Homeಮುಖಪುಟಬಿಹಾರ ರಾಜಕೀಯ ಬಿಕ್ಕಟ್ಟು; 'ಇಧರ್-ಉಧರ್' ಎನ್ನುವ ಗೊಂದಲ ಪರಿಹರಿಸಿ: ಆರ್‌ಜೆಡಿ

ಬಿಹಾರ ರಾಜಕೀಯ ಬಿಕ್ಕಟ್ಟು; ‘ಇಧರ್-ಉಧರ್’ ಎನ್ನುವ ಗೊಂದಲ ಪರಿಹರಿಸಿ: ಆರ್‌ಜೆಡಿ

- Advertisement -
- Advertisement -

ಮಹಾ ಘಟಬಂಧನ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಭಾನುವಾರ ಏಳನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಗೊಂದಲ ಪರಿಹರಿಸುವಂತೆ ರಾಷ್ಟ್ರೀಯ ಜನತಾದಳ ಪಕ್ಷವು ಗಡುವು ನೀಡಿದೆ. ಈ ನಡುವೆ ಸಿಎಂ ನಿತೀಶ್ ಕುಮಾರ್ ರಾಜಭವನದಲ್ಲಿ ಬೀಡು ಬಿಟ್ಟಿದ್ದಾರೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಗೆ ಸೇರ್ಪಡೆಗೊಳ್ಳಲು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ಕುರಿತು ಸ್ಪಷ್ಟನೆ ನೀಡುವಂತೆ ನಿತೀಶ್ ಕುಮಾರ್ ಅವರನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಶುಕ್ರವಾರ ಕೇಳಿದೆ. ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ  ಸಂಸದ ಮನೋಜ್ ಝಾ, ‘ಸಂಜೆಯೊಳಗೆ ಬಿಹಾರ ಮುಖ್ಯಮಂತ್ರಿ ಗೊಂದಲವನ್ನು ಪರಿಹರಿಸಬೇಕು’ ಎಂದು ಹೇಳಿದರು.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ (ಆರ್) ಮತ್ತು ತೇಜಸ್ವಿ ಯಾದವ್ 2022 ರಲ್ಲಿ ನಿತೀಶ್ ಕುಮಾರ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದರು. ಆರ್‌ಜೆಡಿ ಮೈತ್ರಿಯನ್ನು ಮುಂದುವರಿಸಲು ಸಿದ್ಧವಾಗಿದೆ ಮತ್ತು ಸರ್ಕಾರ ಬೀಳಿಸುವ ಆಟಗಳನ್ನು ಎಂದಿಗೂ ಆಡಲಿಲ್ಲ ಎಂದು ಮನೋಜ್ ಝಾ ಹೇಳಿದ್ದಾರೆ.

‘ಸಂಜೆಯೊಳಗೆ ಗೊಂದಲವನ್ನು ನಿವಾರಿಸಲು ನಾವು ನಿತೀಶ್ ಕುಮಾರ್ ಅವರನ್ನು ವಿನಂತಿಸುತ್ತೇವೆ. ಮೈತ್ರಿ ಬಗ್ಗೆ ಈ ಗೊಂದಲ, ಜನರ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುತ್ತಿದೆ … ನಮ್ಮ ಕಡೆಯಿಂದ ಇದು ಸ್ಪಷ್ಟವಾಗಿದೆ. ಹಾಗಾಗಿ ಮಾಧ್ಯಮ ವರದಿಗಳಿಂದ ಹೊರಹೊಮ್ಮುವ ಈ ಗೊಂದಲವು ನಮ್ಮನ್ನು ಗೊಂದಲಕ್ಕೀಡುಮಾಡಿದೆ. ನೀವು ನಮ್ಮ ಕಡೆಯಿಂದ ಯಾವುದೇ ಹೇಳಿಕೆ ನೀಡಿಲ್ಲ. ಹಾಗಾಗಿ ನಾನು ವಿನಂತಿಸುತ್ತೇನೆ, ‘ಇಧರ್-ಉಧರ್’ ಎನ್ನುವ ಗೊಂದಲ ಪರಿಹರಿಸಿ. ಮುಖ್ಯಮಂತ್ರಿಯೂ ಮಾಧ್ಯಮ ವರದಿಗಳನ್ನು ವೀಕ್ಷಿಸುತ್ತಾರೆ. ಆರ್‌ಜೆಡಿ ಇಂಥ ಆಟವನ್ನು ಎಂದಿಗೂ ಆಡಲಿಲ್ಲ’ ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು ವರದಿಗಳನ್ನು ನಿರಾಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮನೋಜ್ ಝಾ ಹೇಳಿದ್ದಾರೆ.

