Homeಮುಖಪುಟಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ.

ಸಿಎಂ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಮಗನ ನಿಶಾಂತ್ ಜೆಡಿಯು ಸೇರ್ಪಡೆಗೊಂಡಿರುವುದು ಗಮನಾರ್ಹ. ಇದರಿಂದ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದರೆ, ರಾಜ್ಯ ಸರ್ಕಾರದಲ್ಲಿ ನಿಶಾಂತ್‌ಗೆ ಅವಕಾಶ ಸಿಗಲಿದೆಯೇ? ಎಂಬ ಚರ್ಚೆ ಶುರುವಾಗಿದೆ.

ಇಂಜಿನಿಯರಿಂಗ್ ಪದವೀದರರಾಗಿರುವ 40 ವರ್ಷದ ನಿಶಾಂತ್ ಕುಮಾರ್ ಪಾಟ್ನಾದ ಜೆಡಿಯು ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸಂಜಯ್ ಜಾ ಅವರಿಂದ ಸದಸ್ಯತ್ವ ಸ್ವೀಕರಿಸಿದರು. ಈ ವೇಳೆ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಮತ್ತು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಚೌಧರಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

ನಿಶಾಂತ್ ಪಕ್ಷದ ಕಚೇರಿಗೆ ಆಗಮಿಸುತ್ತಿದ್ದಂತೆ, ಜೆಡಿಯು ಕಾರ್ಯಕರ್ತರು “ಯುವ ಸೋಚ್, ಮಜ್ಬೂತ್ ಸಂಕಲ್ಪ್” (ಯುವ ಚಿಂತನೆ, ದೃಢ ನಿರ್ಧಾರ) ಎಂಬ ಘೋಷಣೆಗಳನ್ನು ಕೂಗಿದರು. ಅವರ ಈ ಪ್ರವೇಶವು ಪಕ್ಷದೊಳಗೆ ಯುವಕೇಂದ್ರಿತ ಕಾರ್ಯಸೂಚಿಗಳಿಗೆ ಹೆಚ್ಚಿನ ಒತ್ತು ನೀಡಬಹುದು ಎಂಬ ನಿರೀಕ್ಷೆಗಳನ್ನು ಇದು ಪ್ರತಿಬಿಂಬಿಸಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೆಡಿಯು ಸೇರಿದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ನಿಶಾಂತ್, ನಮ್ಮ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾಯಕರು ಮತ್ತು ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿದರು ಎಂದು ವರದಿ ಉಲ್ಲೇಖಿಸಿದೆ.

“ನಾನು ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನೀವೆಲ್ಲರೂ ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ. ಕಳೆದ 20 ವರ್ಷಗಳಲ್ಲಿ ನನ್ನ ತಂದೆ ಮಾಡಿದ ಸಾಧನೆಗಳ ಬಗ್ಗೆ ನಾನು, ಇಡೀ ಬಿಹಾರ ಮತ್ತು ಇಡೀ ದೇಶ ಹೆಮ್ಮೆಪಡುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿ ನೀಡಿದ ಕೊಡುಗೆಯನ್ನು ರಾಜ್ಯದ ಜನತೆ ಎಂದಿಗೂ ಮರೆಯುವುದಿಲ್ಲ” ಎಂದಿದ್ದಾರೆ.

ನಿತೀಶ್ ಕುಮಾರ್ ರಾಜ್ಯಸಭೆಗೆ ಹೋಗುವ ನಿರ್ಧಾರದ ಬಗ್ಗೆಯೂ ನಿಶಾಂತ್ ಪ್ರಸ್ತಾಪಿಸಿದ್ದು, “ನನ್ನ ತಂದೆಯವರು ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದಾರೆ. ನಾವು ಅವರ ನಿರ್ಧಾರವನ್ನು ಗೌರವಿಸುತ್ತೇವೆ ಮತ್ತು ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಮಗನ ಪಕ್ಷದ ಸೇರ್ಪಡೆ ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ಹಾಜರಾಗದಿದ್ದರೂ, ನಿಶಾಂತ್ ಅವರ ಅಧಿಕೃತ ಸೇರ್ಪಡೆಯು ಜೆಡಿಯು ಪಾಲಿಗೆ ಒಂದು ಮಹತ್ವದ ಕ್ಷಣವೆಂದು ಪರಿಗಣಿಸಲಾಗಿದೆ. ರಾಜಕೀಯ ವಿಶ್ಲೇಷಕರು ಇದನ್ನು ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಸಂಭಾವ್ಯ ಆರಂಭವೆಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...