Homeಮುಖಪುಟಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

ಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ‘ಮಹಾ ಘಟಬಂಧನ್’ ತೊರೆಯುವುದು ಖಚಿತವಾಗಿದ್ದು, ಬಿಜೆಪಿ ಜತೆ ಸೇರಿ ಅವರು ಇದೆ ಭಾನುವಾರ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್ ಮುಖ್ಯಮಂತ್ರಿಯಾದರೆ, ಬಿಹಾರ ಬಿಜೆಪಿ ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ಪಡೆಯುತ್ತದೆ ಎನ್ನಲಾಗಿದ್ದು, 2020ರ ಚುನಾವಣೆಯ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.

ಈ ಸಮಯದಲ್ಲಿ ನಿತೀಶ್ ಕುಮಾರ್ ವಿಧಾನಸಭೆ ವಿಸರ್ಜಿಸಿ, ಮತ್ತೆ ಚುನಾವಣೆಗೆ ಹೋಗುವುದಿಲ್ಲ ಎಂದು ತಿಳಿದುಬಂದಿದ್ದು, ಮುಂದಿನ ವರ್ಷ ಬಿಹಾರ ವಿಧಾನಸಭೆಗೆ ಮತದಾನ ನಡೆಯಲಿದೆ. ಆದ್ದರಿಂದ, ಬಿಜೆಪಿ-ಜೆಡಿಯು ಪಕ್ಷಗಳು ವಿಧಾನಸಭೆ ವಿಸರ್ಜಿಸುವ ಆತುರದಲ್ಲಿಲ್ಲ. ಆದರೆ, ಉಭಯ ಪಕ್ಷಗಳ ಚಿತ್ತ ಈಗ ಲೋಕಸಭೆ ಚುನಾವಣೆ ಮೇಲಿದೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಜನವರಿ 28ರವರೆಗೆ ನಿಗದಿಯಾಗಿದ್ದ ಸಾರ್ವಜನಿಕ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು 2022 ರಲ್ಲಿ ಬಿಜೆಪಿಗೆ ಕೈಕೊಟ್ಟು ಮಹಾ ಘಟಬಂಧನ್ ಕಡೆಗೆ ಜಿಗಿದಿದ್ದರು. ಈಗ ಮತ್ತೊಮ್ಮೆ ಬಿಜೆಪಿ ಸೇರಲು ಮುಂದಾಗಿದ್ದಾರೆ. ಆ ಮೂಲಕ ತಮ್ಮ ‘ಪಲ್ಟು ಕುಮಾರ್’ ಅಡ್ಡಹೆಸರನ್ನು ಮರುಪಡೆಯಲು ಸಜ್ಜಾಗಿದ್ದಾರೆ.

ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮರಳುವುದಕ್ಕೆ ಬಿಜೆಪಿ ಹಲವು ಷರತ್ತುಗಳನ್ನು ವಿಧಿಸಿದೆ ಎನ್ನಲಾಗುತ್ತಿದೆ. ವಿಧಾನಸಭೆ ಸ್ಪೀಕರ್ ಯಾರಾಗಬೇಕು ಎಂಬುದರಿಂದ ಹಿಡಿದು, ಕ್ಯಾಬಿನೆಟ್ ಮರು-ವಿಂಗಡಣೆಯನ್ನು ಒಳಗೊಂಡಿರುತ್ತದೆ. ಬಿಜೆಪಿ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರತಿ ನಾಲ್ಕು ಶಾಸಕರಿಗೆ ಒಂದು ಮಂತ್ರಿ ಸ್ಥಾನ ನೀಡುವುದು ಸೇರಿದಂತೆ, ಜೆಡಿಯುಗೆ ಲೋಕಸಭಾ ಸ್ಥಾನಗಳ ಕಡಿತಗೊಳಿಸುವ ವಿಚಾರ ಒಳಗೊಂಡಿದೆ. 2019 ರಲ್ಲಿ ಜೆಡಿಯು 17 ರಲ್ಲಿ ಸ್ಪರ್ಧಿಸಿ, 16 ಸ್ಥಾನಗಳನ್ನು ಗೆದ್ದಿತು.