ಜೆಡಿಯು ಇಂಡಿಯಾ ಬ್ಲಾಕ್‌ನೊಂದಿಗಿದೆ:

ಈ ನಡುವೆ, ‘ಪಕ್ಷವು ವಿರೋಧ ಪಕ್ಷದೊಂದಿಗೆ ದೃಢವಾಗಿದೆ. ಆದರೆ, ಮೈತ್ರಿ ಮತ್ತು ಸೀಟು ಹಂಚಿಕೆಯ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲು ಬಯಸುತ್ತದೆ’ ಎಂದು ಜೆಡಿಯು ಉನ್ನತ ಮೂಲಗಳು ಹೇಳಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿ ಮತ್ತು ಅದರ ಬಿಹಾರ ಮಿತ್ರಪಕ್ಷಗಳು ಇಂದು ಜನತಾ ದಳ (ಯುನೈಟೆಡ್) ಮೈತ್ರಿ ಸಾಧ್ಯತೆಗಳನ್ನು ಅನ್ವೇಷಿಸುತ್ತಿದೆ ಎಂದು ಸುಳಿವು ನೀಡಿವೆ.

‘ಬಿಹಾರದ ರಾಜಕೀಯ ಪರಿಸ್ಥಿತಿಯನ್ನು ದೆಹಲಿಯಲ್ಲಿ ಚರ್ಚಿಸಲಾಗಿದ್ದು, ಪರಿಸ್ಥಿತಿಯನ್ನು ವಿಶ್ಲೇಷಿಸಿದ ನಂತರವೇ ಸಮರ್ಥ ನಾಯಕತ್ವವನ್ನು ನಿರ್ಧರಿಸಲಾಗುವುದು… ಬಿಹಾರದಲ್ಲಿ ಸಂಪೂರ್ಣ ಅರಾಜಕತೆ ಮತ್ತು ರಾಜಕೀಯ ಅಸ್ಥಿರತೆ ಇದೆ… ಪಕ್ಷದ ಚುಕ್ಕಾಣಿ ಹಿಡಿಯುವ ನಿರ್ಧಾರ ಪಕ್ಷದ ಎಲ್ಲಾ ಕಾರ್ಯಕರ್ತರು ಒಪ್ಪಿಕೊಂಡಿದ್ದಾರೆ’ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಹೇಳಿದ್ದಾರೆ.

‘ಸ್ವಲ್ಪ ಸಮಯದಲ್ಲಿ ಬದಲಾವಣೆ ಖಚಿತ, ಪಕ್ಷವು ಸಹ ನಿರ್ಧಾರ ತೆಗೆದುಕೊಂಡಿದೆ. ನಿತೀಶ್ ಜಿ ಕೂಡ ಸಿದ್ಧರಾಗಿದ್ದಾರೆ. ಪ್ರಧಾನಿ ಮೋದಿ ಕೂಡ ನಿತೀಶ್ ಜಿಯನ್ನು ಇಷ್ಟಪಡುತ್ತಾರೆ. ಬಿಹಾರದ ಎಲ್ಲಾ 40 ಸ್ಥಾನಗಳನ್ನು ಎನ್ಡಿಎ ಗೆಲ್ಲುತ್ತದೆ. ನಿತೀಶ್ ಜೀ ನಮ್ಮೊಂದಿಗೆ ಸೇರಿಕೊಂಡರೆ. ಎರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ ಎಂದು ನಾನು ಭಾವಿಸುತ್ತೇನೆ. ಬಿಹಾರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ’ ಎಂದು ಅವರು ಹೇಳಿದರು.

ಈ ವಾರದ ಆರಂಭದಲ್ಲಿ, ನಿತೀಶ್ ಕುಮಾರ್ ಅವರು ಕರ್ಪೂರಿ ಠಾಕೂರ್ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ರಾಜವಂಶದ ರಾಜಕೀಯದ ಬಗ್ಗೆ ಮಾತನಾಡುವಾಗ ಬಿಹಾರ ಮೈತ್ರಿಯಲ್ಲಿ ಕೋಲಾಹಲವನ್ನು ಉಂಟುಮಾಡಿದರು. ಕೂಡಲೇ, ಲಾಲು ಯಾದವ್ ಅವರ ಪುತ್ರಿ ರೋಶ್ನಿ ಆಚಾರ್ಯ ಎಕ್ಸ್ನಲ್ಲಿ ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಬರೆದಿದ್ದಾರೆ. ಅವರು ನಿತೀಶ್ ಕುಮಾರ್ ಅವರನ್ನು “ಬಡ್ತಮೀಜ್” ಎಂದು ಕರೆದಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಇದನ್ನೂ ಓದಿ; ಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...