Homeಮುಖಪುಟಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

ಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ‘ಮಹಾ ಘಟಬಂಧನ್’ ತೊರೆಯುವುದು ಖಚಿತವಾಗಿದ್ದು, ಬಿಜೆಪಿ ಜತೆ ಸೇರಿ ಅವರು ಇದೆ ಭಾನುವಾರ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್ ಮುಖ್ಯಮಂತ್ರಿಯಾದರೆ, ಬಿಹಾರ ಬಿಜೆಪಿ ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ಪಡೆಯುತ್ತದೆ ಎನ್ನಲಾಗಿದ್ದು, 2020ರ ಚುನಾವಣೆಯ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.

ಈ ಸಮಯದಲ್ಲಿ ನಿತೀಶ್ ಕುಮಾರ್ ವಿಧಾನಸಭೆ ವಿಸರ್ಜಿಸಿ, ಮತ್ತೆ ಚುನಾವಣೆಗೆ ಹೋಗುವುದಿಲ್ಲ ಎಂದು ತಿಳಿದುಬಂದಿದ್ದು, ಮುಂದಿನ ವರ್ಷ ಬಿಹಾರ ವಿಧಾನಸಭೆಗೆ ಮತದಾನ ನಡೆಯಲಿದೆ. ಆದ್ದರಿಂದ, ಬಿಜೆಪಿ-ಜೆಡಿಯು ಪಕ್ಷಗಳು ವಿಧಾನಸಭೆ ವಿಸರ್ಜಿಸುವ ಆತುರದಲ್ಲಿಲ್ಲ. ಆದರೆ, ಉಭಯ ಪಕ್ಷಗಳ ಚಿತ್ತ ಈಗ ಲೋಕಸಭೆ ಚುನಾವಣೆ ಮೇಲಿದೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಜನವರಿ 28ರವರೆಗೆ ನಿಗದಿಯಾಗಿದ್ದ ಸಾರ್ವಜನಿಕ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು 2022 ರಲ್ಲಿ ಬಿಜೆಪಿಗೆ ಕೈಕೊಟ್ಟು ಮಹಾ ಘಟಬಂಧನ್ ಕಡೆಗೆ ಜಿಗಿದಿದ್ದರು. ಈಗ ಮತ್ತೊಮ್ಮೆ ಬಿಜೆಪಿ ಸೇರಲು ಮುಂದಾಗಿದ್ದಾರೆ. ಆ ಮೂಲಕ ತಮ್ಮ ‘ಪಲ್ಟು ಕುಮಾರ್’ ಅಡ್ಡಹೆಸರನ್ನು ಮರುಪಡೆಯಲು ಸಜ್ಜಾಗಿದ್ದಾರೆ.

ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮರಳುವುದಕ್ಕೆ ಬಿಜೆಪಿ ಹಲವು ಷರತ್ತುಗಳನ್ನು ವಿಧಿಸಿದೆ ಎನ್ನಲಾಗುತ್ತಿದೆ. ವಿಧಾನಸಭೆ ಸ್ಪೀಕರ್ ಯಾರಾಗಬೇಕು ಎಂಬುದರಿಂದ ಹಿಡಿದು, ಕ್ಯಾಬಿನೆಟ್ ಮರು-ವಿಂಗಡಣೆಯನ್ನು ಒಳಗೊಂಡಿರುತ್ತದೆ. ಬಿಜೆಪಿ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರತಿ ನಾಲ್ಕು ಶಾಸಕರಿಗೆ ಒಂದು ಮಂತ್ರಿ ಸ್ಥಾನ ನೀಡುವುದು ಸೇರಿದಂತೆ, ಜೆಡಿಯುಗೆ ಲೋಕಸಭಾ ಸ್ಥಾನಗಳ ಕಡಿತಗೊಳಿಸುವ ವಿಚಾರ ಒಳಗೊಂಡಿದೆ. 2019 ರಲ್ಲಿ ಜೆಡಿಯು 17 ರಲ್ಲಿ ಸ್ಪರ್ಧಿಸಿ, 16 ಸ್ಥಾನಗಳನ್ನು ಗೆದ್ದಿತು.

