Homeಮುಖಪುಟಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದು, ಅವರು ಇಂದು ಸಂಜೆ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಬಾರಿಗೆ ಬಿಜೆಪಿ ಜೊತೆಗಿನ ಮೈತ್ರಿ ತ್ಯಜಿಸುವ ನಿರ್ಧಾರಕ್ಕೆ ಬರುವ ಮುನ್ನ ನಿತೀಶ್ ಕುಮಾರ್ ಅವರು ತಮ್ಮ ಶಾಸಕರೊಂದಿಗೆ ಸಭೆ ನಡೆಸಿದರು. “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಸಭೆಯ ಮೊದಲು ಎನ್‌ಡಿಟಿವಿಗೆ ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದು, “ಈ ಮೈತ್ರಿ ಉಳಿಯುತ್ತದೆ ಎಂದು ನಿರೀಕ್ಷಿಸಲಾಗದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಪಕ್ಷವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿರುವುದು ಇಂದಿನ ಬೆಳವಣಿಗೆಗಳಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಅವರು ತಮ್ಮದೇ ಪಕ್ಷದ ಮಾಜಿ ನಾಯಕ ಆರ್‌ಸಿಪಿ ಸಿಂಗ್ ವಿರುದ್ಧ ಹರಿಹಾಯ್ದಿದ್ದಾರೆ. ಅಮಿತ್ ಶಾ ಅವರ ಪರವಾಗಿ ಆರ್‌ಸಿಪಿ ಸಿಂಗ್‌ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ನಂತರದಲ್ಲಿ ಪಕ್ಷವನ್ನು ಸಿಂಗ್‌ ತೊರೆದಿದ್ದಾರೆ.

ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕೂಡ ಬಿಹಾರ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಸಿದೆ. ತೇಜಸ್ವಿ ಯಾದವ್ ಪಕ್ಷದ ನೇತೃತ್ವ ವಹಿಸಿದ್ದಾರೆ. ನಿತೀಶ್ ಕುಮಾರ್‌ಗೆ ತನ್ನ ಬೆಂಬಲವನ್ನು ಔಪಚಾರಿಕವಾಗಿ ಘೋಷಿಸುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಲು, ಐದು ಅಂಶಗಳು ಕಾರಣವಾದವು ಎಂದು ಕುರಿತು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

  1. ಸ್ಪೀಕರ್‌ ಹಸ್ತಕ್ಷೇಪ

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು.

2. ಕೇಂದ್ರದಲ್ಲಿ ಸಿಗದ ಸ್ಥಾನಮಾನ

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

3. ಏಕಕಾಲದ ಚುನಾವಣೆ ಚಿಂತನೆಗೆ ಜೆಡಿಯು ವಿರೋಧ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿರಲಿಲ್ಲ.

4.  ಬಿಹಾರದ ಮೇಲೆ ಅಮಿತ್ ಶಾ ಹಿಡಿತ

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದರು ಎಂಬ ಆರೋಪಗಳು ಬಂದವು.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

5. ನಿತೀಶ್‌ಕುಮಾರ್‌ ಮಾತು ಕೇಳದ ಆರ್‌ಸಿಪಿ ಸಿಂಗ್‌

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...