Homeಮುಖಪುಟಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

ಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ‘ಮಹಾ ಘಟಬಂಧನ್’ ತೊರೆಯುವುದು ಖಚಿತವಾಗಿದ್ದು, ಬಿಜೆಪಿ ಜತೆ ಸೇರಿ ಅವರು ಇದೆ ಭಾನುವಾರ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್ ಮುಖ್ಯಮಂತ್ರಿಯಾದರೆ, ಬಿಹಾರ ಬಿಜೆಪಿ ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ಪಡೆಯುತ್ತದೆ ಎನ್ನಲಾಗಿದ್ದು, 2020ರ ಚುನಾವಣೆಯ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.

ಈ ಸಮಯದಲ್ಲಿ ನಿತೀಶ್ ಕುಮಾರ್ ವಿಧಾನಸಭೆ ವಿಸರ್ಜಿಸಿ, ಮತ್ತೆ ಚುನಾವಣೆಗೆ ಹೋಗುವುದಿಲ್ಲ ಎಂದು ತಿಳಿದುಬಂದಿದ್ದು, ಮುಂದಿನ ವರ್ಷ ಬಿಹಾರ ವಿಧಾನಸಭೆಗೆ ಮತದಾನ ನಡೆಯಲಿದೆ. ಆದ್ದರಿಂದ, ಬಿಜೆಪಿ-ಜೆಡಿಯು ಪಕ್ಷಗಳು ವಿಧಾನಸಭೆ ವಿಸರ್ಜಿಸುವ ಆತುರದಲ್ಲಿಲ್ಲ. ಆದರೆ, ಉಭಯ ಪಕ್ಷಗಳ ಚಿತ್ತ ಈಗ ಲೋಕಸಭೆ ಚುನಾವಣೆ ಮೇಲಿದೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಜನವರಿ 28ರವರೆಗೆ ನಿಗದಿಯಾಗಿದ್ದ ಸಾರ್ವಜನಿಕ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು 2022 ರಲ್ಲಿ ಬಿಜೆಪಿಗೆ ಕೈಕೊಟ್ಟು ಮಹಾ ಘಟಬಂಧನ್ ಕಡೆಗೆ ಜಿಗಿದಿದ್ದರು. ಈಗ ಮತ್ತೊಮ್ಮೆ ಬಿಜೆಪಿ ಸೇರಲು ಮುಂದಾಗಿದ್ದಾರೆ. ಆ ಮೂಲಕ ತಮ್ಮ ‘ಪಲ್ಟು ಕುಮಾರ್’ ಅಡ್ಡಹೆಸರನ್ನು ಮರುಪಡೆಯಲು ಸಜ್ಜಾಗಿದ್ದಾರೆ.

ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮರಳುವುದಕ್ಕೆ ಬಿಜೆಪಿ ಹಲವು ಷರತ್ತುಗಳನ್ನು ವಿಧಿಸಿದೆ ಎನ್ನಲಾಗುತ್ತಿದೆ. ವಿಧಾನಸಭೆ ಸ್ಪೀಕರ್ ಯಾರಾಗಬೇಕು ಎಂಬುದರಿಂದ ಹಿಡಿದು, ಕ್ಯಾಬಿನೆಟ್ ಮರು-ವಿಂಗಡಣೆಯನ್ನು ಒಳಗೊಂಡಿರುತ್ತದೆ. ಬಿಜೆಪಿ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರತಿ ನಾಲ್ಕು ಶಾಸಕರಿಗೆ ಒಂದು ಮಂತ್ರಿ ಸ್ಥಾನ ನೀಡುವುದು ಸೇರಿದಂತೆ, ಜೆಡಿಯುಗೆ ಲೋಕಸಭಾ ಸ್ಥಾನಗಳ ಕಡಿತಗೊಳಿಸುವ ವಿಚಾರ ಒಳಗೊಂಡಿದೆ. 2019 ರಲ್ಲಿ ಜೆಡಿಯು 17 ರಲ್ಲಿ ಸ್ಪರ್ಧಿಸಿ, 16 ಸ್ಥಾನಗಳನ್ನು ಗೆದ್ದಿತು.

