬ ಆರೋಪಗಳು ಬಂದವು.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

5. ನಿತೀಶ್‌ಕುಮಾರ್‌ ಮಾತು ಕೇಳದ ಆರ್‌ಸಿಪಿ ಸಿಂಗ್‌

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...