ನಿತೀಶ್ ಅವರ ಬಿಜೆಪಿ ಜತೆಗೆ ಮರು ಹೊಂದಾಣಿಕೆ ಮಾಡಿಕೊಳ್ಳುತ್ತವೆ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ, ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿಯವರ “ರಾಜಕೀಯದಲ್ಲಿ ಬಾಗಿಲುಗಳು ಶಾಶ್ವತವಾಗಿ ಮುಚ್ಚಲ್ಪಟ್ಟಿಲ್ಲ” ಎಂಬ ಹೇಳಿಕೆಯ ನಂತರ ಈ ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ಬಂದಿದೆ.

ನಿತೀಶ್ ಕುಮಾರ್ ಅವರ ಬಿಜೆಪಿ ಘರ್ ವಾಪ್ಸಿಯು ಬಿಹಾರದ ರಾಜಕೀಯದಲ್ಲಿ ಮಿಶ್ರ ಪ್ರತಿಕ್ರಿಯೆ ಕೇಳಿಬರುತ್ತಿದೆ. ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ. ಕಳೆದ ತಿಂಗಳು ನಿತೀಶ್ರಿಂದ ಜೆಡಿಯು ಮುಖ್ಯಸ್ಥ ಸದ್ಥಾನದಿಂದ ಪದಚ್ಯುತಗೊಂಡ ಲಾಲನ್ ಸಿಂಗ್, ಆರ್‌ಜೆಡಿ ಕೈಬಿಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ, ಆದರೆ ಸಂಜಯ್ ಝಾ ಮತ್ತು ಅಶೋಕ್ ಚೌಧರಿ ನೇತೃತ್ವದ ಗುಂಪು ಬಿಜೆಪಿಯೊಂದಿಗೆ ಮೈತ್ರಿಗೆ ಒತ್ತಾಯಿಸುತ್ತಿದೆ.

ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮತ್ತು ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ – ಸದ್ಯಕ್ಕೆ ಜೆಡಿಯು ಮಿತ್ರ ಮತ್ತು ರಾಜ್ಯ ಸರ್ಕಾರದ ಭಾಗವಾಗಿದೆ. ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಆ ಒಪ್ಪಂದವನ್ನು ಮಾಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಇಂಡಿಯಾ ಬಣವು ಭರವಸೆ ಕಳೆದುಕೊಂಡಿಲ್ಲ. ಸಾರ್ವಜನಿಕವಾಗಿಯೂ ಯಾವುದೇ ಹೇಳಿಕೆ ನೀಡಿಲ್ಲ. ‘ನಿತೀಶ್ ಕುಮಾರ್ ಅವರು ಮೈತ್ರಿಯೊಂದಿಗೆ ಉಳಿಯುತ್ತಾರೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಅವರು ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಲು ನಿರ್ಧರಿಸಿದ್ದಾರೆ ಮತ್ತು ನಾವು ಅವರನ್ನು ನಂಬುತ್ತೇವೆ’ ಎಂದು ಬಿಹಾರದ ಕಾಂಗ್ರೆಸ್ ನಾಯಕ ಪ್ರೇಮ್ ಚಂದ್ರ ಮಿಶ್ರಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರ್‌ಜೆಡಿ ಮುಖಂಡರೂ ಕೂಡ ಇನ್ನೂ ಆಶಾವಾದ ಇಟ್ಟುಕೊಂಡಿದ್ದಾರೆ, ‘ಮೈತ್ರಿ ಮಾತುಕತೆಯು ಬಿಜೆಪಿ ಹೆದರಿರುವುದನ್ನು ಪ್ರತಿಬಿಂಬಿಸುತ್ತದೆ’ ಎಂದು ಪಕ್ಷದ ವಕ್ತಾರ ಶಕ್ತಿ ಯಾದವ್ ಹೇಳಿದರು.

ಇದನ್ನೂ ಓದಿ; ಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...