ನಿತೀಶ್ ಅವರ ಬಿಜೆಪಿ ಜತೆಗೆ ಮರು ಹೊಂದಾಣಿಕೆ ಮಾಡಿಕೊಳ್ಳುತ್ತವೆ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ, ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿಯವರ “ರಾಜಕೀಯದಲ್ಲಿ ಬಾಗಿಲುಗಳು ಶಾಶ್ವತವಾಗಿ ಮುಚ್ಚಲ್ಪಟ್ಟಿಲ್ಲ” ಎಂಬ ಹೇಳಿಕೆಯ ನಂತರ ಈ ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ಬಂದಿದೆ.

ನಿತೀಶ್ ಕುಮಾರ್ ಅವರ ಬಿಜೆಪಿ ಘರ್ ವಾಪ್ಸಿಯು ಬಿಹಾರದ ರಾಜಕೀಯದಲ್ಲಿ ಮಿಶ್ರ ಪ್ರತಿಕ್ರಿಯೆ ಕೇಳಿಬರುತ್ತಿದೆ. ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ. ಕಳೆದ ತಿಂಗಳು ನಿತೀಶ್ರಿಂದ ಜೆಡಿಯು ಮುಖ್ಯಸ್ಥ ಸದ್ಥಾನದಿಂದ ಪದಚ್ಯುತಗೊಂಡ ಲಾಲನ್ ಸಿಂಗ್, ಆರ್‌ಜೆಡಿ ಕೈಬಿಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ, ಆದರೆ ಸಂಜಯ್ ಝಾ ಮತ್ತು ಅಶೋಕ್ ಚೌಧರಿ ನೇತೃತ್ವದ ಗುಂಪು ಬಿಜೆಪಿಯೊಂದಿಗೆ ಮೈತ್ರಿಗೆ ಒತ್ತಾಯಿಸುತ್ತಿದೆ.

ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮತ್ತು ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ – ಸದ್ಯಕ್ಕೆ ಜೆಡಿಯು ಮಿತ್ರ ಮತ್ತು ರಾಜ್ಯ ಸರ್ಕಾರದ ಭಾಗವಾಗಿದೆ. ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಆ ಒಪ್ಪಂದವನ್ನು ಮಾಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಇಂಡಿಯಾ ಬಣವು ಭರವಸೆ ಕಳೆದುಕೊಂಡಿಲ್ಲ. ಸಾರ್ವಜನಿಕವಾಗಿಯೂ ಯಾವುದೇ ಹೇಳಿಕೆ ನೀಡಿಲ್ಲ. ‘ನಿತೀಶ್ ಕುಮಾರ್ ಅವರು ಮೈತ್ರಿಯೊಂದಿಗೆ ಉಳಿಯುತ್ತಾರೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಅವರು ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಲು ನಿರ್ಧರಿಸಿದ್ದಾರೆ ಮತ್ತು ನಾವು ಅವರನ್ನು ನಂಬುತ್ತೇವೆ’ ಎಂದು ಬಿಹಾರದ ಕಾಂಗ್ರೆಸ್ ನಾಯಕ ಪ್ರೇಮ್ ಚಂದ್ರ ಮಿಶ್ರಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರ್‌ಜೆಡಿ ಮುಖಂಡರೂ ಕೂಡ ಇನ್ನೂ ಆಶಾವಾದ ಇಟ್ಟುಕೊಂಡಿದ್ದಾರೆ, ‘ಮೈತ್ರಿ ಮಾತುಕತೆಯು ಬಿಜೆಪಿ ಹೆದರಿರುವುದನ್ನು ಪ್ರತಿಬಿಂಬಿಸುತ್ತದೆ’ ಎಂದು ಪಕ್ಷದ ವಕ್ತಾರ ಶಕ್ತಿ ಯಾದವ್ ಹೇಳಿದರು.

ಇದನ್ನೂ ಓದಿ; ಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...