Homeಮುಖಪುಟಬಿಹಾರ | ಅಧಿಕಾರಕ್ಕೇರಿದರೆ ಪಿಂಚಣಿ ಹೆಚ್ಚಿಸುವುದಾಗಿ ತೇಜಸ್ವಿ ಯಾದವ್ ಭರವಸೆ

ಬಿಹಾರ | ಅಧಿಕಾರಕ್ಕೇರಿದರೆ ಪಿಂಚಣಿ ಹೆಚ್ಚಿಸುವುದಾಗಿ ತೇಜಸ್ವಿ ಯಾದವ್ ಭರವಸೆ

- Advertisement -
- Advertisement -

ತಮ್ಮ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಪಾವತಿಸುವ ಮೊತ್ತವನ್ನು ಹೆಚ್ಚಿಸುವುದಾಗಿ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಹಾರ

ಹಿರಿಯ ನಾಗರಿಕರು, ವಿಧವೆಯರು ಮತ್ತು ಅಂಗವಿಕಲರಿಗೆ ನೀಡುವ ಮೊತ್ತವನ್ನು ತಿಂಗಳಿಗೆ 400 ರೂ.ನಿಂದ 1500 ರೂ.ಗೆ ಹೆಚ್ಚಿಸಲಾಗುವುದು ಎಂದು ತೇಜಸ್ವಿ ಭರವಸೆ ನೀಡಿದ್ದಾರೆ. “ವಿಧಾನಸಭಾ ಚುನಾವಣೆಯ ನಂತರ ನಾವು ಸರ್ಕಾರವನ್ನು ರಚಿಸಿದರೆ, 60 ವರ್ಷಕ್ಕಿಂತ ಮೇಲ್ಪಟ್ಟವರು ಅಥವಾ ಅಂಗವಿಕಲರು ಮತ್ತು ವಿಧವೆಯರಿಗೆ ನೀಡುವ ಸಾಮಾಜಿಕ ಭದ್ರತಾ ಯೋಜನೆಯ ಅನುದಾವನ್ನು ತಿಂಗಳಿಗೆ 1500 ರೂ. ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ತೇಜಸ್ವಿ ಯಾದವ್, ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರವು ಜನರಿಗೆ ಪಾವತಿಸುವ ಮೊತ್ತವು ಅತ್ಯಲ್ಪವಾಗಿದೆ. ಪ್ರಸ್ತುತ ರಾಜ್ಯ ಸರ್ಕಾರವು ಸಾಮಾಜಿಕ ಭದ್ರತಾ ಯೋಜನೆಗಳಡಿ ಫಲಾನುಭವಿಗಳಿಗೆ ಮಾಸಿಕ 400 ರೂ. ನೀಡುತ್ತಿದೆ ಎಂದು ಹೇಳಿದ್ದಾರೆ. ಬಿಹಾರ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಜನರಿಗೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ತೇಜಸ್ವಿ ಯಾದವ್ ಇತ್ತಿಚೆಗೆ ಹೇಳಿದ್ದರು. ಅದರ ನಂತರ ಚುನಾವಣಾ ವಿಚಾರವಾಗಿ ಜನರಿಗೆ ನೀಡುತ್ತಿರುವ ಮತ್ತೊಂದು ಭರವಸೆ ಇದಾಗಿದೆ. ಈ ಹಿಂದೆ ಜನರಿಗೆ ಏನೇನು ಭರವಸೆ ನೀಡಿದ್ದೇವೋ ಅದನ್ನು ಈಡೇರಿಸಿದ್ದೇನೆ ಎಂದು ಅವರು ಪುನರುಚ್ಚರಿಸಿದ್ದಾರೆ.

ತಮ್ಮ ಪಕ್ಷವು ಮಹಾಮೈತ್ರಿಕೂಟ ಸರ್ಕಾರದ ಭಾಗವಾಗಿದ್ದಾಗ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಜನರಿಗೆ ಉದ್ಯೋಗಗಳನ್ನು ಒದಗಿಸಿದೆ ಎಂದು ತೇಜಸ್ವಿ ಹೇಳಿಕೊಂಡಿದ್ದಾರೆ. “ನಾವು, ಮಹಾಮೈತ್ರಿ ಸರ್ಕಾರದ ಭಾಗವಾಗಿ, ಜನರಿಗೆ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ನಮ್ಮ ಭರವಸೆಯನ್ನು ಪೂರ್ತಿ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಂದಿನ ಬಾರಿ ಸರ್ಕಾರವನ್ನು ರಚಿಸಿದರೆ ಅವರ ಕುಂದುಕೊರತೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡುವ ಮೂಲಕ ಜೀವಿಕಾ ದೀದಿಗಳ ಬೆಂಬಲವನ್ನು ಗೆಲ್ಲಲು ಅವರು ಪ್ರಯತ್ನಿಸಿದ್ದಾರೆ. ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ತೇಜಸ್ವಿ, “ನಿತೀಶ್ ಅವರು ಜೀವಿಕಾ ದೀದಿಗಳನ್ನು ತಮ್ಮ ಮತದಾರರನ್ನಾಗಿ ಮಾಡಲು ಬಯಸುತ್ತಾರೆ. ಆದರೆ ನಮ್ಮ ಪಕ್ಷವು ಅವರ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...