Homeಮುಖಪುಟಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

ಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ‘ಮಹಾ ಘಟಬಂಧನ್’ ತೊರೆಯುವುದು ಖಚಿತವಾಗಿದ್ದು, ಬಿಜೆಪಿ ಜತೆ ಸೇರಿ ಅವರು ಇದೆ ಭಾನುವಾರ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್ ಮುಖ್ಯಮಂತ್ರಿಯಾದರೆ, ಬಿಹಾರ ಬಿಜೆಪಿ ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ಪಡೆಯುತ್ತದೆ ಎನ್ನಲಾಗಿದ್ದು, 2020ರ ಚುನಾವಣೆಯ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.

ಈ ಸಮಯದಲ್ಲಿ ನಿತೀಶ್ ಕುಮಾರ್ ವಿಧಾನಸಭೆ ವಿಸರ್ಜಿಸಿ, ಮತ್ತೆ ಚುನಾವಣೆಗೆ ಹೋಗುವುದಿಲ್ಲ ಎಂದು ತಿಳಿದುಬಂದಿದ್ದು, ಮುಂದಿನ ವರ್ಷ ಬಿಹಾರ ವಿಧಾನಸಭೆಗೆ ಮತದಾನ ನಡೆಯಲಿದೆ. ಆದ್ದರಿಂದ, ಬಿಜೆಪಿ-ಜೆಡಿಯು ಪಕ್ಷಗಳು ವಿಧಾನಸಭೆ ವಿಸರ್ಜಿಸುವ ಆತುರದಲ್ಲಿಲ್ಲ. ಆದರೆ, ಉಭಯ ಪಕ್ಷಗಳ ಚಿತ್ತ ಈಗ ಲೋಕಸಭೆ ಚುನಾವಣೆ ಮೇಲಿದೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಜನವರಿ 28ರವರೆಗೆ ನಿಗದಿಯಾಗಿದ್ದ ಸಾರ್ವಜನಿಕ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು 2022 ರಲ್ಲಿ ಬಿಜೆಪಿಗೆ ಕೈಕೊಟ್ಟು ಮಹಾ ಘಟಬಂಧನ್ ಕಡೆಗೆ ಜಿಗಿದಿದ್ದರು. ಈಗ ಮತ್ತೊಮ್ಮೆ ಬಿಜೆಪಿ ಸೇರಲು ಮುಂದಾಗಿದ್ದಾರೆ. ಆ ಮೂಲಕ ತಮ್ಮ ‘ಪಲ್ಟು ಕುಮಾರ್’ ಅಡ್ಡಹೆಸರನ್ನು ಮರುಪಡೆಯಲು ಸಜ್ಜಾಗಿದ್ದಾರೆ.

ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮರಳುವುದಕ್ಕೆ ಬಿಜೆಪಿ ಹಲವು ಷರತ್ತುಗಳನ್ನು ವಿಧಿಸಿದೆ ಎನ್ನಲಾಗುತ್ತಿದೆ. ವಿಧಾನಸಭೆ ಸ್ಪೀಕರ್ ಯಾರಾಗಬೇಕು ಎಂಬುದರಿಂದ ಹಿಡಿದು, ಕ್ಯಾಬಿನೆಟ್ ಮರು-ವಿಂಗಡಣೆಯನ್ನು ಒಳಗೊಂಡಿರುತ್ತದೆ. ಬಿಜೆಪಿ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರತಿ ನಾಲ್ಕು ಶಾಸಕರಿಗೆ ಒಂದು ಮಂತ್ರಿ ಸ್ಥಾನ ನೀಡುವುದು ಸೇರಿದಂತೆ, ಜೆಡಿಯುಗೆ ಲೋಕಸಭಾ ಸ್ಥಾನಗಳ ಕಡಿತಗೊಳಿಸುವ ವಿಚಾರ ಒಳಗೊಂಡಿದೆ. 2019 ರಲ್ಲಿ ಜೆಡಿಯು 17 ರಲ್ಲಿ ಸ್ಪರ್ಧಿಸಿ, 16 ಸ್ಥಾನಗಳನ್ನು ಗೆದ್ದಿತು.

