Homeಮುಖಪುಟಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದು, ಅವರು ಇಂದು ಸಂಜೆ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಬಾರಿಗೆ ಬಿಜೆಪಿ ಜೊತೆಗಿನ ಮೈತ್ರಿ ತ್ಯಜಿಸುವ ನಿರ್ಧಾರಕ್ಕೆ ಬರುವ ಮುನ್ನ ನಿತೀಶ್ ಕುಮಾರ್ ಅವರು ತಮ್ಮ ಶಾಸಕರೊಂದಿಗೆ ಸಭೆ ನಡೆಸಿದರು. “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಸಭೆಯ ಮೊದಲು ಎನ್‌ಡಿಟಿವಿಗೆ ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದು, “ಈ ಮೈತ್ರಿ ಉಳಿಯುತ್ತದೆ ಎಂದು ನಿರೀಕ್ಷಿಸಲಾಗದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಪಕ್ಷವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿರುವುದು ಇಂದಿನ ಬೆಳವಣಿಗೆಗಳಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಅವರು ತಮ್ಮದೇ ಪಕ್ಷದ ಮಾಜಿ ನಾಯಕ ಆರ್‌ಸಿಪಿ ಸಿಂಗ್ ವಿರುದ್ಧ ಹರಿಹಾಯ್ದಿದ್ದಾರೆ. ಅಮಿತ್ ಶಾ ಅವರ ಪರವಾಗಿ ಆರ್‌ಸಿಪಿ ಸಿಂಗ್‌ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ನಂತರದಲ್ಲಿ ಪಕ್ಷವನ್ನು ಸಿಂಗ್‌ ತೊರೆದಿದ್ದಾರೆ.

ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕೂಡ ಬಿಹಾರ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಸಿದೆ. ತೇಜಸ್ವಿ ಯಾದವ್ ಪಕ್ಷದ ನೇತೃತ್ವ ವಹಿಸಿದ್ದಾರೆ. ನಿತೀಶ್ ಕುಮಾರ್‌ಗೆ ತನ್ನ ಬೆಂಬಲವನ್ನು ಔಪಚಾರಿಕವಾಗಿ ಘೋಷಿಸುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಲು, ಐದು ಅಂಶಗಳು ಕಾರಣವಾದವು ಎಂದು ಕುರಿತು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

  1. ಸ್ಪೀಕರ್‌ ಹಸ್ತಕ್ಷೇಪ

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು.

2. ಕೇಂದ್ರದಲ್ಲಿ ಸಿಗದ ಸ್ಥಾನಮಾನ

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

3. ಏಕಕಾಲದ ಚುನಾವಣೆ ಚಿಂತನೆಗೆ ಜೆಡಿಯು ವಿರೋಧ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿರಲಿಲ್ಲ.

4.  ಬಿಹಾರದ ಮೇಲೆ ಅಮಿತ್ ಶಾ ಹಿಡಿತ

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದರು ಎಂಬ ಆರೋಪಗಳು ಬಂದವು.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

5. ನಿತೀಶ್‌ಕುಮಾರ್‌ ಮಾತು ಕೇಳದ ಆರ್‌ಸಿಪಿ ಸಿಂಗ್‌

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...