ನಿತೀಶ್ ಅವರ ಬಿಜೆಪಿ ಜತೆಗೆ ಮರು ಹೊಂದಾಣಿಕೆ ಮಾಡಿಕೊಳ್ಳುತ್ತವೆ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ, ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿಯವರ “ರಾಜಕೀಯದಲ್ಲಿ ಬಾಗಿಲುಗಳು ಶಾಶ್ವತವಾಗಿ ಮುಚ್ಚಲ್ಪಟ್ಟಿಲ್ಲ” ಎಂಬ ಹೇಳಿಕೆಯ ನಂತರ ಈ ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ಬಂದಿದೆ.

ನಿತೀಶ್ ಕುಮಾರ್ ಅವರ ಬಿಜೆಪಿ ಘರ್ ವಾಪ್ಸಿಯು ಬಿಹಾರದ ರಾಜಕೀಯದಲ್ಲಿ ಮಿಶ್ರ ಪ್ರತಿಕ್ರಿಯೆ ಕೇಳಿಬರುತ್ತಿದೆ. ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ. ಕಳೆದ ತಿಂಗಳು ನಿತೀಶ್ರಿಂದ ಜೆಡಿಯು ಮುಖ್ಯಸ್ಥ ಸದ್ಥಾನದಿಂದ ಪದಚ್ಯುತಗೊಂಡ ಲಾಲನ್ ಸಿಂಗ್, ಆರ್‌ಜೆಡಿ ಕೈಬಿಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ, ಆದರೆ ಸಂಜಯ್ ಝಾ ಮತ್ತು ಅಶೋಕ್ ಚೌಧರಿ ನೇತೃತ್ವದ ಗುಂಪು ಬಿಜೆಪಿಯೊಂದಿಗೆ ಮೈತ್ರಿಗೆ ಒತ್ತಾಯಿಸುತ್ತಿದೆ.

ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮತ್ತು ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ – ಸದ್ಯಕ್ಕೆ ಜೆಡಿಯು ಮಿತ್ರ ಮತ್ತು ರಾಜ್ಯ ಸರ್ಕಾರದ ಭಾಗವಾಗಿದೆ. ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಆ ಒಪ್ಪಂದವನ್ನು ಮಾಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಇಂಡಿಯಾ ಬಣವು ಭರವಸೆ ಕಳೆದುಕೊಂಡಿಲ್ಲ. ಸಾರ್ವಜನಿಕವಾಗಿಯೂ ಯಾವುದೇ ಹೇಳಿಕೆ ನೀಡಿಲ್ಲ. ‘ನಿತೀಶ್ ಕುಮಾರ್ ಅವರು ಮೈತ್ರಿಯೊಂದಿಗೆ ಉಳಿಯುತ್ತಾರೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಅವರು ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಲು ನಿರ್ಧರಿಸಿದ್ದಾರೆ ಮತ್ತು ನಾವು ಅವರನ್ನು ನಂಬುತ್ತೇವೆ’ ಎಂದು ಬಿಹಾರದ ಕಾಂಗ್ರೆಸ್ ನಾಯಕ ಪ್ರೇಮ್ ಚಂದ್ರ ಮಿಶ್ರಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರ್‌ಜೆಡಿ ಮುಖಂಡರೂ ಕೂಡ ಇನ್ನೂ ಆಶಾವಾದ ಇಟ್ಟುಕೊಂಡಿದ್ದಾರೆ, ‘ಮೈತ್ರಿ ಮಾತುಕತೆಯು ಬಿಜೆಪಿ ಹೆದರಿರುವುದನ್ನು ಪ್ರತಿಬಿಂಬಿಸುತ್ತದೆ’ ಎಂದು ಪಕ್ಷದ ವಕ್ತಾರ ಶಕ್ತಿ ಯಾದವ್ ಹೇಳಿದರು.

ಇದನ್ನೂ ಓದಿ; ಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...