ನಿತೀಶ್ ಅವರ ಬಿಜೆಪಿ ಜತೆಗೆ ಮರು ಹೊಂದಾಣಿಕೆ ಮಾಡಿಕೊಳ್ಳುತ್ತವೆ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ, ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿಯವರ “ರಾಜಕೀಯದಲ್ಲಿ ಬಾಗಿಲುಗಳು ಶಾಶ್ವತವಾಗಿ ಮುಚ್ಚಲ್ಪಟ್ಟಿಲ್ಲ” ಎಂಬ ಹೇಳಿಕೆಯ ನಂತರ ಈ ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ಬಂದಿದೆ.

ನಿತೀಶ್ ಕುಮಾರ್ ಅವರ ಬಿಜೆಪಿ ಘರ್ ವಾಪ್ಸಿಯು ಬಿಹಾರದ ರಾಜಕೀಯದಲ್ಲಿ ಮಿಶ್ರ ಪ್ರತಿಕ್ರಿಯೆ ಕೇಳಿಬರುತ್ತಿದೆ. ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ. ಕಳೆದ ತಿಂಗಳು ನಿತೀಶ್ರಿಂದ ಜೆಡಿಯು ಮುಖ್ಯಸ್ಥ ಸದ್ಥಾನದಿಂದ ಪದಚ್ಯುತಗೊಂಡ ಲಾಲನ್ ಸಿಂಗ್, ಆರ್‌ಜೆಡಿ ಕೈಬಿಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ, ಆದರೆ ಸಂಜಯ್ ಝಾ ಮತ್ತು ಅಶೋಕ್ ಚೌಧರಿ ನೇತೃತ್ವದ ಗುಂಪು ಬಿಜೆಪಿಯೊಂದಿಗೆ ಮೈತ್ರಿಗೆ ಒತ್ತಾಯಿಸುತ್ತಿದೆ.

ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮತ್ತು ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ – ಸದ್ಯಕ್ಕೆ ಜೆಡಿಯು ಮಿತ್ರ ಮತ್ತು ರಾಜ್ಯ ಸರ್ಕಾರದ ಭಾಗವಾಗಿದೆ. ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಆ ಒಪ್ಪಂದವನ್ನು ಮಾಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಇಂಡಿಯಾ ಬಣವು ಭರವಸೆ ಕಳೆದುಕೊಂಡಿಲ್ಲ. ಸಾರ್ವಜನಿಕವಾಗಿಯೂ ಯಾವುದೇ ಹೇಳಿಕೆ ನೀಡಿಲ್ಲ. ‘ನಿತೀಶ್ ಕುಮಾರ್ ಅವರು ಮೈತ್ರಿಯೊಂದಿಗೆ ಉಳಿಯುತ್ತಾರೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಅವರು ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಲು ನಿರ್ಧರಿಸಿದ್ದಾರೆ ಮತ್ತು ನಾವು ಅವರನ್ನು ನಂಬುತ್ತೇವೆ’ ಎಂದು ಬಿಹಾರದ ಕಾಂಗ್ರೆಸ್ ನಾಯಕ ಪ್ರೇಮ್ ಚಂದ್ರ ಮಿಶ್ರಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರ್‌ಜೆಡಿ ಮುಖಂಡರೂ ಕೂಡ ಇನ್ನೂ ಆಶಾವಾದ ಇಟ್ಟುಕೊಂಡಿದ್ದಾರೆ, ‘ಮೈತ್ರಿ ಮಾತುಕತೆಯು ಬಿಜೆಪಿ ಹೆದರಿರುವುದನ್ನು ಪ್ರತಿಬಿಂಬಿಸುತ್ತದೆ’ ಎಂದು ಪಕ್ಷದ ವಕ್ತಾರ ಶಕ್ತಿ ಯಾದವ್ ಹೇಳಿದರು.

ಇದನ್ನೂ ಓದಿ; ಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...