Homeಮುಖಪುಟಬಿಹಾರ: ಕರ್ತವ್ಯದ ವೇಳೆ ಮೊಬೈಲ್, ಸಾಮಾಜಿಕ ಜಾಲತಾಣ ಬಳಸದಂತೆ ಪೊಲೀಸರಿಗೆ ಆದೇಶ

ಬಿಹಾರ: ಕರ್ತವ್ಯದ ವೇಳೆ ಮೊಬೈಲ್, ಸಾಮಾಜಿಕ ಜಾಲತಾಣ ಬಳಸದಂತೆ ಪೊಲೀಸರಿಗೆ ಆದೇಶ

- Advertisement -
- Advertisement -

ಟ್ರಾಫಿಕ್ ಡ್ಯೂಟಿ, ವಿಐಪಿ ಅಥವಾ ವಿವಿಐಪಿ ಕರ್ತವ್ಯದಲ್ಲಿರುವಾಗ ವಿಶೇಷ ಪರಿಸ್ಥಿತಿ ಹೊರತು ಪಡಿಸಿ ಮೊಬೈಲ್ ಫೋನ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರಬಾರದು ಎಂದು ಬಿಹಾರದ ಪೊಲೀಸರಿಗೆ ಆದೇಶಿಸಲಾಗಿದೆ.

ಬಿಹಾರ ಡಿಜಿಪಿ (ಪೊಲೀಸ್ ಮಹಾನಿರ್ದೇಶಕ) ಎಸ್.ಕೆ. ಸಿಂಘಾಲ್ ಮಂಗಳವಾರ ಆದೇಶವನ್ನು ಜಾರಿಗೊಳಿಸಿದ್ದಾರೆ. ರಾಜ್ಯದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಇದನ್ನು ತಿಳಿಸಲಾಗಿದೆ. ಆದೇಶವನ್ನು  ಉಲ್ಲಂಘಿಸಿದ ಪೊಲೀಸ್ ಅಧಿಕಾರಿಗಳು ಅಥವಾ ಸಿಬ್ಬಂದಿ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಪೊಲೀಸರು ಕರ್ತವ್ಯದಲ್ಲಿದ್ದಾಗ ತಮ್ಮ ಸ್ಮಾರ್ಟ್‌ಫೋನ್‌ಗಳು ಮತ್ತು ಮೊಬೈಲ್ ಪೋನ್‌ಗಳಲ್ಲಿ ಹೆಚ್ಚು ಕಾರ್ಯನಿರತರಾಗಿರುತ್ತಾರೆ ಎಂದು ಪೊಲೀಸ್ ಸಿಬ್ಬಂದಿ ಬಗ್ಗೆ ಹಲವಾರು ದೂರುಗಳು ಮತ್ತು ವರದಿಗಳು ಬಂದಿವೆ ಹಾಗಾಗಿ ಈ ಆದೇಶ ನೀಡಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

 

Image“ನಗರದ ವಿವಿಧ ಭಾಗಗಳಲ್ಲಿ ಪೊಲೀಸರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಆಟವಾಡುವುದು, ಮಾತನಾಡುವುದು ಅಥವಾ ಪರಸ್ಪರ ಸಂದೇಶ ಕಳುಹಿಸುವುದರಲ್ಲಿ ನಿರತರಾಗಿರುವುದನ್ನು ನಾವು ನೋಡಬಹುದು. ಇದೇ ಅವರ ಪ್ರಧಾನ ಕರ್ತವ್ಯವೆಂಬಂತೆ ಮಾಡುತ್ತಿರುತ್ತಾರೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಸಂದರ್ಭಗಳಿಗೆ ಸ್ಪಂದಿಸಲು ಪೊಲೀಸರು ಯಾವಾಗಲು ಸಿದ್ಧರಾಗಿರಬೇಕು. ಕರ್ತವ್ಯದಲ್ಲಿರುವ ಪೊಲೀಸರು ಯಾವಾಗಲು ಜಾಗರುಕರಾಗಿರಬೇಕು. ವಿಶೇಷವಾಗಿ ಕಾರ್ಯನಿರತ ಟ್ರಾಫಿಕ್ ಸಿಗ್ನಲ್‌ಗಳಲ್ಲಿ, ವಿಐಪಿ / ವಿವಿಐಪಿ ಭೇಟಿಗಳಿಗೆ ನಿಯೋಜಿಸಲ್ಪಟ್ಟ ಸಂದರ್ಭ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವಾಗ ಎಚ್ಚರ ಅಗತ್ಯ. ಅಲ್ಲಿ ಮೊಬೈಲ್‌ಗಳನ್ನು ಬಳಸುತ್ತಿರುವುದು ಕೆಟ್ಟ ಪರಿಣಾಮ ಬೀರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟ್ರಾಫಿಕ್ ಸಿಗ್ನಲ್‌ ಅಥವಾ ವಿಐಪಿ ಡ್ಯೂಟಿಯಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿರುವಾಗ, ತಮ್ಮ ಹಿರಿಯ ಅಧಿಕಾರಿಗಳಿಗೆ ತಮ್ಮ ಮೊಬೈಲ್ ಫೋನ್‌ಗಳನ್ನು ನೀಡಿ ನಂತರ ಹಾಜರಾಗಬೇಕು ಎಂದು ಸೆಪ್ಟೆಂಬರ್ 2019 ರಲ್ಲಿ ರಾಜಸ್ಥಾನ ಸರ್ಕಾರ ಆದೇಶಿಸಿದೆ.


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...